ಅಭಿವೃದ್ಧಿ ನೋಡಿ ಆಶೀರ್ವದಿಸಿ: ಮುರುಗೇಶ
Team Udayavani, May 4, 2023, 8:41 AM IST
ಕಲಾದಗಿ: ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಸಚಿವ, ಬೀಳಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಮುರುಗೇಶ್ ನಿರಾಣಿ ಭೇಟಿ ನೀಡಿ ಮನೆ-ಮನೆಗೆ ತೆರಳಿ ಮತಯಾಚಿಸಿದರು.
ನಂತರ ಕಾರ್ಯಕರ್ತರ ಸಭೆ ಆಯೋಜಿಸಿ ತಮ್ಮ ಅಭಿವೃದ್ಧಿ ಯೋಜನೆಗಳನ್ನು ನೋಡಿ ಮತ ನೀಡಿ ಆಶೀರ್ವದಿಸುವಂತೆ ಕೋರಿದರು.
ಸೋರಕೊಪ್ಪ, ನಕ್ಕರಗುಂದಿ, ಅಂಕಲಗಿ, ಉದಗಟ್ಟಿ, ಶಾರದಾಳ ಗ್ರಾಮಕ್ಕೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಮನೆ-ಮನೆಗೆ ತೆರಳಿ ಕೇಂದ್ರ-ರಾಜ್ಯ ಸರ್ಕಾರದ ವಿವಿಧ ಜನಪರ ಯೋಜನೆಗಳ ಕುರಿತು ತಿಳಿಸಿದರು.
ಬೀಳಗಿ ಕ್ಷೇತ್ರದಲ್ಲಿ ಎಲ್ಲ ಕ್ಷೇತ್ರದಲ್ಲೂ ಸರ್ವಾಂಗೀಣ ಅಭಿವೃದ್ಧಿಯಾಗಿದ್ದು, ತಮ್ಮ ಮತ ಬಿಜೆಪಿಗೆ ಹಾಕುವ ಮೂಲಕ ಆಶೀರ್ವದಿಸಬೇಕು. ಈ ಬಾರಿ 50 ಸಾವಿರ ಮತಗಳ ಅಂತರದಿಂದ ನನ್ನ ಗೆಲುವು ನಿಶ್ಚಿತ. ಬೀಳಗಿ ಮತಕ್ಷೇತ್ರ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿಸುವ ಗುರಿ ನನ್ನದು ಎಂದರು. ಈ ವೇಳೆ ಹೂವಪ್ಪ ರಾಠೊಡ, ಬಸವರಾಜ ಖೋತ, ಕೆ.ಎಲ್. ಬಿಲಕೇರಿ, ಲಕ್ಷ್ಮಣಗೌಡ ಗೌಡರ, ಹನಮಂತ ಮರೆಮ್ಮನವರ್, ಕೆ.ಆರ್. ಶಿಲ್ಪಿ, ಬಶೆಟ್ಟಿ ಅಂಗಡಿ, ಶ್ರೀಧರ ವಾಘ್, ಗಿರೀಶ ತುಪ್ಪದ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
MUST WATCH
ಹೊಸ ಸೇರ್ಪಡೆ
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ