ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಕೈಗೆ ಕೈಜೋಡಿಸಿವೆವು ಪಾದಯಾತ್ರೆ ಮೂಲಕ ಜನರ ಬಳಿಗೆ ಹೋಗುತ್ತಿದ್ದೇವೆ

Team Udayavani, Jan 31, 2023, 6:25 PM IST

ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಜಮಖಂಡಿ: ಬಿಜೆಪಿಯವರು ಕೇವಲ ಸೈನಿಕರು, ಹಿಂದುಭಕ್ತರು ಎಂದು ಹೇಳಿಕೊಂಡು ಹಿಂದು ಮುಸ್ಲಿಂ ನಡುವೆ ಕೋಮುಗಲಭೆ ಸೃಷ್ಟಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಬಿಜೆಪಿ ರೈತರಿಗೆ ಸಾಲಮನ್ನಾ ಭರವಸೆ ನೀಡಿದ್ದನ್ನು ಮರೆತಿದೆ. ರೈತರ ಕಬ್ಬಿನ ಬೆಳೆಗೆ ಬೆಂಬಲ ಬೆಲೆ ನೀಡಿಲ್ಲ. ಸಾರ್ವಜನಿಕರಿಗೆ ಯಾವುದೇ ರಿಯಾಯತಿ ಯೋಜನೆ ಅನುಷ್ಠಾನಗೊಳಿಸಿಲ್ಲ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ಶೂರ್ಪಾಲಿ ಗ್ರಾಮದಲ್ಲಿ ಜಮಖಂಡಿ ಮತಕ್ಷೇತ್ರದ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಕೈಗೆ ಕೈ ಜೋಡಿಸಿ ಪಾದಯಾತ್ರೆ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಕೈಗೆ ಕೈಜೋಡಿಸಿವೆವು ಪಾದಯಾತ್ರೆ ಮೂಲಕ ಜನರ ಬಳಿಗೆ ಹೋಗುತ್ತಿದ್ದೇವೆ. ಬಿಜೆಪಿ ವೈಫಲ್ಯ ಜತೆಗೆ ಕಾಂಗ್ರೆಸ್‌ ಯೋಜನೆ ಸಹಿತ ಮತಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಅರಿವು ಮೂಡಿಸಲಾಗುತ್ತಿದೆ. ನನ್ನ ಶಾಸಕ ಅವಧಿಯಲ್ಲಿ ಒಂದು ಸಾವಿರ ಕೋಟಿ ಮತ್ತು ಹಿಂದಿನ ಅವ ಯಲ್ಲಿ ನಮ್ಮ ತಂದೆಯವರ ಅವಧಿಯಲ್ಲಿ 600 ಕೋಟಿ ಸೇರಿದಂತೆ ನಾಲ್ಕು ವರ್ಷ ಅವಧಿಯಲ್ಲಿ 1600 ಕೋಟಿ ಮತಕ್ಷೇತ್ರದ ಅಭಿವೃದ್ಧಿ ಅನುದಾನ ತರಲಾಗಿದೆ ಎಂದರು.

9 ಕೋಟಿ ವೆಚ್ಚದಲ್ಲಿ ಶೂರ್ಪಾಲಿ ಗ್ರಾಮದ ರಸ್ತೆ ಮಾಡಲಾಗಿದೆ. ಶುದ್ದೀಕರಣ ನೀರಿನ ಘಟಕ ನಿರ್ಮಿಸಲಾಗಿದೆ. ವಿದ್ಯುತ್‌ 110 ಕೆವಿ ಕಾಮಗಾರಿ 1.40 ಕೋಟಿ ವೆಚ್ಚದ ಟೆಂಡರ್‌ ಕರೆಯಲಾಗಿದೆ. ಮುಂದಿನ ದಿನದಲ್ಲಿ ನಮ್ಮ ಸರಕಾರ ಅ ಕಾರಕ್ಕೆ ಬಂದರೇ ಪತ್ರಿಮನೆಗೆ ಉಚಿತ 200 ಯುನಿಟ್‌ ವಿದ್ಯುತ್‌ ನೀಡಲಾಗುವದು.

ಮನೆ ಯಜಮಾನಿಗೆ ಮಾಸಿಕ 2 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತದೆ. 10 ಕೆ.ಜಿ ಅಕ್ಕಿ ನೀಡಲಾಗುತ್ತದೆ. ಅಂದಿನ ಅವಧಿಯಲ್ಲಿ 165 ಭರವಸೆಯಲ್ಲಿ 158 ಭರವಸೆ ಕಾಂಗ್ರೆಸ್‌ ಈಡೇರಿಸಿದೆ. ಶಾಲಾಮಕ್ಕಳಿಗೆ ಚಾಕ್‌ಪೀಸ್‌ ಖರೀದಿಸಲು ಸರಕಾರದಲ್ಲಿ ಅನುದಾನವಿಲ್ಲ. ಕಾಂಗ್ರೆಸ್‌ ಸರಕಾರ ಶಿಕ್ಷಣ ಕ್ಷೇತ್ರಕ್ಕೆ, ವಿದ್ಯಾರ್ಥಿ ವೇತನಕ್ಕೆ 75 ಸಾವಿರ ಕೋಟಿ ಖರ್ಚು ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಬಿಜೆಪಿ ಅನ್ಯಾಯ ಮಾಡುತ್ತಿದೆ. ಪಂಚಮಸಾಲಿ. ಮರಾಠಾ ಸಮಾಜಕ್ಕೆ ಮೀಸಲಾತಿ ನೀಡುತ್ತಿಲ್ಲ.

ನ್ಯಾಯವಾದಿ ಎನ್‌.ಎಸ್‌.ದೇವರವರ ಮಾತನಾಡಿದರು. ವೇದಿಕೆಯಲ್ಲಿ ಎನ್‌ .ಎ.ಅಧ್ಯಾಪಕ, ಶ್ಯಾಮರಾವ ಘಾಟಗೆ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವರ್ಧಮಾನ ನ್ಯಾಮಗೌಡ, ಜಿಲ್ಲಾ ಕಿಸಾನ ಉಪಾಧ್ಯಕ್ಷ ಪ್ರಕಾಶ ಕನ್ನಬೂರ, ಅಭಯಕುಮಾರ ನಾಂದ್ರೇಕರ, ಅನ್ವರ ಮೋಮಿನ, ಭೀಮಶಿ ನಡುವಿನಮನಿ, ಬಸವರಾಜ ನ್ಯಾಮಗೌಡ, ಭಾಸ್ಕರ ಬಡಿಗೇರ, ಎ.ಆರ್‌.ಶಿಂಧೆ, ಈರಪ್ಪ ಕರಬಸನ್ನವರ, ಅರ್ಜುನ ದಳವಾಯಿ, ಸಿದ್ದು ಮೀಸಿ, ಈಶ್ವರ ವಾಳೆನ್ನವರ, ರಫೀಕ ಬಾರಿಗಡ್ಡಿ, ಭೀಮಸಿ ಕದಂ, ರೆಹಮಾನ ಜಮಖಂಡಿ, ಪರಮಾನಂದ ಗವರೋಜಿ, ಬಸವರಾಜ ಹರಕಂಗಿ ಸಹಿತ ಹಲವರು ಇದ್ದರು.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.