ಶೈಕ್ಷಣಿಕ ರಂಗ ಹದಗೆಡಿಸಿದ ಬಿಜೆಪಿ ಸರ್ಕಾರ

ಮನಸ್ಸಿಗೆ ತೋಚಿದಂತೆ ಪಠ್ಯಕ್ರಮ ಬದಲಾವಣೆಗೆ ಶಿಫಾರಸು

Team Udayavani, Jun 7, 2022, 2:53 PM IST

17

ಬಾಗಲಕೋಟೆ: ಮಕ್ಕಳ ಭವಿಷ್ಯ ರೂಪಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್‌ ವ್ಯಕ್ತಿಗಳ ಬಗ್ಗೆ ವಾಸ್ತವದ ಚಿತ್ರಣ ಮುಂದಿಡುವ ಪಠ್ಯಕ್ರಮವನ್ನು ತಿದ್ದುಪಡಿ ಮಾಡುವ ಮೂಲಕ ರಾಜ್ಯದಲ್ಲಿ ಶೈಕ್ಷಣಿಕ ರಂಗವನ್ನೇ ಹದಗೆಡಿಸಿದ ಅಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ ಆರೋಪಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ರಂಗದಲ್ಲಿ ಜ್ಞಾನವೇ ಇಲ್ಲದವರನ್ನು ಪಠ್ಯಕ್ರಮ ಪುನರ್‌ರಚನೆ ಸಮಿ ತಿಗೆ ನೇಮಕ ಮಾಡಿದ ಪರಿಣಾಮ, ತಮ್ಮ ಮನ ಸ್ಸಿಗೆ ತೋಚಿದಂತೆ ಪಠ್ಯಕ್ರಮ ಬದಲಾವಣೆಗೆ ಶಿಫಾರಸು ಮಾಡಿದ್ದಾರೆ. ಇಂತಹ ಸಮಿತಿ ಶಿಫಾ ರಸು ಒಪ್ಪದಿರಲು ಇಡೀ ರಾಜ್ಯಾದ್ಯಂತ ಹೋರಾಟ, ಆಕ್ರೋಶ ಕೇಳಿ ಬಂದ ಬಳಿಕ ಸಮಿತಿ ವಿಸರ್ಜನೆ ಮಾಡಿದರೂ ಅದೇ ಸಮಿತಿ ಸಲ್ಲಿಸಿರುವ ವರದಿ ಜಾರಿಗೊಳಿಸಲಾಗಿದೆ. ಇದರಿಂದ ರಾಜ್ಯದ ಶಿಕ್ಷಣ ತಜ್ಞರು, ಮೇಧಾವಿಗಳು ತೀವ್ರ ಆತಂಕದಲ್ಲಿದ್ದಾರೆ ಎಂದರು.

ತಜ್ಞರ ಸಮಿತಿ ಅಂದರೆ ಅದರಲ್ಲಿ ಶಿಕ್ಷಣ ಮೇಧಾವಿಗಳು, ಹಲವು ವರ್ಷಗಳಿಂದ ಶಿಕ್ಷಣ ರಂಗದಲ್ಲಿ ಕೆಲಸ ಮಾಡಿದವರು ಇರ ಬೇಕು. ಅವರು ಸಲ್ಲಿಸುವ ವರದಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳಬೇಕು. ಬದಲಾಗಿ, ಶಿಕ್ಷಣ ರಂಗದ ಅಧ್ಯಯನವೇ ಇಲ್ಲದ, ಚಕ್ರ ತೀರ್ಥ ಎಂಬುವವರನ್ನು ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದು ಎಷ್ಟು ಸಮಂಜಸ. ಈ ಸಮಿತಿಗೆ ನೇಮಕ ಮಾಡಲು ಯಾವ ಮಾನದಂಡ ಅನುಸರಿಸಲಾಗಿದೆ ಎಂದು ಪ್ರಶ್ನಿಸಿದರು.

ಮಕ್ಕಳಿಗೆ ಈ ದೇಶದ ಮೇಧಾವಿಗಳ ಬಗ್ಗೆ ಜ್ಞಾನ ನೀಡಬೇಕು. ಆದರೆ, ಸಾಮಾನ್ಯರನ್ನು ಅಸಮಾನ್ಯರಂತೆ, ಅಸಾಮಾನ್ಯರನ್ನು ಸಾಮಾನ್ಯ ರಂತೆ ಬಿಂಬಿಸುವ ಕೆಲಸ ಬಿಜೆಪಿ ಸರ್ಕಾರ ಮಾಡು ತ್ತಿದೆ. ಚಕ್ರತೀರ್ಥ ಎಂಬಾತ, ಇಡೀ ಶೈಕ್ಷಣಿಕ ರಂಗಕ್ಕೆ ಗಬ್ಬು ತೀರ್ಥ ನೀಡಿದ್ದಾರೆ. ಹೆಡಗೆವಾರ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹುಟ್ಟು ಹಾಕಿದ್ದಾರೆ. ಆದರೆ, ಅವರಿಂದ ಈ ದೇಶಕ್ಕೆ ಏನು ಕೊಡುಗೆ ಇದೆ. ಅವರ ಹೆಸರು ಪಠ್ಯಕ್ರಮದಲ್ಲಿ ಸೇರಿಸುವ ಅಗತ್ಯವೇ ಇರಲಿಲ್ಲ. ಭಗತ್ ಸಿಂಗ್‌ ಅವರಂತಹ ವ್ಯಕ್ತಿಗಳು ಈ ದೇಶದ‌ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದಾರೆ. ಜೈಲಿನಲ್ಲಿದ್ದಾಗಲೇ 200ಕ್ಕೂ ಹೆಚ್ಚು ಪುಸ್ತಕ ಓದಿದ್ದಾರೆ. ಅಂತಹ ಮಹಾನ್‌ ನಾಯಕರ ಬಗ್ಗೆ ಪಠ್ಯಕ್ರಮ ದಲ್ಲಿ ಇರಬೇಕು. ಆಗ ಮಕ್ಕಳಲ್ಲಿ ದೇಶಾಭಿಮಾನವೂ ಬೆಳೆಯುತ್ತದೆ. ಆದರೆ, ದೇಶಕ್ಕೆ ಯಾವ ಕೊಡುಗೆಯೂ ಇಲ್ಲದ ವ್ಯಕ್ತಿಗಳನ್ನು ಪಠ್ಯಕ್ರಮ ದಲ್ಲಿ ಸೇರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕುವೆಂಪು ಅವರು ಈ ನಾಡಿನ ಮಹಾನ್‌ ಸಾಹಿತಿ. ಅವರ ಕೃತಿಗಳನ್ನು ಓದಿದವರಿಗೆ ಅರ್ಥವಾಗುತ್ತದೆ. ಈ ದೇಶಕ್ಕೆ ಸಂವಿಧಾನ ನೀಡಿದ ಮಹಾನ್‌ ನಾಯಕ ಡಾ| ಅಂಬೇಡ್ಕರ್‌ ಅವರ ಹೆಸರಿನ ಮುಂದೆ ಇದ್ದ ಸಂವಿಧಾನ ಶಿಲ್ಪಿ ಎಂಬ ಪದವೇ ತೆಗೆದು ಹಾಕಲಾಗಿದೆ. ಆ ಮೂಲಕ ಅಂಬೇಡ್ಕರ್‌ ಅವರಿಗೂ ಅವ ಮಾನ ಮಾಡಲಾಗಿದೆ ಎಂದು ಆರೋಪಿಸಿದರು.

ಪಠ್ಯಕ್ರಮದ ಕುರಿತು ಇಡೀ ರಾಜ್ಯಾದ್ಯಂತ ತೀವ್ರ ಆತಂಕ, ಚರ್ಚೆ ನಡೆಯುತ್ತಿದ್ದರೂ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಿಷ ಯವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಪಠ್ಯ ಕ್ರಮ ಪುನರ್‌ ರಚನಾ ಸಮಿತಿಯಲ್ಲಿದ್ದ ಅರವಿಂದ ಮಾಲಗತ್ತಿ, ಕೋ. ಚನ್ನಬಸಪ್ಪ ಅವರಂತಹ ಅತ್ಯು ತ್ತಮ ಸಾಹಿತಿಗಳನ್ನು ಸಮಿತಿಯಿಂದ ಕೈಬಿಡಲಾಗಿದೆ. ಆ ಮೂಲಕ ಹಿರಿಯ ಸಾಹಿತಿಗಳಿಗೆ ಅವಮಾನ ಮಾಡಲಾಗಿದೆ ಎಂದರು.

ವ್ಯರ್ಥ ಚರ್ಚೆ ಬೇಡ: ರಾಜ್ಯದಲ್ಲಿ ಸಧ್ಯ ಚಡ್ಡಿ ಸುಡುವ ಅಭಿಯಾನ ಕುರಿತು ಚರ್ಚೆ ನಡೆಯುತ್ತಿದೆ. ಇದೊಂದು ವ್ಯರ್ಥ ಚರ್ಚೆ. ನಾನು ಆರ್‌ ಎಸ್‌ಎಸ್‌ ಬಗ್ಗೆ ಟೀಕೆ ಮಾಡಲ್ಲ. ಅದೊಂದು ದೇಶದ್ರೋಹ ಸಂಘಟನೆ ಎಂದೂ ಹೇಳಲ್ಲ. ರಾಜ್ಯಕ್ಕೆ ಬೇಕಿರುವುದು ಅಭಿವೃದ್ಧಿ ಕುರಿತ ಚರ್ಚೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಚರ್ಚೆ ಅನಗತ್ಯ ಎಂದು ಹೇಳಿದರು.

ಪ್ರಾರ್ಥನಾ ಮಂದಿರಗಳ ಮೇಲಿನ ಧ್ವನಿವರ್ಧಕ ಬಂದ್‌ ಮಾಡಬೇಕು. ಇಲ್ಲದಿದ್ದರೆ ಗುಂಡು ಹಾಕುತ್ತಿದ್ದೇವೆ ಎಂದು ಬಹಿರಂಗವಾಗಿ ಪ್ರಮೋದ್ ಮುತಾಲಿಕ ಹೇಳುತ್ತಿದ್ದಾರೆ. ಗುಂಡು ಹಾರಿಸುತ್ತೇವೆ, ಕುತ್ತಿಗೆ ಕತ್ತರಿಸುತ್ತೇವೆ ಎಂದೆಲ್ಲ ಹೇಳುವವರ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು. ‌

ಮಾಜಿ ಸಚಿವ ಎಚ್‌.ವೈ. ಮೇಟಿ, ಸೇವಾದಳ ಘಟಕದ ಜಿಲ್ಲಾಧ್ಯಕ್ಷ ಎನ್‌.ಬಿ. ಗಸ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ ಹಾಗೂ ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ರಾಜು ಮನ್ನಿಕೇರಿ ಇತರರು ಉಪಸ್ಥಿತರಿದ್ದರು.

ವಾಯವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ನಿಮಿತ್ತ ಜೂ. 7ರಂದು ಸಂಜೆ 4ಕ್ಕೆ ಗದ್ದನಕೇರಿ ಕ್ರಾಸ್‌ ಬಳಿಯ ಲಡ್ಡುಮುತ್ಯಾ ದೇವಸ್ಥಾನದಲ್ಲಿ ಮತಯಾಚನೆ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಭಾಗವಹಿಸಲಿದ್ದಾರೆ. ಜಿಲ್ಲೆಯ ಶಿಕ್ಷಕ ಮತ್ತು ಪದವೀಧರ ಮತದಾರರು ಭಾಗವಹಿಸಿ, ಕಾಂಗ್ರೆಸ್‌ ಪಕ್ಷದ ಶಿಕ್ಷಕರ ಕ್ಷೇತ್ರದ ಪ್ರಕಾಶ ಹುಕ್ಕೇರಿ, ಪದವೀಧರ ಕ್ಷೇತ್ರದ ಸಂಕ ಅವರಿಗೆ ಮತ ಹಾಕಿ ಗೆಲ್ಲಿಸಬೇಕು. –ಎಚ್‌.ವೈ. ಮೇಟಿ, ಮಾಜಿ ಸಚಿವ

 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.