ಬಿಜೆಪಿಯ ಡಬಲ್‌ ಅನುಕಂಪ ಅಸ್ತ್ರ


Team Udayavani, Oct 25, 2018, 6:15 AM IST

jamakhandi-deputy-election-bjp.jpg

ಬಾಗಲಕೋಟೆ: ಜಮಖಂಡಿ ಉಪ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಹಲವು ತಂತ್ರಗಾರಿಕೆ ಅನುಸರಿಸುತ್ತಿದೆ. ಬಿಜೆಪಿ ಅಭ್ಯರ್ಥಿಯನ್ನು ಶತಾಯಗತಾಯ ಗೆಲ್ಲಿಸಲು ಎರಡೆರಡು ಅನುಕಂಪದ ಅಸ್ತ್ರ ಬಳಸುತ್ತಿದೆ.

2013 ಮತ್ತು 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿರುವ ಅನುಕಂಪ ಪಡೆಯುತ್ತ ಈವರೆಗೆ ಪ್ರಚಾರ ನಡೆಸುತ್ತಿದ್ದ ಬಿಜೆಪಿ, ಬುಧವಾರ ಮತ್ತೂಂದು ಅನುಕಂಪದ ಅಸ್ತ್ರ ಪ್ರಯೋಗಿಸಿದೆ. ಮುಂದಿನ ಚುನಾವಣೆಗೆ ಶ್ರೀಕಾಂತ ಕುಲಕರ್ಣಿ ಸ್ಪರ್ಧಿಸಲ್ಲ ಎಂದು ಘೋಷಿಸಿ ದಾಳ ಉರುಳಿಸಿದ್ದಾರೆ.

ಕಾಂಗ್ರೆಸ್‌-ಬಿಜೆಪಿ ಎರಡೂ ಪಕ್ಷಗಳು ಅನುಕಂಪವನ್ನೇ ಪ್ರಚಾರದ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ಬ್ಯಾರೇಜ್‌ ನಿರ್ಮಿಸಿ ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಸಿದ್ದು ನ್ಯಾಮಗೌಡರ ಅಕಾಲಿಕ ನಿಧನದಿಂದ ಈಗ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ನ್ಯಾಮಗೌಡರ ಪುತ್ರ ಆನಂದ ನ್ಯಾಮಗೌಡ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಪ್ರಚಾರಕ್ಕೆ ಬಂದವರೆಲ್ಲ ಸಿದ್ದು ನ್ಯಾಮಗೌಡರನ್ನು ನೆನೆದು, ಅವರ ಪುತ್ರನ ಗೆಲ್ಲಿಸಲು ಮತ ಕೇಳುತ್ತಿದ್ದಾರೆ.ಕಾಂಗ್ರೆಸ್‌ನ ಈ ಅನುಕಂಪದ ಅಸ್ತ್ರಕ್ಕೆ ಪ್ರತಿಯಾಗಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ ಕುಲಕರ್ಣಿ ಸಾರ್ವತ್ರಿಕ ಚುನಾವಣೆ ಸೋಲು ಮತ್ತು ಮುಂದಿನ ಬಾರಿ ಸ್ಫರ್ಧೆಯನ್ನೇ ಮಾಡುವುದಿಲ್ಲ, ಇದೊಂದು ಬಾರಿ ಗೆಲ್ಲಿಸಿ ಎಂದು ಮತಯಾಚನೆ ಮಾಡುತ್ತಿದ್ದಾರೆ.

ಸಂಗಮೇಶ ಬಲಕ್ಕೆ ಚಾಣಾಕ್ಷ ನಡೆ: ಉಪ ಚುನಾವಣೆಯಲ್ಲಿ ಗೆಲ್ಲಲು ತಮ್ಮ ಪಕ್ಷದಲ್ಲಿ ಭಿನ್ನಮತ ಶಮನಗೊಳಿಸುವ ಜತೆಗೆ ಮತಗಳ ವಿಭಜನೆ ತಡೆಯಲು ಪ್ರಭಾವಿ ಉದ್ಯಮಿ, ಎಂಆರ್‌ಎನ್‌ ಫೌಂಡೇಶನ್‌ ಮೂಲಕ ಕ್ಷೇತ್ರದಲ್ಲಿ ಹಿಡಿತ ಸಾಧಿಸಿರುವ ಸಂಗಮೇಶ ನಿರಾಣಿ ಬಲ ಪಡೆಯಲೂ ಬಿಜೆಪಿ ನಾಯಕರು ಚಾಣಾಕ್ಷತನ ಮೆರೆದಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕುಲಕರ್ಣಿ ಕೇವಲ 2500 ಮತಗಳಿಂದ ಪರಾಭವಗೊಂಡಿದ್ದರೆ, ಸಂಗಮೇಶ 25 ಸಾವಿರ ಮತ ಪಡೆದಿದ್ದರು. ಆ ಮತಗಳೆಲ್ಲ ಬಿಜೆಪಿಯ ಪಾರಂಪರಿಕ ಮತಗಳಾಗಿದ್ದವು. ಹೀಗಾಗಿ ಉಪ ಚುನಾವಣೆಯಲ್ಲಿ ಸಂಗಮೇಶ ಬೆಂಬಲ ಪಡೆಯಲು ಕುಲಕರ್ಣಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂಬ ಅಸ್ತ್ರ ಪ್ರಯೋಗಿಸಿದ್ದಾರೆ ಎನ್ನಲಾಗಿದೆ.

ಸಂಗಮೇಶ ಮತ್ತು ಡಾ. ಮಹಾಬಲಶೆಟ್ಟಿ ಅವರ ಅಸಮಾಧಾನ ಪರಿಹಾರ ಸಂಧಾನ ಸಭೆಯಲ್ಲಿ, ಮುಂದಿನ ಚುನಾವಣೆಯಲ್ಲಿ ಕುಲಕರ್ಣಿ ಅವರ ಬದಲಿಗೆ ನಮಗೆ ಟಿಕೆಟ್‌ ಕೊಡಬೇಕು. ಅವರು ಸ್ಪರ್ಧೆ ಮಾಡಬಾರದು ಎಂಬ ಷರತ್ತು ಇಟ್ಟಿದ್ದರು. ಅವರು ಮುಂದಿನ ಬಾರಿ ಸ್ಪರ್ಧೆ ಮಾಡದಿದ್ದರೆ ನಾವು ಈಗ ಸಂಪೂರ್ಣ ಬೆಂಬಲ ಕೊಡುವ ಜತೆಗೆ ತನು-ಮನ-ಧನದಿಂದ ಗೆಲುವಿಗೆ ಶ್ರಮಿಸುವುದಾಗಿಯೂ ಹೇಳಿದ್ದರು. ಈ ಷರತ್ತಿಗೆ ಕುಲಕರ್ಣಿ ಅವರಿಂದಲೇ ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ ಎಂಬ ಘೋಷಣೆಯನ್ನು ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಶ್ರೀಕಾಂತ ಕುಲಕರ್ಣಿ ಅವರಿಗೆ ಕ್ಷೇತ್ರದಲ್ಲಿ ಅನುಕಂಪವಿದೆ. ಖಂಡಿತವಾಗಿ ಉಪ ಚುನಾವಣೆಯಲ್ಲಿ ಅವರು ಗೆಲ್ಲಲಿದ್ದಾರೆ. ಕಳೆದ ಬಾರಿ ಬಂಡಾಯ ಎದ್ದಿದ್ದ ಸಂಗಮೇಶ ನಿರಾಣಿ ಕೂಡ ಈಗ ನಮ್ಮ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ.
– ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ನಾನು ಎರಡು ಬಾರಿ ಅತೀ ಕಡಿಮೆ ಅಂತರದಿಂದ ಸೋತಿದ್ದೇನೆ. ಉಪ ಚುನಾವಣೆಯಲ್ಲಿ ನನಗೆ ಹಿರಿಯರು ಪಕ್ಷದ ಟಿಕೆಟ್‌ ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಈ ಬಾರಿ ಕ್ಷೇತ್ರದ ಜನರು ನನ್ನನ್ನು ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ಅಚಲವಾಗಿದೆ.
– ಶ್ರೀಕಾಂತ ಕುಲಕರ್ಣಿ, ಬಿಜೆಪಿ ಅಭ್ಯರ್ಥಿ

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.