ಅದ್ದೂರಿಯಾಗಿ ನೆರವೇರಿದ ಬ್ರಹ್ಮಾನಂದ ಪರಮಹಂಸರ 85ನೇ ಜಾತ್ರಾ ಮಹೋತ್ಸವ
Team Udayavani, Jan 1, 2023, 9:36 PM IST
ಕುಳಗೇರಿ ಕ್ರಾಸ್: ಮಲಪ್ರಭಾ ತಟದಲ್ಲಿರುವ ಸುಕ್ಷೇತ್ರ ಗೋವನಕೊಪ್ಪ ಬ್ರಹ್ಮಾನಂದ ಪರಮಹಂಸರ 85ನೇ ಜಾತ್ರಾ ಮಹೋತ್ಸವ ಬಾರಿ ವಿಜೃಂಬನೆಯಿಂದ ನೆರವೇರಿತು.
ಹರ-ಗರು ಚರಮೂರ್ತಿಗಳ ಸಾನಿಧ್ಯ ‘ಬ್ರಹ್ಮಾನಂದರ ಜೋಳಿಗೆ ದೇಶಕ್ಕೆಲ್ಲ ಹೋಳಿಗೆ’ ಎಂಬ ಭಕ್ತಿಯ ಹರ್ಷೋದ್ಗಾರ ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಹಿಗೆ ಜಾತ್ರೆಯ ವೃಭವ ಕಂಡು ಸಂತಸಪಟ್ಟ ಭಕ್ತರು ಸುಂದರವಾಗಿ ಅಲಂಕಾರವಾಗಿದ್ದ ರಥವನ್ನು ಎಳೆದು ಧನ್ಯತಾಭಾವ ಅರ್ಪಿಸಿದರು.
ನರಸಾಪೂರ ಹಿರೇಮಠದ ಮರುಳ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಜಿ ಸಾನಿದ್ಯದಲ್ಲಿ ಭೈರನಹಟ್ಟಿ ಪೂಜ್ಯ ಶಾಂತಲಿಂಗ ಸ್ವಾಮಿಜಿ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಹೊಳೆ ಆಲೂರಿನ ಯಚ್ಚರೇಶ್ವರ ಸ್ವಾಮಿಜಿ, ದೇವರ ಸಿಗೇಹಳ್ಳಿ ವೀರೇಶ್ವರ ಸ್ವಾಮಿಜಿ ಸಾನಿದ್ಯ ವಹಿಸಿದ್ದರು.
ಜಾತರೆಗೆ ಬಂದ ಭಕ್ತರು ಮಠದ ಆವರಣದಲ್ಲಿ ರಸಬೂರಿ ಬೋಜನದ ಸವಿರುಚಿ ಸವಿದರು. ರಥೋತ್ಸವದಲ್ಲಿ ಪಾಲ್ಗೊಂಡ ಭಂದುಗಳು, ಸ್ನೇಹಿತರು, ಭಕ್ತರು ಜಾತ್ರೆಗೆ ಮೆರಗು ತಂದರು.
ಜಾತ್ರೆಯ ಅಂಗವಾಗಿ ಬೈರನಹಟ್ಟಿ ಶಾಂತವೀರ ಧಾರ್ಮಿಕ ಪಾಠಶಾಲೆಯ ವಟುಗಳಿಂದ ಬ್ರಹ್ಮಾನಂದರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಧರ್ಮಸಭೆ, ಆಧ್ಯಾತ್ಮಿಕ ಪ್ರವಚನ, ಗರುಡ ಪಟ ಕಟ್ಟುವದು, ಪಲ್ಲಕ್ಕಿ ಉತ್ಸವ, ಹರಕೆ ತಿರಿಸುವದು ಹಿಗೆ ಹತ್ತು ಹಲವು ಕಾರ್ಯಕ್ರಮಗಳು ವಿಧಿ-ವಿಧಾನಗಳಿಂದ ನಡೆದವು.
ಇಳಕಲ್ಲ ಪ್ರವಚನಕಾರ ಆರ್ ಶರಣಬಸವ ಶಾಸ್ತ್ರೀಗಳು, ಕಮಿಟಿ ಅಧ್ಯಕ್ಷ ಕಿಷ್ಟಣ್ಣ ಬಿಜಾಪೂರ, ನಿವೃತ್ತ ಶಿಕ್ಷಕ ಆರ್ ಎಚ್ ಯಾವಗಲ್, ನಿಂಗನಗೌಡ ಪಾಟೀಲ್, ಹನಮಂತಗೌಡ ಪಾಟೀಲ, ಶಿವಬಸಪ್ಪ ಹೆರಕಲ್, ಮುರಳಿಧರ ಯಡನ್ನವರ, ದಾವಲ್ಸಾಬ ಹೊಸಮನಿ, ಲಕ್ಷ್ಮಣ ದೊಡಮನಿ, ಆನಂದಪ್ಪ ಗಿಡ್ನಂದಿ, ಆರ್ ಕೆ ಪಾಟೀಲ, ಸಂಗೀತಗಾರರಾದ ಬಾದಾಮಿ ಮಂಜುನಾಥ ಗವಾಯಿಗಳು, ಶಹಾಪೂರ ಸಿದ್ದಯ್ಯಸ್ವಾಮಿ ಸೇರಿದಂತೆ ಗ್ರಾಮಸ್ಥರು ಇದ್ದರು. ಶಿಕ್ಷಕ ರಾಘವೇಂದ್ರ ಕಂದಗಲ್ ಸ್ವಾಗತಿಸಿ ನೀರೂಪಿಸಿದರು, ಶಿಕ್ಷಕ ಶರಣು ಕರಕಿಕಟ್ಟಿ ವಂದಿಸಿದರು.
ಇದನ್ನೂ ಓದಿ: ಅರಭಾವಿ ಆಂಜನೇಯ, ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಕೆಎಂಎಫ್ ಅಧ್ಯಕ್ಷರ ಭೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ