ಕಳ್ಳಭಟ್ಟಿಗೆ ಕಡಿವಾಣ ಹಾಕಿ: ಜೆ.ಟಿ.ಪಾಟೀಲ


Team Udayavani, Apr 24, 2020, 1:02 PM IST

bk-tdy-2

ಬಾಗಲಕೋಟೆ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮದ್ಯದ ಅಂಗಡಿಗಳು ಬಂದ್‌ ಆಗಿವೆ. ಹೀಗಾಗಿ ಜಿಲ್ಲೆಯಲ್ಲಿ ಕಳ್ಳಭಟ್ಟಿ ಮಾರಾಟ-ಸೇವನೆ ಅವ್ಯಾಹತವಾಗಿ ನಡೆಯುತ್ತಿದೆ. ಜಿಲ್ಲಾಡಳಿತ ಇದಕ್ಕೆ ಕಡಿವಾಣ ಹಾಕಬೇಕು ಎಂದು ಬೀಳಗಿಯ ಮಾಜಿ ಶಾಸಕ, ಕಾಂಗ್ರೆಸ್‌ನ ಕೋವಿಡ್‌-19 ಟಾಸ್ಕ್ಫೋರ್ಸ್‌ ಸಮಿತಿ ಜಿಲ್ಲಾ ಅಧ್ಯಕ್ಷ ಜೆ.ಟಿ. ಪಾಟೀಲ ಒತ್ತಾಯಿಸಿದರು.

ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕಳ್ಳಭಟ್ಟಿ ಸಾರಾಯಿ ಜಮಖಂಡಿ, ಅಥಣಿಗೂ ಹೋಗುತ್ತಿದೆ. ಕೆಲವು ಸರ್ಕಾರಿ ಅಧಿಕಾರಿಗಳೇ ಇದಕ್ಕೆ ಸೊಪ್ಪು ಹಾಕುತ್ತಿದ್ದಾರೆ. ಕಡಿವಾಣ ಹಾಕದಿದ್ದರೆ ಕಳ್ಳಭಟ್ಟಿ ಸೇವನೆಯಿಂದ ಮತ್ತಷ್ಟು ಆರೋಗ್ಯ ಸಮಸ್ಯೆ ಜನರಲ್ಲಿ ಉಂಟಾಗುತ್ತದೆ ಎಂದರು.

ಸಂಕಷ್ಟದಲ್ಲಿ ಕಾಂಗ್ರೆಸ್‌ ನೆರವು: ಲಾಕ್‌ಡೌನ್‌ ದಿಂದ ಜನರು ತೀವ್ರ ಸಂಕಷ್ಟದಲ್ಲಿದ್ದು, ಕಾಂಗ್ರೆಸ್‌ ನಿಂದ ಸಾಧ್ಯವಾದಷ್ಟು ಎಲ್ಲ ವರ್ಗದ ಜನರಿಗೆ ಸ್ಪಂದಿಸುವ ಕಾರ್ಯ ಮಾಡಲಾಗಿದೆ. ಬಾದಾಮಿ ಕ್ಷೇತ್ರದಲ್ಲಿ 2.40 (ಎನ್‌-95 ಮಾಸ್ಕ್ 800) ಲಕ್ಷ ಮಾಸ್ಕ್, 300 ಕ್ವಿಂಟಲ್‌ ಫಲಾವ್‌, 21 ಸಾವಿರ ಆಹಾರಧಾನ್ಯ ಕಿಟನ್‌, 10 ಲಕ್ಷ ಮೊತ್ತದ ತರಕಾರಿ ನೀಡಿದ್ದು, ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಗೋವಾದಲ್ಲಿರುವ ಕನ್ನಡಿಗರಿಗೆ 1 ಸಾವಿರ ಆಹಾರಧಾನ್ಯ ಕಿಟ್‌ ಕಳುಹಿಸಲಾಗಿದೆ ಎಂದರು.

ಮುಧೋಳ ಕ್ಷೇತ್ರದಲ್ಲಿ 1.66 ಲಕ್ಷ ಮಾಸ್ಕ್, 1 ಲಕ್ಷ ಲೀಟರ್‌ ಸ್ಯಾನಿಟೈಜರ್‌, 242 ಟನ್‌ ತರಕಾರಿಯನ್ನು ಜನರಿಗೆ ನೀಡಲಾಗಿದೆ. ಜಮಖಂಡಿ ಕ್ಷೇತ್ರದಲ್ಲಿ 10 ಸಾವಿರ ಲೀಟರ್‌ ಸ್ಯಾನಿಟೈಜರ್‌, ಪ್ರತಿದಿನ 3ರಿಂದ 4 ಕ್ವಿಂಟಲ್‌ ತರಕಾರಿ, ಪ್ರತಿದಿನ 500 ಆಹಾರ ಕಿಟ್‌ ಹಾಗೂ 2 ಸ್ಯಾನಿಟೈಜರ್‌ ಟನಲ್‌ ನಿರ್ಮಾಣ ಮಾಡಲಾಗಿದೆ. ಬೀಳಗಿ ಕ್ಷೇತ್ರದಲ್ಲಿ 25ಸಾವಿರ ಮಾಸ್ಕ್ ನೀಡಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವೈದ್ಯರು ಸೇರಿದಂತೆ ಕೋವಿಡ್‌-19  ವಾರಿಯರ್ಸ್‌ಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಬಾಗಲಕೋಟೆ ಕ್ಷೇತ್ರದಲ್ಲಿ 8 ಸಾವಿರ ಮಾಸ್ಕ, 400 ಸ್ಯಾನಿಟೈಜರ್‌, 1200 ಆಹಾರ ಕಿಟ್‌, 600 ತರಕಾರಿ ಕಿಟ್‌, 20 ಜನರಿಗೆ ವಿವಿಧ ರೀತಿಯ ಔಷಧ ಪೂರೈಕೆ ಮಾಡಲಾಗಿದೆ. ಹುನಗುಂದ ಕ್ಷೇತ್ರದಲ್ಲಿ 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಜರ್‌, 2 ಸಾವಿರ ಫಲಾವ್‌ ಕಿಟ್‌, 2 ಸಾವಿರ ದಿನಸಿ ಕಿಟ್‌ ವಿತರಿಸಿದ್ದು, ತೇರದಾಳ ಕ್ಷೇತ್ರದಲ್ಲಿ 12 ಸಾವಿರ ಮಾಸ್ಕ್, 15 ಸಾವಿರ ಊಟದ ಕಿಟ್‌, 25 ಸಾವಿರ ಕುಟುಂಬಕ್ಕೆ ತರಕಾರಿ, 20 ಜನರಿಗೆ ಔಷಧ ವಿತರಣೆ ಮಾಡಲಾಗಿದೆ ಎಂದು ವಿವರಿಸಿದರು.

ಜಿಲ್ಲಾಡಳಿತ ತನ್ನ ಇತಿಮಿತಿಯಲ್ಲಿ ಕೆಲಸ ಮಾಡಿದೆ. ಆದರೆ, ಬಡಜನರಿಗೆ ಪಡಿತರ ಆಹಾರಧಾನ್ಯ ಹೊರತು ಪಡಿಸಿ, ಯಾವುದೇ ರೀತಿಯ ನೆರವು ಸರ್ಕಾರದಿಂದ ಬಂದಿಲ್ಲ. ಕೂಡಲೇ ದುಡಿಯುವ ವರ್ಗಕ್ಕೆ ನೆರವು ನೀಡಬೇಕು. ಕೋವಿಡ್‌-19 ವಿರುದ್ಧದಹೋರಾಟದಲ್ಲಿ ಕೆಲಸ ಮಾಡಿದ ವೈದ್ಯರು, ದಾದಿಯರು, ಆಶಾ, ಅಂಗನವಾಡಿ, ದಾನಿಗಳು ಕೆಲಸ ಮಾಡಿದ್ದಾರೆ. ಅವರಿಗೆಲ್ಲ ಕಾಂಗ್ರೆಸ್‌ನ  ಟಾಸ್ಕ್ಫೋರ್ಸ್‌ ಸ್ಪಂದಿಸುತ್ತದೆ ಎಂದರು.

ಸೆಪ್ಟೆಂಬರ್‌ವರೆಗೂ ಜಾಗೃತಿ ಅಗತ್ಯ : ಸದ್ಯ ಮೇ 3ರವರೆಗೆ ಲಾಕ್‌ಡೌನ್‌ ಮುಂದುವರಿಯಲಿದೆ. ಆದರೆ, ಕೋವಿಡ್‌-19 ಸಂಪೂರ್ಣ ನಿಯಂತ್ರಣಕ್ಕೆ ಜನರು ಬರುವ ಆಗಸ್ಟ್‌-ಸೆಪ್ಟೆಂಬರ್‌ವರೆಗೂ ಸಾಮಾಜಿಕ ಅಂತರ ಸಹಿತ ಎಲ್ಲ ರೀತಿಯ ಮುಂಜಾಗ್ರತೆ ವಹಿಸಬೇಕು. – ಜೆ.ಟಿ. ಪಾಟೀಲ, ಕಾಂಗ್ರೆಸ್‌ ಟಾಸ್ಕ್ಪೋರ್ಸ್‌ ಸಮಿತಿ ಜಿಲ್ಲಾ ಅಧ್ಯಕ್ಷ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.