ಬಿಎಸ್ವೈ ರಾಜೀನಾಮೆಗೆ ಅತಿಯಾದ ಭ್ರಷ್ಟಾಚಾರ ಕಾರಣ : ಮಾಜಿ ಸಿಎಂ ಸಿದ್ದರಾಮಯ್ಯ
Team Udayavani, Jul 26, 2021, 8:28 PM IST
ಬಾಗಲಕೋಟೆ : ಯಡಿಯೂರಪ್ಪ ಅವರ ರಾಜೀನಾಮೆಗೆ ಅತಿಯಾದ ಭ್ರಷ್ಟಾಚಾರ ಹಾಗೂ ಹೆಚ್ಚು ವಯಸ್ಸಾಗಿರುವುದೇ ಕಾರಣ ಎಂದು ಮಾಜಿ ಸಿಎಂ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಬಾದಾಮಿ ತಾಲೂಕಿನ ಮಲಪ್ರಭಾ ನದಿ ಪ್ರವಾಹ ಚೋಳಚಗುಡ್ಡ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು. ಯಡಿಯೂರಪ್ಪ ಅವರದ್ದು ಭ್ರಷ್ಟ ಸರ್ಕಾರ ಎಂದು ಕೇಂದ್ರಕ್ಕೂ ಗೊತ್ತಿತ್ತು. ಇಡೀ ದೇಶದ ಜನರಿಗೂ ಇದು ತಿಳಿದಿತ್ತು. ನಾವು ಶೇ.30ರಷ್ಟು ಭ್ರಷ್ಟ ಸರ್ಕಾರ ಅಂತ ಕರೆಯುತ್ತಿದ್ದೇವು. ಎಲ್ಲ ಯೋಜನೆಗಳಲ್ಲೂ ಶೇ.30 ರಷ್ಟು ವಸೂಲಿ ಮಾಡುತ್ತಿದ್ದು. ಬಹುಶಃ ರಾಜೀನಾಮೆಗೆ ಇದುವೇ ಕಾರಣ ಆಗಿರಬಹುದು ಎಂದು ಹೇಳಿದರು.
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುತ್ತದೆ ಎಂದು ನನಗೆ ಅನಿಸುತ್ತಿಲ್ಲ. ಈ ಬಗ್ಗೆ ನಾನು ವಿಚಾರವೂ ಮಾಡಿಲ್ಲ ಎಂದರು.
ಕಾರ್ಗಿಲ್ ವೀರಯೋಧನಿಗೆ ಗೌರವ :
ಕಾರ್ಗಿಲ್ ಯುದ್ಧದಲ್ಲಿ ಮೊದಲ ವೀರಮರಣ ಅಪ್ಪಿದ ಬಾದಾಮಿ ತಾಲೂಕು ಚೋಳಚಗುಡ್ಡ ಗ್ರಾಮದ ವೀರಯೋಧ ಶಿವಬಸಯ್ಯ ಕುಲಕರ್ಣಿ ಅವರ ಸ್ಮಾರಕಕ್ಕೆ ಮಾರ್ಲಾಪಣೆ ಮಾಡಿ ಗೌರವ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಯರಡಾಲ ಗ್ರಾಮ; ಇಲ್ಲಿ ಮೂಲ ಸೌಕರ್ಯಗಳದ್ದೇ ಕೊರತೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?