ಬಿಟಿಡಿಎ ಕಚೇರಿ; ಮಧ್ಯವರ್ತಿಗಳ ಹಾವಳಿ ತಪ್ಪಿಸಿ


Team Udayavani, Aug 2, 2019, 2:07 PM IST

bk-tdy-3

ಬಾಗಲಕೋಟೆ: ಬಿಟಿಡಿಎ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಡಾ| ವೀರಣ್ಣ ಚರಂತಿಮಠ ಮಾತನಾಡಿದರು.

ಬಾಗಲಕೋಟೆ: ನಗರದ ಸಂತ್ರಸ್ತರಿಗಾಗಿ ಸ್ಥಾಪನೆ ಗೊಂಡಿರುವುದು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ. ಅವರ ಕೆಲಸಗಳು ಸರಳವಾಗಿ ಆಗಬೇಕು. ಇಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ ಮೀರಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಶಾಸಕ ಡಾ|ವೀರಣ್ಣ ಚರಂತಿಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ ಸಭಾ ಭವನದಲ್ಲಿ ಗುರುವಾರ ಸಂಜೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ವಿನಾಕಾರಣ ಸಂತ್ರಸ್ತರು ಕಚೇರಿಗೆ ಅಲೆದಾಡುವಂತೆ ಆಗಬಾರದು. ಸಂತ್ರಸ್ತರಿಗೆ ಸರಿಯಾದ ರೀತಿ ಮಾಹಿತಿ ನೀಡಿ, ಕಚೇರಿಯ ಸಿಬ್ಬಂದಿ, ಅಧಿಕಾರಿಗಳು ಅವರೊಂದಿಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಸೂಚಿಸಿದರು.

ಕಳೆದ ಐದು ವರ್ಷದಲ್ಲಿ ಬಿಟಿಡಿಎದಿಂದ ಏನೇನು ಕೆಲಸ ಆಗಿದೆ. ಅದರಲ್ಲಿ ಆದ ಹಗರಣಗಳ ಕುರಿತು ಸಂಪೂರ್ಣ ತನಿಖೆ ಮಾಡಿಸುವುದಾಗಿ ಹೇಳಿದರು.

ಸಂತ್ರಸ್ತರಿಗಾಗಿ ಹಾಗೂ ನವನಗರದ ಅಭಿವೃದ್ಧಿಗಾಗಿ ಬಿಟಿಡಿಎ ಕಚೇರಿ ಇದ್ದು, ಇಲ್ಲಿ ಸರಿಯಾಗಿ ಕೆಲಸ ಮಾಡದವರು ತಾವಾಗಿಯೇ ಬೇರೆ ಕಡೆ ವರ್ಗ ಮಾಡಿಸಿಕೊಂಡು ಹೋಗಬಹುದು. ಕಚೇರಿಯಲ್ಲಿರುವ ಎಸ್‌ಡಿಸಿ ಮತ್ತು ಎಫ್‌ಡಿಸಿಗಳು ತಮ್ಮ ಬಳಿ ಬರುವ ಸಂತ್ರಸ್ತರೊಂದಿಗೆ ಸರಿಯಾಗಿ ವರ್ತನೆಯಿಂದ ನಡೆದುಕೊಳ್ಳಬೇಕು. ಅವರಿಗೆ ತಿಳಿ ಹೇಳಿ ಕೆಲಸ ಮಾಡಿಕೊಡಬೇಕು ಸುಮ್ಮ ಸುಮ್ಮನೆ ಕಚೇರಿಗೆ ಅಲೆದಾಡಿಸಬಾರದು ಎಂದು ಸೂಚಿಸಿದರು.

ನವನಗರದ ಯುನಿಟ್-2 ಅಭಿವೃದ್ಧಿಗಾಗಿ 550 ಕೋಟಿ ರೂ. ಟೆಂಡರ್‌ ಆದ ಹಣದ ಕೆಲಸ ಇದುವರೆಗೆ ಯಾಕೆ ಮುಗಿದಿಲ್ಲ ಎಂದು ಸಭೆಯಲ್ಲಿ ಇದ್ದ ಅಧಿಕಾರಿಗಳನ್ನು ಪ್ರಶ್ನಿಸಿದರು. ಬಿಟಿಡಿಎ ಕಚೇರಿಯಲ್ಲಿ ಎಸ್‌ಎಲ್ಓ ಹುದ್ದೆಗಳನ್ನು ಇದುವರೆಗೆ ಏಕೆ ಭರ್ತಿ ಮಾಡಿಲ್ಲ. ಆದಷ್ಟು ಶೀಘ್ರ ಭರ್ತಿ ಮಾಡಬೇಕು. ನವನಗರದಲ್ಲಿ ಅಧಿಕಾರಿಗಳು ಸಂಚಾರ ಮಾಡಬೇಕು ಎಂದು ಶಾಸಕರು ಸೂಚಿಸಿದರು. ಉಪ ವಿಭಾಗಾಧಿಕಾರಿ ಎಚ್. ಜಯಾ, ಬಿಟಿಡಿಎ ಮುಖ್ಯ ಇಂಜಿನಿಯರ್‌ ಅಶೋಕ ವಾಸನದ, ಪುನರ್‌ವಸತಿ ಅಧಿಕಾರಿ ಹುಣಸಗಿ, ಎಂಜನೀಯರ್‌ ಎಸ್‌.ಇ. ಜಾಂಬಳೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.