ಬಿಟಿಡಿಎ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ

ಯಾರಿಗಿದೆ ಚರಂತಿಮಠ ಕೃಪೆ /ಮೊದಲ ಬಾರಿಗೆ ಬೇಡಿಕೆಯಿಟ್ಟ ಶಿಂಧೆ ಕುಟುಂಬ

Team Udayavani, Sep 20, 2019, 12:26 PM IST

bk-tdy-1

ಬಾಗಲಕೋಟೆ: ರಾಜ್ಯ ಸರ್ಕಾರದ ನಿಗಮ ಮಂಡಳಿ ಸ್ಥಾನಮಾನ ಹೊಂದಿರುವ ಇಲ್ಲಿನ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸಭಾಪತಿ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಶುರುವಾಗಿದೆ. ಅಲ್ಲದೇ ಸಂಘ ಪರಿವಾರದ ಹಿರಿಯ ಮುಖಂಡ ಹಾಗೂ ಜನ ಸಂಘ ಕಾಲದಿಂದಲೂ ಪಕ್ಷದೊಂದಿಗೆ ಇರುವ ನಗರದ ಶಿಂಧೆ ಕುಟುಂಬ, ಇದೇ ಮೊದಲ ಬಾರಿಗೆ ಬಿಟಿಡಿಎ ನೇಮಕಾತಿಯಲ್ಲಿ ಪರಿಗಣಿಸಲು ಮನವಿ ಮಾಡಿದೆ.

ಹೌದು, ನೀರಾವರಿಗಾಗಿ ಇಡೀ ಏಷ್ಯಾದಲ್ಲಿ ಜಿಲ್ಲಾ ಕೇಂದ್ರವೊಂದು ಮುಳುಗಡೆಯಾಗಿರುವ ನಗರದ ಪಟ್ಟಿಯಲ್ಲಿ ಬಾಗಲಕೋಟೆಗೆ 2ನೇ ಸ್ಥಾನವಿದೆ. ಘಟಪ್ರಭಾ ನದಿಗೆ ಹೊಂದಿಕೊಂಡಿರುವ ಈ ನಗರ, ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಛಿದ್ರ ಛಿದ್ರವಾಗಿದೆ. 517 ಮೀಟರ್‌ನಿಂದ 525 ಮೀಟರ್‌ ವರೆಗೆ 11,452 ಕುಟುಂಬದ 58,285 ಜನರು, ಹಳೆಯ ನಗರದಲ್ಲಿನ ಬದುಕು ಕಳೆದುಕೊಂಡು, ನವನಗರದಲ್ಲಿ ಪುನರ್‌ವಸತಿ ಪಡೆಯುತ್ತಿದ್ದಾರೆ.

ಮುಳುಗಡೆ ಕಟ್ಟಡಗಳಿಗೆ ಪರಿಹಾರ, ಸಂತ್ರಸ್ತರಿಗೆ ಪುನರ್‌ವಸತಿ, ಅವರ ಬದುಕು ಪುನರ್‌ ನಿರ್ಮಾಣ ಮಾಡಬೇಕಾದ ಮಹತ್ವದ ಜವಾಬ್ದಾರಿ ಹೊತ್ತ ಬಿಟಿಡಿಎಗೆ ವಾರ್ಷಿಕ 1 ಸಾವಿರ ಕೋಟಿ ವರೆಗೂ ಅನುದಾನ ಬರುತ್ತದೆ. ಹೀಗಾಗಿ ಈ ಸಂಸ್ಥೆಗೆ ನುರಿತ ಹಾಗೂ ಸಂತ್ರಸ್ತರ ಸಂಕಷ್ಟ ಅರಿತು ಕೆಲಸ ಮಾಡುವ ಕ್ರಿಯಾಶೀಲರೇ ಅಧ್ಯಕ್ಷರಾಗಬೇಕು ಎಂಬುದು ಬಹುತೇಕರ ಒತ್ತಾಯ.

ಮೊದಲ ಬಾರಿಗೆ ಬೇಡಿಕೆ ಇಟ್ಟ ಶಿಂಧೆ: ದೇಶದ ನಾಗಪುರ, ಮಂಗಳೂರ ಹೊರತುಪಡಿಸಿದರೆ ಸಂಘ- ಪರಿವಾರ ಹಾಗೂ ಬಿಜೆಪಿಗೆ ಬಹುದೊಡ್ಡ ಗಟ್ಟಿತನ ಇರುವುದು ಬಾಗಲಕೋಟೆ ಯಲ್ಲಿ. ಪರಿವಾರದ ಸ್ವಯಂ ಸೇವಕರ ಸಂಘಟನೆ, ತ್ಯಾಗ, ಸೇವೆಯಿಂದ ಬಿಜೆಪಿಯೂ ಇಲ್ಲಿ ಗಟ್ಟಿಯಾಗಿ ಬೇರೂರಿದೆ. ಜನ ಸಂಘ ಕಾಲದಿಂದಲೂ (1968ರಿಂದ) ಪಕ್ಷ ಸಂಘಟನೆ ಹಾಗೂ ಪರಿವಾರದ ವ್ಯವಸ್ಥೆಯಲ್ಲಿ ದುಡಿಯುತ್ತ ಬಂದಿರುವ ಗುಂಡುರಾವ್‌ ಶಿಂಧೆ ಅವರಿಗೆ ಪಕ್ಷದಲ್ಲಿ ದೊಡ್ಡ ಹೆಸರಿದೆ.

ಸದ್ಯ ಜಿಲ್ಲೆಯಲ್ಲಿ ಸಂಘದ ಹಾಗೂ ಪಕ್ಷದ ಅತ್ಯಂತ ಹಿರಿಯ ಕಾರ್ಯಕರ್ತರು, ಇಂದೂ ಪಕ್ಷದಲ್ಲೇ ಮುಂದುವರೆದವರು ಇವರೊಬ್ಬರೇ. ಹಲವಾರು ಜನರು ಬಂದು- ಹೋದವರಿದ್ದಾರೆ. ಇನ್ನು ಈಚಿನ 20 ವರ್ಷಗಳಿಂದ ಪರಿವಾರ-ಪಕ್ಷ ವ್ಯವಸ್ಥೆಯಲ್ಲಿ ಸಕ್ರಿಯರಾದವರಿದ್ದಾರೆ. ಆದರೆ, 51 ವರ್ಷಗಳಿಂದ ಪಕ್ಷ- ಸಂಘದಲ್ಲಿದ್ದರೂ ಈ ವರೆಗೆ ಯಾವುದೇ ಅಧಿಕಾರದ ಬೇಡಿಕೆ ಇಟ್ಟಿರಲಿಲ್ಲ. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದ್ದರೂ ಅವರಿಗೂ ಯಾವುದೇ ನೇಮಕಾತಿಯಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ, ಇದೇ ಮೊದಲ ಬಾರಿಗೆ ಗುಂಡು ಶಿಂಧೆ ಅವರು, ಬಿಟಿಡಿಎ ಅಧ್ಯಕ್ಷ ಸ್ಥಾನ ಕೊಡಿ. ಸಮರ್ಥವಾಗಿ ನಿಭಾಯಿಸುತ್ತೇನೆ ಎಂಬ ಬೇಡಿಕೆ ಇಟ್ಟಿದ್ದಾರೆ.

ಈಚೆಗೆ ನಗರಕ್ಕೆ ಬಂದಿದ್ದ ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷ ನಳಿನ್‌ಕುಮಾರ ಕಟೀಲ್‌, ಉಪಮುಖ್ಯಮಂತ್ರಿ ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಗೋವಿಂದ ಕಾರಜೋಳರಿಗೆ ಲಿಖೀತ ಬೇಡಿಕೆಯ ಮನವಿ ಕೊಟ್ಟಿದ್ದಾರೆ. ಮುಖ್ಯವಾಗಿ ಬಿಟಿಡಿಎ ನೇಮಕಾತಿ ಡಾ|ವೀರಣ್ಣ ಚರಂತಿಮಠರ ವಿವೇಚನೆ ನಡೆಯಲಿದ್ದು, ಅವರಿಗೂ ಮನವಿ ಕೊಡುವುದಾಗಿ ಹೇಳಿದ್ದಾರೆ.

ಸಂತ್ರಸ್ತರ ಸಮಿತಿಯ ಒಬ್ಬರಾಗಲಿ: ಬಿಟಿಡಿಎ ಇರುವುದೇ ನಗರದ ಸಂತ್ರಸ್ತರಿಗಾಗಿ. ಪರಿಹಾರ ಕೊಡುವುದಷ್ಟೇ ಅಲ್ಲ, ಮೂಲಭೂತ ಸೌಲಭ್ಯ ಕಲ್ಪಿಸಬೇಕು. ನವನಗರ ಯೂನಿಟ್‌-1, ಯೂನಿಟ್‌-2 ನಿರ್ವಹಣೆ ಜತೆಗೆ ನವನಗರ ಯೂನಿಟ್‌-3 ಅಭಿವೃದ್ದಿಪಡಿಸಬೇಕಿದೆ.

ಇಲ್ಲಿ ನಗರದ ಸಂತ್ರಸ್ತರು, ಸಣ್ಣ-ಪುಟ್ಟ ವ್ಯಾಪಾರಸ್ಥ ಆಶಯ-ತ್ಯಾಗ ಪರಿಗಣಿಸಬೇಕು. ಹೀಗಾಗಿ ಹಲವು ವರ್ಷಗಳಿಂದ ಸಂತ್ರಸ್ತರಿಗಾಗಿ ಹೋರಾಟ ನಡೆಸುತ್ತಿರುವ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿಯ ಸಕ್ರಿಯ ಹೋರಾಟಗಾರರಲ್ಲಿ ಒಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಈ ಸಮಿತಿಯಡಿ ಹೋರಾಟ ನಡೆಸಿದ ಸಂಗಯ್ಯ ಸರಗಣಾಚಾರಿ, ಸದಾನಂದ ನಾರಾ, ಅಶೋಕ ಲಿಂಬಾವಳಿ ಅವರ ಹೆಸರು ಕೇಳಿ ಬಂದಿವೆ. ಆದರೆ, ಅಶೋಕ ಲಿಂಬಾವಳಿ ಅವರು ಅಧ್ಯಕ್ಷ ಸ್ಥಾನದ ರೇಸ್‌ ನಲ್ಲಿದ್ದಾರೆ ಎನ್ನಲಾಗಿದೆ.

ಚರಂತಿಮಠರ ಕೃಪೆ ಯಾರಿಗೆ?: ಬಿಟಿಡಿಎಗೆ ಶಾಸಕ ಡಾ|ಚರಂತಿಮಠರೇ ಅಧ್ಯಕ್ಷರಾಗಲಿ ಎಂಬ ಮನವಿ ಪಕ್ಷದ ಒಂದು ವೇದಿಕೆಯಲ್ಲಿ ಕೇಳಿ ಬಂದರೆ, ಹಿರಿಯ ಅಥವಾ ಯುವ ಕಾರ್ಯಕರ್ತರಿಗೆ ಅವಕಾಶ ದೊರೆಯಬೇಕು ಎಂಬ ಬೇಡಿಕೆ ಮತ್ತೂಂದೆಡೆ ಇದೆ. ಈ ನಿಟ್ಟಿನಲ್ಲಿ ಗುಂಡು ಶಿಂಧೆ, ಮಾಜಿ ಶಾಸಕ ಪಿ.ಎಚ್‌. ಪೂಜಾರ, ಬಿಟಿಡಿಎ ಮಾಜಿ ಅಧ್ಯಕ್ಷರಾದ ಜಿ.ಎನ್‌. ಪಾಟೀಲ, ಪ್ರಕಾಶ ತಪಶೆಟ್ಟಿ, ಸಿದ್ದಣ್ಣ ಶೆಟ್ಟರ, ರಾಜು ರೇವಣಕರ, ರಾಜು ನಾಯ್ಕರ, ಕುಮಾರ ಯಳ್ಳಿಗುತ್ತಿ ಹೀಗೆ ಹಲವರ ಹೆಸರು ಕೇಳಿ ಬರುತ್ತಿವೆ. ಶಾಸಕ ಡಾ|ಚರಂತಿಮಠರ ಕೃಪೆ ಯಾರ ಮೇಲಿರುತ್ತದೆಯೋ ಅವರೇ ನೂತನ ಅಧ್ಯಕ್ಷರಾಗಲಿದ್ದಾರೆ.

ಹಂಗಾಮಿ ಅಧ್ಯಕ್ಷರಾಗಿ ರಾಕೇಶ್‌ : ಬಿಟಿಡಿಎಗೆ ಆಡಳಿತ ಮಂಡಳಿ ಇಲ್ಲದ ಸಮಯದಲ್ಲಿ ಬಾಗಲಕೋಟೆಯ ಜಿಲ್ಲಾಧಿಕಾರಿಗಳೇ ಆಡಳಿತಾಧಿಕಾರಿಯಾಗಿ ಹಂಗಾಮಿ ಸಭಾಪತಿ ಸ್ಥಾನ ನಿರ್ವಹಿಸುತ್ತಿದ್ದರು. ಆದರೆ, ಈ ಬಾರಿ ಕೃಷ್ಣಾ ಭಾಗ್ಯ ಜಲ ನಿಗಮದ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಅಂದಹಾಗೆ ಬಿಟಿಡಿಎಗೆ ಒಂದು ಸಭಾಪತಿ ಸ್ಥಾನ ಹಾಗೂ ಮೂರು ಸದಸ್ಯ ಸ್ಥಾನಗಳಿರುತ್ತವೆ. ಇವುಗಳಿಗೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರ್ಕಾರ, ನಾಮ ನಿರ್ದೇಶಿತರನ್ನಾಗಿ ನೇಮಕ ಮಾಡುತ್ತದೆ. ಅಧ್ಯಕ್ಷ ಸ್ಥಾನಕ್ಕೆ ಕೆಲವರು ಪೈಪೋಟಿ ನಡೆಸಿದ್ದರೆ, ಸದಸ್ಯ ಸ್ಥಾನಕ್ಕೂ ಹಲವರು ಬೇಡಿಕೆ ಇಟ್ಟಿದ್ದಾರೆ.

 

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.