ರೋಗಮುಕ್ತ ಸಮಾಜ ನಿರ್ಮಿಸಿ
Team Udayavani, May 29, 2020, 6:01 AM IST
ಬಾಗಲಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯ ಆಶ್ರಯದಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್.ದೇಸಾಯಿ ಚಾಲನೆ ನೀಡಿದರು.
ಗುರುವಾರ ನಗರದ 50 ಹಾಸಿಗೆ ಆಸ್ಪತ್ರೆ ಆವರಣದಿಂದ ಜಾಗೃತಿ ಜಾಥಾ ಪ್ರಾರಂಭವಾಗಿ ಹರಣಶಿಕಾರಿ ಓಣಿ, ಬಸವೇಶ್ವರ ವೃತ್ತ, ವಿದ್ಯಾಗಿರಿ, ನವನಗರಗಳಲ್ಲಿ ಪ್ರಚಾರ ಸಂಚರಿಸಿ ಪುನಃ ಆಸ್ಪತ್ರೆಗೆ ಮುಕ್ತಾಯಗೊಂಡಿತು. ಡೆಂಘೀ ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಪ್ರಮುಖ ಎಂಬ ಧ್ಯೇಯವಾಕ್ಯದೊಂದಿಗೆ ಜಾಥಾ ನಡೆಯಿತು. ಡೆಂಘೀ ನಿಯಂತ್ರಣದಲ್ಲಿ ರೋಗ ಪ್ರಸರಣ ಅವಧಿಯ ಮುನ್ನವೆ ಸಮುದಾಯ ಸಜ್ಜುಗೊಳಿಸುವಿಕೆ ಮತ್ತು ಇತರ ಇಲಾಖೆಗಳ ಸಹಯೋಗದ ಮೂಲಕ ಡೆಂಘೀ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತು ಜಾಗೃತಿ ಮೂಡಿಸಲಾಯಿತು.
ಜಾಥಾದಲ್ಲಿ ಜಿಲ್ಲಾ ವಿಬಿಡಿ ಅಧಿಕಾರಿ ಡಾ| ಜಯಶ್ರೀ ಎಮ್ಮಿ, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಎಂ.ಎಲ್. ಹಸರಡ್ಡಿ, ಲಿಂಗರಾಜ ಹಿರೇಗೌಡರ ಹಾಗೂ 50 ಹಾಸಿಗೆ ಆಸ್ಪತ್ರೆಯ ಎಲ್ಲ ವೈದ್ಯರು ಹಾಗೂ ನಗರ ಆರೋಗ್ಯ ಕೇಂದ್ರದ ಎಲ್ಲ ಸಿಬ್ಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ