ಬಾರದ ಬಸ್; ಚುನಾವಣೆಸಿಬ್ಬಂದಿ ಪ್ರತಿಭಟನೆ
Team Udayavani, Apr 17, 2019, 11:45 AM IST
ಬಾಗಲಕೋಟೆ: ಲೋಕಸಭೆ ಚುನಾವಣೆಗೆ ನಿಯುಕ್ತಿಗೊಂಡ ಸಿಬ್ಬಂದಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸದೇ ಇರುವುದುನ್ನು ಖಂಡಿಸಿ, ಚುನಾವಣೆ ಸಿಬ್ಬಂದಿ ಪ್ರತಿಭಟನೆ ನಡೆಸಿದ ಪ್ರಸಂಗ ಮಂಗಳವಾರ ನಡೆಯಿತು.
ಇದೇ ವೇಳೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ಚುನಾವಣೆ ಸಿಬ್ಬಂದಿ ಮಧ್ಯೆ ವಾಗ್ವಾದವೂ ನಡೆಯಿತು. ಮಂಗಳವಾರ ನವನಗರದ ಬಸ್ ನಿಲ್ದಾಣಕ್ಕೆ ಬೆಳಗ್ಗೆ ಬಾಗಲಕೋಟೆಯಿಂದ ತೇರದಾಳಕ್ಕೆ ತೆರಳಲು ಚುನಾವಣಾ ಸಿಬ್ಬಂದಿ ಆಗಮಿಸಿದ್ದರು. ಈ ವೇಳೆ ಪೂರ್ವ ನಿಗದಿಯಂತೆ 5 ಬಸ್ ಮಾತ್ರ ಬಿಡಲು ಮುಂದಾದಾಗ, ಹೆಚ್ಚುವರಿ ಬಸ್ ಬಿಡುವಂತೆ ಚುನಾವಣೆ ಸಿಬ್ಬಂದಿ ಆಗ್ರಹಿಸಿದರು. ಇದಕ್ಕೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ನಿರಾಕರಿಸಿದರು. ಇದರಿಂದ ತೀವ್ರ ವಾಗ್ವಾದ ನಡೆಯಿತು. ಬಳಿಕ ಸ್ಥಳಕ್ಕೆ ತಹಶೀಲ್ದಾರ್ ಆಗಮಿಸಿ ಸಮಜಾಯಿಸಿ ನೀಡಿ ಚುನಾವಣಾ ಸಿಬ್ಬಂದಿ ಮನವೊಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು