ಕೋವಿಡ್ ತಡೆಗೆ ಉದ್ಯಮಿ ಬೋರಾ ಸಹಕಾರ ­

ಆಕ್ಸಿಜನ್‌ ಖರೀದಿಗೆ ನೆರವು! ­ಎರಡು ಆಂಬ್ಯುಲೆನ್ಸ್‌ ಸೇವೆ ಶೀಘ್ರ­!ಉದ್ಯಮಿಯ ಸೇವೆ ಬಳಸಿಕೊಳ್ಳಿ

Team Udayavani, May 29, 2021, 5:21 PM IST

page

ವರದಿ : ಶ್ರೀಶೈಲ್‌ ಕೆ. ಬಿರಾದಾರ/ಎಚ್‌.ಎಚ್‌. ಬೇಪಾರಿ

ಬಾಗಲಕೋಟೆ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಹುನಗುಂದ ಮತಕ್ಷೇತ್ರದ ಇಳಕಲ್‌ ನಗರದ ಸರ್ವ ವಿಜಯಾ ಸೇವಾ ಸಂಸ್ಥೆಯ ಗೌರವಾಧ್ಯಕ್ಷ, ಉದ್ಯಮಿ ರಾಜು ಎಂ.ಬೋರಾ ಹಲವು ರೀತಿಯ ನೆರವಿಗೆ ಮುಂದಾಗಿದ್ದಾರೆ.

ಹೌದು, ಉದ್ಯಮಿ ರಾಜು ಎಂ.ಬೋರಾ ಕೊರೊನಾ ನಿಯಂತ್ರಣಕ್ಕಾಗಿ ಕೊರೊನಾ ಸೋಂಕಿತರ ಆರೋಗ್ಯದ ಹಿತದೃಷ್ಟಿಯಿಂದ ಆಕ್ಸಿಜನ್‌ ಖರೀದಿಗೆ ನೆರವು, ಕೊರೊನಾ ವಾರಿಯರ್ಗಳಿಗೆ ದಾಸೋಹ, ಕೊರೊನಾ ಜಾಗೃತಿ, ವ್ಯಾಕ್ಸಿನ್‌ ಪಡೆದ ಪ್ರತಿಯೊಬ್ಬರಿಗೂ ಪ್ರೋತ್ಸಾಹ, ಸಂಕಷ್ಟದ ಸಂದರ್ಭದಲ್ಲೂ ಸ್ಥಳಿಯ ಪ್ರತಿಭಾವಂತರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ವೇದಿಕೆ ಕಲ್ಪಿಸಿ ಪ್ರೋತ್ಸಾಹ ನೀಡುವುದರ ಮೂಲಕ ಕೊರೊನಾ ಮುಕ್ತ ಸಮಾಜ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ಮುನ್ನೆಡೆದಿದ್ದಾರೆ.

ಆಕ್ಸಿಜನ್‌ ನೆರವು: ಎಲ್ಲೆಡೆ ಕೊರೊನಾ ಹಾವಳಿ ಹೆಚ್ಚಾಗಿದ್ದು, ಇಂತಹ ಸಂಕಷ್ಟದ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಹಿತದೃಷ್ಟಿಯಿಂದ ಉದ್ಯಮಿ ಬೋರಾ ಸಹಕಾರ ನೀಡುವ ಉದ್ದೇಶದಿಂದ ಪ್ರತಿಷ್ಠಿತ ಕುಮಾರೇಶ್ವರ ಆಸ್ಪತ್ರೆಗೆ 20 ಕೆಎಲ್‌ ಒಂದು ಕಂಟೇನರ್‌ ಆಕ್ಸಿಜನ್‌ ಖರೀದಿಗೆ 3 ಲಕ್ಷ 31 ಸಾವಿರ ರೂ. ನೆರವು ನೀಡುವುದರ ಮೂಲಕ ಸೋಂಕಿತರಿಗೆ ಅವಶ್ಯವಾಗಿರುವ ಪ್ರಾಣವಾಯು ಪೂರೈಸಿ ಮಾನವೀಯತೆ ಮೆರೆದಿದ್ದಾರೆ. ಕೊರೊನಾ ಜಾಗೃತಿ: ಉದ್ಯಮಿ ರಾಜು ಎಂ.ಬೋರಾ ನೇತೃತ್ವದ ಸರ್ವ ವಿಜಯಾ ಸೇವಾ ಸಂಸ್ಥೆಯ ಮೂಲಕ ಇಳಕಲ್‌ ನಗರದ ಪ್ರತಿಯೊಬ್ಬ ವೈದ್ಯರಿಂದಲೂ ಕೊರೊನಾ ವೈರಸ್‌ ಕುರಿತು ಸಾಕಷ್ಟು ಜಾಗೃತಿ ಮೂಡಿಸುವುದರ ಮೂಲಕ ಜನರಲ್ಲಿ ಕೊರೊನಾ ಬಗ್ಗೆ ಭಯ ಬೇಡ, ಜಾಗೃತಿ ಇರಲಿ ಎಂದು ವೈದ್ಯರ ಮೂಲಕ ಜಾಗೃತಿ ಮೂಡಿಸಿ ಅದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಯೊಬ್ಬರಿಗೆ ಪೂರೈಸುವುದರ ಮೂಲಕ ಜನರಿಗೆ ವಿಶೇಷವಾಗಿ ಕೊರೊನಾ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

ವಾರಿಯರ್ಗಳಿಗೆ ದಾಸೋಹ: ವಾರಿಯರ್ ಗಳಾದ ಪೊಲೀಸ್‌ ಸಿಬ್ಬಂದಿ ಹಾಗೂ ಹೋಮ್‌ ಗಾರ್ಡ್ಸ್‌ಗಳಿಗೆ ಉದ್ಯಮಿ ಬೋರಾ ಅವರು ದಾಸೋಹ ವ್ಯವಸ್ಥೆ ಮಾಡುವುದರ ಮೂಲಕ ಕೊರೊನಾ ನಿಯಂತ್ರಣಕ್ಕಾಗಿ ನಿರಂತರ ಶ್ರಮಿಸುತ್ತಿರುವ ಫ್ರಂಟ್‌ ಲೈನ್‌ ವಾರಿಯರ್ಗಳಿಗೆ ಹೆಗಲಾಗಿದ್ದಾರೆ. ಟ್ಯಾಲೆಂಟ್‌ ಶೋ: ಸದ್ಯ ಲಾಕ್‌ಡೌನ್‌ದಿಂದ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದೊಂದಿಗೆ ಜನರಿಗೆ ಮನೆಯಲ್ಲೇ ಇದ್ದು ಸಾಂಸ್ಕೃತಿಕ ರಸದೌತಣ ಸವಿಯಲು ವಿನೂತನ ಕಾರ್ಯಕ್ರಮ ಆರಂಭಿಸಿದ್ದಾರೆ. ಸರ್ವ ವಿಜಯ ಸೇವಾ ಸಂಸ್ಥೆಯಿಂದ ಸಾಮಾಜಿಕ ಜಾಲತಾಣಗಳ ಮೂಲಕ ಸ್ಥಳಿಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆನ್‌ ಲೈನ್‌ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಅದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಿಡುಗಡೆಗೊಳಿಸಿ ಸ್ಥಳಿಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಶೀಘ್ರ ಆಂಬ್ಯುಲೆನ್ಸ್‌ ಸೇವೆ: ವ್ಯಾಪಕವಾಗಿ ಹರಡು ತ್ತಿರುವ ಕೋವಿಡ್‌ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆ ಜಾರಿಗೆ ತಂದಿದೆ. ಆದರೂ ಕೂಡಾ ಹಲವಾರು ಜನರಿಗೆ ಆಂಬ್ಯುಲೆನ್ಸ್‌ ಸಮಸ್ಯೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಮನಗಂಡ ಉದ್ಯಮಿ ರಾಜು ಎಂ.ಬೋರಾ ಎರಡು ಆಂಬ್ಯುಲೆನ್ಸ್‌ ಖರೀದಿಗೆ ಮುಂದಾಗಿದ್ದಾರೆ. ಅದನ್ನು ಶೀಘ್ರ ಆರೋಗ್ಯ ಇಲಾಖೆಯವರಿಗೆ ನೀಡುವ ಯೋಜನೆ ಹಾಕಿಕೊಂಡು ಮತ್ತೂಂದು ಮಾನವೀಯ ಕಾರ್ಯಕ್ಕೆ ಮುಂದಾಗಿದ್ದಾರೆ .

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.