![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಬೆಂಬಲ ಬೆಲೆಗೆ ಕಡೆಲೆಕಾಳು ಖರೀದಿ: ರಾಮಚಂದ್ರನ್
ಐದು ಖರೀದಿ ಕೇಂದ್ರ ಆರಂಭ ಗರಿಷ್ಠ 10 ಕ್ವಿಂಟಲ್ ಖರೀದಿಗೆ ಅವಕಾಶ
Team Udayavani, May 17, 2019, 12:37 PM IST
![bagalkote tdy 2](https://www.udayavani.com/wp-content/uploads/2019/05/bagalkote-tdy-2-1-620x286.jpg)
ಬಾಗಲಕೋಟೆ: ನಗರದಲ್ಲಿ ನಡೆದ ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಮಾತನಾಡಿದರು.
ಬಾಗಲಕೋಟೆ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಪ್ರತಿ ಕ್ವಿಂಟಲ್ಗೆ 4650 ರೂ. ಗಳಂತೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಶಾಖೆಯಿಂದ ಎಕರೆಗೆ 3 ಕ್ವಿಂಟಲ್ನಂತೆ ಗರಿಷ್ಠ 10 ಕ್ವಿಂಟಲ್ ಖರೀದಿಸುತ್ತಿದ್ದು, ನೋಂದಣಿಗೆ ಮೇ 28 ಕೊನೆ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ತಿಳಿಸಿದರು.
ಜಿಲ್ಲಾಕಾರಿಗಳ ಸಭಾಂಗಣದಲ್ಲಿ ಈಚೆಗೆ ನಡೆದ ಜರುಗಿದ ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಎಪಿಎಂಸಿ ಪ್ರಾಂಗಣ, ಹುನಗುಂದ ಎಪಿಎಂಸಿ ಆವರಣ, ಸೂಳೇಬಾವಿ ಎಫ್ಪಿಒ ಆವರಣ, ಸಾವಳಗಿ ಪಿಕೆಪಿಎಸ್ ಆವರಣ ಹಾಗೂ ತೊದಲಬಾಗಿ ಎಫ್ಎಚ್ಸಿಎಲ್ ಆವರಣದಲ್ಲಿ ತೊಗರಿಕಾಳು ಖರೀದಿಗೆ ರೈತರಿಂದ ನೋಂದಣಿ ಮಾಡಿಕೊಳ್ಳಲಾಗುತ್ತಿದೆ ಎಂದರು.
ಕಡಳೆಕಾಳು ಖರೀದಿಗೆ ಮೇ 28 ಕೊನೆ ದಿನ. ರೈತರು ನೋಂದಣಿ ಸಮಯದಲ್ಲಿ ಕಂದಾಯ ಇಲಾಖೆಯಿಂದ ಪಹಣಿ ಪತ್ರ, ಆಧಾರ ಕಾರ್ಡ, ಬ್ಯಾಂಕ್ ಪಾಸ್ಬುಕ್ ಝರಾಕ್ಸ ಪ್ರತಿ, ಬೆಳೆ ಪ್ರಮಾಣ ಪತ್ರ ಹಾಗೂ ಮೊಬೈಲ್ ನಂಬರ ದಾಖಲೆಗಳನ್ನು ತಪ್ಪದೇ ತರಬೇಕು. ಜೂ.7 ವರೆಗೆ ಕಡಲೆಕಾಳು ಖರೀದಿ ಮಾಡಲಾಗುತ್ತಿದೆ.
ಖರೀದಿ ಪ್ರಕ್ರಿಯೆ ಬೆಳಗ್ಗೆ 8 ರಿಂದ ಸಂಜೆ 6ಗಂಟೆವರೆಗೆ ನಡೆಯಲಿದ್ದು, ಕಡಲೆಕಾಳನ್ನು ಚೆನ್ನಾಗಿ ಒಣಗಿಸಿ ತರಬೇಕು. ಖಂಡಕಾಳು, ಕ್ರಿಮಿಕೀಟಗಳಿಂದ ಕೂಡಿರಬಾರದು. ಕಸಕಡ್ಡಿಗಳನ್ನು ಸಾಣಿಗೆಯಿಂದ ಸ್ವಚ್ಛಗೊಳಿಸಿ ಎಫ್ಎಕ್ಯೂ ಗುಣಮಟ್ಟದ ಕಡಲೆಕಾಳನ್ನು ಮಾತ್ರ ಖರೀದಿ ಮಾಡಲಾಗುತ್ತಿದೆ. ಖರೀದಿ ಕೇಂದ್ರದಲ್ಲಿ ಹುಟ್ಟುವಳಿಯ ಹಸ್ತಾಂತರವನ್ನು ಸಾಗಾಣಿಕೆ ಗುತ್ತಿಗೆದಾರರು ನಿರ್ವಹಿಸುವುದು, ತೂಕದಲ್ಲಿ ಅನಧಿಕೃತವಾಗಿ ಹಮಾಲರ ಫೀ, ತೂಕದ ಫೀ, ಸೂಟು, ಕಾಳು ಕೊಡುವುದು ಮತ್ತು ಪಡೆಯುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ರೈತರಿಂದ ಹಮಾಲರಾಗಲಿ ಖರೀದಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಗಳಾಗಲಿ ಅನಧಿಕೃತ ಹಣ ಪಡೆದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಇಂತಹ ದೂರುಗಳು ಬಂದಲ್ಲಿ ಸಮಿತಿ ಕಾರ್ಯದರ್ಶಿಯವರಿಗೆ ದೂರು ಸಲ್ಲಿಸಲಾಗುವುದು ಎಂದರು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು. ಸಮಸ್ಯೆಗಳಿದ್ದಲ್ಲಿ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಆಯಾ ಎಪಿಎಂಸಿ ಕಚೇರಿಗಳಲ್ಲಿ ಮಾರ್ಕಫೆಡ್ ಅಧಿಕಾರಿಗಳ ಮೊಬೈಲ್ ನಂಬರಿಗೆ ಕರೆ ಮಾಡಬಹುದು ಎಂದರು.
ಎಫ್ಎಕ್ಯೂ ಗುಣಮಟ್ಟದ ಕಡಲೆ ಕಾಳು ಉತ್ಪನ್ನ್ನ ಪರೀಕ್ಷಿಸಲು ಅನುಭವಿ ಗ್ರೇಡರ್ಗಳನ್ನು ಕೃಷಿ ಇಲಾಖೆಯಿಂದ ನೇಮಿಸಿಕೊಳ್ಳಬೇಕು. ಖರೀದಿಸಿದ ಕಡಲೆಕಾಳನ್ನು ದಾಸ್ತಾನು ಮಾಡಲು ಅಗತ್ಯ ಗೋದಾಮುಗಳ ವ್ಯವಸ್ಥೆ ಇರುವುದಾಗಿ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕರು ತಿಳಿಸಿದರು. ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕಡಲೆಕಾಳು ಖರೀದಿಸದಂತೆ ಹಾಗೂ ಖರೀದಿ ಕೇಂದ್ರಗಳಲ್ಲಿ ಯಾವುದೇ ರೀತಿಯ ದುರುಪಯೋಗವಾಗದಂತೆ ಕ್ರಮ ವಹಿಸಲು ಪ್ರತಿ ತಾಲೂಕಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಲ್ಲದೇ ಖರೀದಿಸಿದ ಕಡಲೆಕಾಳು ಉತ್ಪನ್ನ ಕುರಿತು ಹಣ ಸಂದಾಯವನ್ನು ಸಂಬಂಧಿಸಿದ ರೈತರಿಗೆ 15 ದಿನಗಳೊಳಗಾಗಿ ಆರ್ಟಿಜಿ ಎಸ್ ಮೂಲಕ ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.
ಜಿಪಂ ಸಿಇಒ ಗಂಗೂಬಾಯಿ ಮಾನಕರ, ಆಹಾರ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಹಕಾರ ಇಲಾಖೆಯ ಉಪನಿಬಂಧಕ ಪಿ.ಎನ್. ಕಳಸನ್ನವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ ವಿಜಾಪುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.