ಬೆಂಬಲ ಬೆಲೆಗೆ ಕಡೆಲೆಕಾಳು ಖರೀದಿ: ರಾಮಚಂದ್ರನ್‌

ಐದು ಖರೀದಿ ಕೇಂದ್ರ ಆರಂಭ ಗರಿಷ್ಠ 10 ಕ್ವಿಂಟಲ್ ಖರೀದಿಗೆ ಅವಕಾಶ

Team Udayavani, May 17, 2019, 12:37 PM IST

bagalkote tdy 2

ಬಾಗಲಕೋಟೆ: ನಗರದಲ್ಲಿ ನಡೆದ ಜಿಲ್ಲಾ ಟಾಸ್ಕ್ಪೋರ್ಸ್‌ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಮಾತನಾಡಿದರು.

ಬಾಗಲಕೋಟೆ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಪ್ರತಿ ಕ್ವಿಂಟಲ್ಗೆ 4650 ರೂ. ಗಳಂತೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಶಾಖೆಯಿಂದ ಎಕರೆಗೆ 3 ಕ್ವಿಂಟಲ್ನಂತೆ ಗರಿಷ್ಠ 10 ಕ್ವಿಂಟಲ್ ಖರೀದಿಸುತ್ತಿದ್ದು, ನೋಂದಣಿಗೆ ಮೇ 28 ಕೊನೆ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ತಿಳಿಸಿದರು.

ಜಿಲ್ಲಾಕಾರಿಗಳ ಸಭಾಂಗಣದಲ್ಲಿ ಈಚೆಗೆ ನಡೆದ ಜರುಗಿದ ಜಿಲ್ಲಾ ಟಾಸ್ಕ್ಪೋರ್ಸ್‌ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಎಪಿಎಂಸಿ ಪ್ರಾಂಗಣ, ಹುನಗುಂದ ಎಪಿಎಂಸಿ ಆವರಣ, ಸೂಳೇಬಾವಿ ಎಫ್‌ಪಿಒ ಆವರಣ, ಸಾವಳಗಿ ಪಿಕೆಪಿಎಸ್‌ ಆವರಣ ಹಾಗೂ ತೊದಲಬಾಗಿ ಎಫ್‌ಎಚ್ಸಿಎಲ್ ಆವರಣದಲ್ಲಿ ತೊಗರಿಕಾಳು ಖರೀದಿಗೆ ರೈತರಿಂದ ನೋಂದಣಿ ಮಾಡಿಕೊಳ್ಳಲಾಗುತ್ತಿದೆ ಎಂದರು.

ಕಡಳೆಕಾಳು ಖರೀದಿಗೆ ಮೇ 28 ಕೊನೆ ದಿನ. ರೈತರು ನೋಂದಣಿ ಸಮಯದಲ್ಲಿ ಕಂದಾಯ ಇಲಾಖೆಯಿಂದ ಪಹಣಿ ಪತ್ರ, ಆಧಾರ ಕಾರ್ಡ, ಬ್ಯಾಂಕ್‌ ಪಾಸ್‌ಬುಕ್‌ ಝರಾಕ್ಸ ಪ್ರತಿ, ಬೆಳೆ ಪ್ರಮಾಣ ಪತ್ರ ಹಾಗೂ ಮೊಬೈಲ್ ನಂಬರ ದಾಖಲೆಗಳನ್ನು ತಪ್ಪದೇ ತರಬೇಕು. ಜೂ.7 ವರೆಗೆ ಕಡಲೆಕಾಳು ಖರೀದಿ ಮಾಡಲಾಗುತ್ತಿದೆ.

ಖರೀದಿ ಪ್ರಕ್ರಿಯೆ ಬೆಳಗ್ಗೆ 8 ರಿಂದ ಸಂಜೆ 6ಗಂಟೆವರೆಗೆ ನಡೆಯಲಿದ್ದು, ಕಡಲೆಕಾಳನ್ನು ಚೆನ್ನಾಗಿ ಒಣಗಿಸಿ ತರಬೇಕು. ಖಂಡಕಾಳು, ಕ್ರಿಮಿಕೀಟಗಳಿಂದ ಕೂಡಿರಬಾರದು. ಕಸಕಡ್ಡಿಗಳನ್ನು ಸಾಣಿಗೆಯಿಂದ ಸ್ವಚ್ಛಗೊಳಿಸಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳನ್ನು ಮಾತ್ರ ಖರೀದಿ ಮಾಡಲಾಗುತ್ತಿದೆ. ಖರೀದಿ ಕೇಂದ್ರದಲ್ಲಿ ಹುಟ್ಟುವಳಿಯ ಹಸ್ತಾಂತರವನ್ನು ಸಾಗಾಣಿಕೆ ಗುತ್ತಿಗೆದಾರರು ನಿರ್ವಹಿಸುವುದು, ತೂಕದಲ್ಲಿ ಅನಧಿಕೃತವಾಗಿ ಹಮಾಲರ ಫೀ, ತೂಕದ ಫೀ, ಸೂಟು, ಕಾಳು ಕೊಡುವುದು ಮತ್ತು ಪಡೆಯುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ರೈತರಿಂದ ಹಮಾಲರಾಗಲಿ ಖರೀದಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಗಳಾಗಲಿ ಅನಧಿಕೃತ ಹಣ ಪಡೆದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಇಂತಹ ದೂರುಗಳು ಬಂದಲ್ಲಿ ಸಮಿತಿ ಕಾರ್ಯದರ್ಶಿಯವರಿಗೆ ದೂರು ಸಲ್ಲಿಸಲಾಗುವುದು ಎಂದರು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು. ಸಮಸ್ಯೆಗಳಿದ್ದಲ್ಲಿ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್‌ರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಆಯಾ ಎಪಿಎಂಸಿ ಕಚೇರಿಗಳಲ್ಲಿ ಮಾರ್ಕಫೆಡ್‌ ಅಧಿಕಾರಿಗಳ ಮೊಬೈಲ್ ನಂಬರಿಗೆ ಕರೆ ಮಾಡಬಹುದು ಎಂದರು.

ಎಫ್‌ಎಕ್ಯೂ ಗುಣಮಟ್ಟದ ಕಡಲೆ ಕಾಳು ಉತ್ಪನ್ನ್ನ ಪರೀಕ್ಷಿಸಲು ಅನುಭವಿ ಗ್ರೇಡರ್‌ಗಳನ್ನು ಕೃಷಿ ಇಲಾಖೆಯಿಂದ ನೇಮಿಸಿಕೊಳ್ಳಬೇಕು. ಖರೀದಿಸಿದ ಕಡಲೆಕಾಳನ್ನು ದಾಸ್ತಾನು ಮಾಡಲು ಅಗತ್ಯ ಗೋದಾಮುಗಳ ವ್ಯವಸ್ಥೆ ಇರುವುದಾಗಿ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕರು ತಿಳಿಸಿದರು. ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕಡಲೆಕಾಳು ಖರೀದಿಸದಂತೆ ಹಾಗೂ ಖರೀದಿ ಕೇಂದ್ರಗಳಲ್ಲಿ ಯಾವುದೇ ರೀತಿಯ ದುರುಪಯೋಗವಾಗದಂತೆ ಕ್ರಮ ವಹಿಸಲು ಪ್ರತಿ ತಾಲೂಕಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಲ್ಲದೇ ಖರೀದಿಸಿದ ಕಡಲೆಕಾಳು ಉತ್ಪನ್ನ ಕುರಿತು ಹಣ ಸಂದಾಯವನ್ನು ಸಂಬಂಧಿಸಿದ ರೈತರಿಗೆ 15 ದಿನಗಳೊಳಗಾಗಿ ಆರ್‌ಟಿಜಿ ಎಸ್‌ ಮೂಲಕ ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.

ಜಿಪಂ ಸಿಇಒ ಗಂಗೂಬಾಯಿ ಮಾನಕರ, ಆಹಾರ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಹಕಾರ ಇಲಾಖೆಯ ಉಪನಿಬಂಧಕ ಪಿ.ಎನ್‌. ಕಳಸನ್ನವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ ವಿಜಾಪುರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.