ಬೈಪಾಸ್‌ ರಸ್ತೆ ನಿರ್ಮಾಣ: ಸುಗಮ ಸಂಚಾರಕ್ಕೆ ಕ್ಷಣಗಣನೆ


Team Udayavani, Oct 27, 2021, 2:49 PM IST

17sugarcane

ಮುಧೋಳ: ಪ್ರತಿವರ್ಷ ಕಬ್ಬು ಹಂಗಾಮಿನಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ನಗರದಲ್ಲಿ ಸಂಚರಿಸುವುದು ಸವಾಲಿನ ಕೆಲಸವಾಗಿತ್ತು. ಸದ್ಯ ಈ ಸಮಸ್ಯೆಗೆ ಪರಿಹಾರ ಕಂಡುಕೊಂಡಿರುವ ಸರ್ಕಾರ ನಗರಕ್ಕೆ ಬೈಪಾಸ್‌ ರಸ್ತೆ ನಿರ್ಮಿಸುವುದರ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.

ಬಹುದಿನದ ಕನಸು ನನಸು

ನಾಗಾಲೋಟದಲ್ಲಿ ಬೆಳೆಯುತ್ತಿರುವ ಮುಧೋಳ ನಗರಕ್ಕೆ ಬೈಪಾಸ್‌ ರಸ್ತೆ ನಿರ್ಮಾಣದ ಅಗತ್ಯತೆ ಇತ್ತು. ಇದೀಗ ಬೈಪಾಸ್‌ ರಸ್ತೆ ನಿರ್ಮಾಣದ ಕನಸು ನನಸಾಗುತ್ತಿದ್ದು, ಸಾರ್ವಜನಿಕರ ಓಡಾಡಕ್ಕೆ ಹೆಚ್ಚಿನ ಅನುಕೂಲವಾಗಲಿದೆ.

ಬಹುತೇಕ ಪೂರ್ಣ

ಜೀರಗಾಳದಿಂದ ಮಾಲಾಪುರದವರೆಗಿನ ಅಂದಾಜು 10.2 ಕಿ.ಮೀ.ರಸ್ತೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕಾಮಗಾರಿ ಮಾತ್ರ ಬಾಕಿ ಇದೆ. ಸದ್ಯ ಪೂರ್ಣಗೊಂಡಿರುವ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಕಬ್ಬು ಹಂಗಾಮಿನಲ್ಲಿ ಕಬ್ಬಿನ ಟ್ರ್ಯಾಕ್ಟರ್‌ಗಳು ಇದೇ ಮಾರ್ಗದಲ್ಲಿ ಓಡಾಡಬಹುದು. ಇದರಿಂದ ನಗರದಲ್ಲಿ ಸಂಚಾರದಟ್ಟಣೆ ಸಂಪೂರ್ಣ ಕಡಿಮೆಯಾಗಲಿದೆ.

ಸಂಚಾರ ದಟ್ಟಣೆ ಹತೋಟಿಗೆ

ಪ್ರತಿವರ್ಷ ಕಬ್ಬು ಹಂಗಾಮು ವೇಳೆಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್‌ ಗಳು ನಗರದಲ್ಲಿ ಸಂಚರಿಸುವುದರಿಂದ ನಗರದಲ್ಲಿ ಸಂಚಾರ ದಟ್ಟಣೆ ಹೇಳತೀರದಾಗಿತ್ತು. ಸಾಲು ಸಾಲು ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳ ಓಡಾಟದಿಂದ ಚಿಕ್ಕಪುಟ್ಟ ವಾಹನ ಸವಾರರು ಆತಂಕದಿಂದಲೇ ಸಂಚರಿಸುವಂತಹ ವಾತಾವರಣ ಸೃಷ್ಟಿಯಾಗಿತ್ತು. ಇದೀಗ ನಗರದ ಹೊರವಲಯದಲ್ಲಿ ನಿರ್ಮಾಣಗೊಂಡಿರುವ ಬೈಪಾಸ್‌ ರಸ್ತೆಯಿಂದ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳೂ ಸೇರಿದಂತೆ ಭಾರಿ ಗಾತ್ರದ ವಾಹನಗಳು ಸಹ ಅದೇ ಮಾರ್ಗವಾಗಿ ಸಂಚರಿಸುವುದರಿಂದ ನಗರದಲ್ಲಿ ವಾಹನ ಸಂಚಾರ ದಟ್ಟಣೆ ಸಂಪೂರ್ಣವಾಗಿ ಕಡಿಮೆಯಾಗಿ ಸಾರ್ವಜನಿಕರು ಮುಕ್ತವಾಗಿ ಓಡಾಡುವಂತಾಗುತ್ತದೆ.

ತಟ್ಟದ ಪ್ರತಿಭಟನೆ ಬಿಸಿ

ನಗರದಲ್ಲಿ ಕಬ್ಬು ಹಂಗಾಮು ಸೇರಿದಂತೆ ನಾನಾ ವಿಷಯಕ್ಕೆ ಮೇಲಿಂದ ಮೇಲೆ ಪ್ರತಿಭಟನೆಯಾಗುವುದು ಸಹಜ. ಅಂತಹ ಸಂದರ್ಭದಲ್ಲಿ ನಗರದಲ್ಲಿ ಹಾದುಹೋಗಿರುವ ಬೆಳಗಾವಿ-ವಿಜಯಪುರ ರಾಜ್ಯ ಹೆದ್ದಾರಿ ಸಂಚಾರ ಬಂದ್‌ ಮಾಡುತ್ತಿದ್ದರಿಂದ ಪ್ರಯಾಣಿಕರಿಗೆ ತೀವ್ರಮಟ್ಟದ ತೊಂದರೆಯಾಗುತ್ತಿತ್ತು. ಆದರೆ, ಇದೀಗ ಬೈಪಾಸ್‌ ರಸ್ತೆ ನಿರ್ಮಾಣದಿಂದಾಗಿ ನಗರದಲ್ಲಿ ನಡೆಯುವ ಪ್ರತಿಭಟನೆಯಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ತೀರಾ ವಿರಳ.

ಇದನ್ನೂ ಓದಿ: ಫಲಿತಾಂಶ ಸುಧಾರಣೆಗೆ ಹೊಸ ಯೋಜನೆ

ಕಾಯುವಿಕೆಗೆ ಕಡಿವಾಣ

ನಗರದಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳ ಓಡಾಟದಿಂದ ಸಂಭವಿಸುವ ಅವಘಡ ತಡೆಗಟ್ಟಲು ಪೊಲೀಸ್‌ ಇಲಾಖೆ ಪ್ರತಿವರ್ಷ ತನ್ನದೇಯಾದ ರೂಪುರೇಷೆ ಹಾಕಿಕೊಳ್ಳುತ್ತಿತ್ತು. ನಗರದಲ್ಲಿ ಸಂಚಾರದಟ್ಟಣೆ ಕಡಿಮೆ ಮಾಡಲು ಗ್ರಾಮೀಣ ಪ್ರದೇಶದಿಂದ ನಗರ ಮೂಲಕ ಹಾದುಹೋಗುವ ಕಬ್ಬಿನ ಟ್ರ್ಯಾಕ್ಟರ್‌ಗಳನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 3ಗಂಟೆಯವರೆಗೆ ನಗರ ಹೊರವಲಯದಲ್ಲಿ ತಡೆಯಲಾಗುತ್ತಿತ್ತು. ಅದಕ್ಕಾಗಿಯೇ ಮಂಟೂರ, ವಜ್ಜರಮಟ್ಟಿ, ಚಿಚಖಂಡಿ ಸೇರಿದಂತೆ ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಪೊಲೀಸ್‌ ಸಿಬ್ಬಂದಿ ನೇಮಿಸಲಾಗುತ್ತಿತ್ತು. ಆದರೆ, ಈ ಬಾರಿ ಬೈಪಾಸ್‌ ರಸ್ತೆ ನಿರ್ಮಾಣದಿಂದ ಮೇಲಿನ ಎಲ್ಲ ಸಮಸ್ಯೆಗಳು ಸರಾಗವಾಗಿ ಬಗೆಹರಿದಂತಾಗುತ್ತದೆ.

ಯಾದವಾಡ-ಮಹಾಲಿಂಗಪುರ ರಸ್ತೆಯಲ್ಲಿ ಓಡಾಡುವ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳ ಪ್ರಯಾಣಕ್ಕೆ ಸಂಬಂಧಿಸಿದಂತೆ ಕೊಂಚಮಟ್ಟಿಗಿನ ಸಮಸ್ಯೆಯಾಗಲಿದೆಯಾದರೂ ಪ್ರತಿವರ್ಷಕ್ಕಿಂತ ಈ ಬಾರಿ ವಾಹನ ಸಂಚಾರ ದಟ್ಟಣೆ ಕಡಿಮೆಯಾಗುವುದಂತು ಸತ್ಯ.

ಅಂದಾಜು 75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೈಪಾಸ್‌ ರಸ್ತೆಯಿಂದಾಗಿ ನಗರದಲ್ಲಿನ ಸಂಚಾರದಟ್ಟಣೆ ಬಹುತೇಕವಾಗಿ ಕಡಿಮೆಯಾಗಲಿದೆ. 10.2 ಕಿ.ಮೀ ವರೆಗಿನ ಬೈಪಾಸ್‌ ರಸ್ತೆ ಬಹುಪಾಲು ಪೂರ್ಣಗೊಂಡಿದ್ದು, ಸಾರ್ವಜನಿಕ ಓಡಾಟಕ್ಕೆ ಮುಕ್ತವಾಗಿದೆ. ಜೀರಗಾಳ-ಮಾಲಾಪುರವರೆಗೆ ನಿರ್ಮಾಣಗೊಂಡಿರುವ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳೂ ಸೇರಿದಂತೆ ಭಾರಿ ಗಾತ್ರದ ವಾಹನಗಳು ಮುಕ್ತವಾಗಿ ಓಡಾಡಬಹುದು. -ಸೋಮಶೇಖರ ಸಾವನ್‌,ಲೋಕೋಪಯೋಗಿ ಎಇಇ ಮುಧೋಳ

ಮುಧೋಳ ನಗರ ಹೊರವಲಯದಲ್ಲಿ ನಿರ್ಮಾಣವಾಗಿರುವ ಬೈಪಾಸ್‌ನಿಂದಾಗಿ ನಗರವಾಸಿಗಳು ವ್ಯಾಪಾರ ವಹಿವಾಟಿಗಾಗಿ ನಗರಕ್ಕೆ ಆಗಮಿಸುವ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಮುಧೋಳ ನಗರದ ಬಹುದಿನದ ಬೇಡಿಕೆ ಇದೀಗ ಈಡೇರುತ್ತಿದೆ. ಬೈಪಾಸ್‌ ರಸ್ತೆಯಿಂದ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಿ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. -ಮಲ್ಲು ಕಾಬಿ, ಮುಧೋಳ ನಿವಾಸಿ

ಬೈಪಾಸ್‌ ರಸ್ತೆಯಿಂದ ಕಬ್ಬಿನ ಟ್ರ್ಯಾಕ್ಟರ್‌ಮಾಲೀಕರಿಗೆ ಹೆಚ್ಚಿನಮಟ್ಟದ ಅನುಕೂಲವಾಗಿದೆ. ನಗರದಲ್ಲಿ ಸಂಚರಿಸುವುದಕ್ಕಿಂತ ಬೈಪಾಸ್‌ ರಸ್ತೆಯಲ್ಲಿ ಯಾವುದೇ ಕಿರಿಕಿರಿಯಿಲ್ಲದೆ ಸಂಚರಿಸುವುದರಿಂದ ಸಮಯದ ಉಳಿತಾಯವಾಗಲಿದೆ. -ಲಕ್ಷ್ಮಣ ಜಡಗನ್ನವರ ಕಬ್ಬು ಟ್ರ್ಯಾಕ್ಟರ್‌ ಚಾಲಕ

-ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.