ಬೀದಿಗೆ ಬಿದ್ದಿದ್ದ ಸಿದ್ದು ಬಾದಾಮಿಗೆ ಕರೆ ತಂದಿದ್ದು ನಾನೇ: ಸಿ.ಎಂ. ಇಬ್ರಾಹಿಂ
Team Udayavani, Jun 28, 2022, 11:19 PM IST
ಬಾಗಲಕೋಟೆ: ಕ್ಷೇತ್ರವೇ ಇಲ್ಲದೇ ಬೀದಿಗೆ ಬಿದ್ದಿದ್ದ ಸಿದ್ದರಾಮಯ್ಯ ಅವರನ್ನು ಬಾದಾಮಿಗೆ ಕರೆ ತಂದಿದ್ದು ನಾನು. ಎಸ್.ಆರ್. ಪಾಟೀಲ್, ಆರ್.ಬಿ.ತಿಮ್ಮಾಪುರ ಹಾಗೂ ಬಾದಾಮಿಯ ಬಿ.ಬಿ. ಚಿಮ್ಮನಕಟ್ಟಿ ಅವರನ್ನು ಒಪ್ಪಿಸಿ, ಜಿಲ್ಲೆಗೆ ಕರೆ ತಂದಿದ್ದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬಂದರೆ ಕನಿಷ್ಠ ಈ ಭಾಗದಲ್ಲಿ 20 ಶಾಸಕರು ಹೆಚ್ಚಿಗೆ ಆಯ್ಕೆಯಾಗುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ, 20 ಜನ ಅಭ್ಯರ್ಥಿಗಳು ಸೋತರು. ಸಿದ್ದರಾಮಯ್ಯ ಜತೆಗೆ ಸದ್ಯ ಯಾರೂ ಇಲ್ಲ. ನಾನೊಬ್ಬನೆ ಮಾತನಾಡುತ್ತೇನೆ. ನನ್ನ ಪರ ಯಾರೂ ಮಾತನಾಡಲ್ಲ ಎಂದು ಸ್ವತಃ ಸಿದ್ದರಾಮಯ್ಯ ಹೇಳಿದ್ದರು ಎಂದರು.
ಚುನಾವಣೆ ವೇಳೆ “ಸಿಡಿ ಸ್ಫೋಟ’!
ನಮ್ಮ ವಿರುದ್ಧ ಪ್ರಸಾರ ಮಾಡದಂತೆ ರಾಜ್ಯದ ಸುಮಾರು 12 ಜನ ಸಚಿವರು, ಕೆಲ ಶಾಸಕರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ. ಸಿಡಿಯಲ್ಲಿ ಏನಿದೆ ಎಂದು ನೋಡಿ ಎಂದು ಸಭಾಪತಿಗಳಿಗೆ ಹೇಳಿದ್ದೆ.
ವಿಧಾನಸೌಧದಲ್ಲಿ ಬಹಳ ಗೌರವಾನ್ವಿತರಂತೆ ಮಾತನಾಡುತ್ತಾರೆ. ಆದರೆ, ಅವರ ಹುಳುಕೆಲ್ಲ ಸಿಡಿಯಲ್ಲಿದೆ. ಆ ಸಿಡಿಗಳು ಚುನಾವಣೆ ವೇಳೆ ಹೊರ ಬರುತ್ತವೆ. ಸುಮಾರು 17ರಿಂದ 18 ಸಿಡಿ ಇವೆ. ಅದರಲ್ಲಿ ಒಬ್ಬ ಗೋಪಾಲ ನಾನು ತಡೆಯಾಜ್ಞೆ ತೆಗೆದುಕೊಂಡಿಲ್ಲ ಎಂದಿದ್ದಾರೆ. ಆದರೆ, ಅವರ ಹೈಟ್, ವೇಟ್ಗೆ ಏನೂ ಮಾಡಲು ಆಗಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್