ಕ್ಯಾಂಪಸ್ ಪ್ಲೇಸ್ಮೆಂಟ್: ನೇಕಾರನ ಮಗನಿಗೆ ವಾರ್ಷಿಕ 21.35 ಲಕ್ಷ ರೂ. ಆಫರ್!
Team Udayavani, Aug 10, 2022, 7:23 PM IST
ರಬಕವಿ-ಬನಹಟ್ಟಿ: ತುತ್ತು ಊಟಕ್ಕೂ ಉದ್ಯೋಗಕ್ಕೂ ಸಮಾನವಾಗಿ ಬದುಕು ನಡೆಸುವ ಕುಟುಂಬಕ್ಕೆ ಶುಕ್ರದೆಸೆ ಬಂದಿರುವದು ನಿಜಕ್ಕೂ ಶ್ಲಾಘನೀಯ.ಹೌದು, ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯ ಅಣ್ಣಪ್ಪ ಚಾಪೀ ಎಂಬುವರ ಮಗ ಗುರು ವಿಗೆ ಸ್ಯಾಮ್ಸಂಗ್ ಸೆಮಿಕಂಡಕ್ಟರ್ ಇಂಡಿಯಾ ರಿಸರ್ಚ್(ಎಸ್ಎಸ್ಐಆರ್)ನಿಂದ ವಾರ್ಷಿಕ 21.35 ಲಕ್ಷ ರೂ. ಕ್ಯಾಂಪಸ್ ಪ್ಲೇಸ್ಮೆಂಟ್ ಆಫರ್ ಪಡೆದಿರುವದು ದಾಖಲೆಯಾಗಿದೆ.
ವಿದ್ಯಾರ್ಥಿ ಗುರು ಚಾಪೀ ಬೆಳಗಾವಿಯ ಕೆಎಲ್ಎಸ್ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿಯ ಎಲೆಕ್ಟ್ರಾನಿಕ್ ಆಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಯಾಗಿದ್ದು, ಕಳೆದ 43 ವರ್ಷಗಳಲ್ಲಿ ಕಾಲೇಜಿನ ಜಿಐಟಿಯ ವಿದ್ಯಾರ್ಥಿ ಪಡೆದ ಅತ್ಯಧಿಕ ಕ್ಯಾಂಪಸ್ ಉದ್ಯೋಗ ಕೊಡುಗೆಯಾಗಿದೆ.
ಜೋಡಣೆ ನೇಕಾರನ ಮಗನಾಗಿರುವ ಗುರುವಿನ ಪುಟ್ಟ ಮನೆಯವರಲ್ಲಿನ ಸಂತಸ ಮುಗಿಲು ಮುಟ್ಟಿತ್ತು. ಪ್ರತಿಭಾವಂತ ವಿದ್ಯಾರ್ಥಿಯ ಕೀರ್ತಿಗೆ ಇಡೀ ರಬಕವಿ-ಬನಹಟ್ಟಿ ನೇಕಾರ ಸಮುದಾಯ ಹಾಗು ಕುರುಹಿನಶೆಟ್ಟಿ ಸಮಾಜ ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಸಾಧನೆ ಮಾಡಲು ಸ್ವತಂತ್ರವಾಗಿ ಹಾಗು ಏನನ್ನೂ ಕಲಿಯಲೆತ್ನಿಸುವರೋ ಅದಕ್ಕೆ ಸಹಕಾರಿಯಾದಲ್ಲಿ ಸಾಧನೆ ನಿಶ್ಚಿತ ಎಂದು ಗುರು ಚಾಪೀ ಹೇಳಿದ್ದಾರೆ.
ಸ್ಕಾಲರ್ಷಿಪ್, ಶಿಕ್ಷಣ ಸಾಲವೇ ಸಹಾಯ
ಕಿತ್ತು ತಿನ್ನುವ ಬಡತನದಲ್ಲಿ ಗುರಿಯನ್ನು ಸಾಧಿಸಲು ಹಾಗು ಹಿಡಿದ ಛಲಕ್ಕೆ ಸರ್ಕಾರದ ಸ್ಕಾಲರ್ಷಿಪ್ ಹಾಗು ಶಿಕ್ಷಣ ಸಾಲವೇ ಸಹಕಾರಿಯಾಗಿ ಈ ಮಟ್ಟಕ್ಕೆ ಬೆಳೆಯುವಲ್ಲಿ ಕಾರಣವಾಗಿದೆ ಎಂದು ಸಾಧಕ ವಿದ್ಯಾರ್ಥಿ ಗುರು ಚಾಪೀ ತಿಳಿಸಿದರು.
ಮಾಲಿಕ ನೆರವು
ಬಿ.ಇ. ಪ್ರವೇಶಾತಿ ಪಡೆಯುವ ಸಂದರ್ಭ ಒಟ್ಟು ನಾಲ್ಕೈದು ಲಕ್ಷ ರೂ.ಗಳ ವೆಚ್ಚವಾಗುವದರಿಂದ ಕೂಲಿ ನೇಕಾರ ಮಾಡುತ್ತಿದ್ದ ವಿದ್ಯಾರ್ಥಿ ತಂದೆ ಅಣ್ಣಪ್ಪ ಚಾಪೀಗೆ ಜವಳಿ ಉದ್ಯಮಿ ಚಿದಾನಂದ ಬೆಳಗಲಿ ಆರ್ಥಿಕ ನೆರವು ನೀಡಿದರೆಂದು ವಿದ್ಯಾರ್ಥಿ ಮನದಾಳದಿಂದ ಹೇಳಿದ್ದಾನೆ.
ನೇಕಾರ ಸಮುದಾಯದಲ್ಲಿ ಅದರಲ್ಲೂ ಜೋಡಣೆದಾರರ ಕುಟುಂಬದಲ್ಲಿ ಶಿಕ್ಷಣ ಹಾಗು ಆಸ್ಪತ್ರೆಗೆಂದು ಹಣಕಾಸು ನೆರವು ನೀಡುವಲ್ಲಿ ಸಹಕಾರಿಯಾಗುವುದು ಮಾನವೀಯ ಧರ್ಮ ಎಂದು ಚಿದಾನಂದ ಬೆಳಗಲಿ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ