ಲೋಕಾಪುರ ತರಕಾರಿ ಸಂತೆ ರದ್ದು
Team Udayavani, Apr 30, 2020, 2:51 PM IST
ಲೋಕಾಪುರ: ಎಪಿಎಂಸಿಯಲ್ಲಿ ನಡೆಯುತ್ತಿದ್ದ ತರಕಾರಿ ಸಂತೆಯನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಕಿರಣ ಘೋರ್ಪಡೆ ತಿಳಿಸಿದ್ದಾರೆ.
ಬುಧವಾರ ಸಂತೆ ಸ್ಥಳಕ್ಕೆ ಭೇಟಿ ನೀಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಗುಂಪಾಗಿ ಖರೀದಿ ಮಾಡುತ್ತಿದ್ದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಲ್ಲಿ ವ್ಯಾಪಾರಸ್ಥರು ಮತ್ತು ಗ್ರಾಹಕರು ವಿಫಲವಾಗಿದ್ದರಿಂದ ಸಂತೆಯನ್ನು ರದ್ದುಗೊಳಿಸಿದ್ದಾರೆ.
ಸೋಮವಾರ, ಬುಧವಾರ ಮತ್ತು ಶುಕ್ರವಾರ ನಡೆಯುತ್ತಿದ್ದ ತರಕಾರಿ ಸಂತೆಯನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ. ತರಕಾರಿ ವ್ಯಾಪಾರಸ್ಥರು ಮನೆ ಮನೆಗೆ ತೆರಳಿ ವ್ಯಾಪಾರ ಮಾಡಬೇಕು, ಎಂದಿನಂತೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಕಿರಾಣಿ ಅಂಡಿಗಳು ಮಾತ್ರ ತೆರೆದಿರುತ್ತವೆ, ಒಂದು ವೇಳೆ ಅಲ್ಲಿಯೂ ಸಹ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವಿಫಲವಾದರೆ ಕಿರಾಣಿ ಅಂಗಡಿಗಳನ್ನು ಬಂದ್ ಮಾಡಲಾಗುವುದು ಎಂದು ತಿಳಿಸಿದರು.
ಉಪತಹಶೀಲ್ದಾರ್ ಎಂ.ಬಿ. ಪಾಂಡವ, ಪಿಎಸ್ಐ ಶಿವಶಂಕರ ಮುಕರಿ, ಪಿಡಿಒ ಸುಭಾಸ ಗೋಲಶೆಟ್ಟಿ, ಕಾರ್ಯದರ್ಶಿ ರತ್ನಾ ಜಂಬಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್