ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ಅಭ್ಯರ್ಥಿಗಳು: ಫಲಿತಾಂಶ ಲೆಕ್ಕಾಚಾರ


Team Udayavani, Apr 25, 2019, 2:57 PM IST

bag-1

ಬಾಗಲಕೋಟೆ: ಕಳೆದ ಒಂದು ತಿಂಗಳಿಂದ ಚುನಾವಣೆಯ ಪ್ರಚಾರದಲ್ಲಿ ಬ್ಯೂಸಿಯಾಗಿದ್ದ ಅಭ್ಯರ್ಥಿಗಳು ಈಗ ರಿಲ್ಯಾಕ್ಸ್‌ ಮೂಡಿನಲ್ಲಿದ್ದಾರೆ.

ಕಳೆದ ಒಂದು ತಿಂಗಳಿಂದ ಚುನಾವಣೆಯ ಕಾವಿನ ಜತೆಗೆ ಬಿಸಿಲಿಗೂ ಹೆದರದೇ ಪ್ರಚಾರದಲ್ಲಿ ತೊಡಕೊಂಡಿದ್ದ ವಿವಿಧ ಪಕ್ಷಗಳ ಅಭ್ಯರ್ಥಿಗಳು ಈಗ ವಿಶ್ರಾಂತಿಯಲ್ಲಿದ್ದಾರೆ. ಪ್ರಚಾರದ ದಿನಗಳಲ್ಲಿ ಅಭ್ಯರ್ಥಿಗಳು ತಿರುಗಾಡದಿರುವ ಬೀದಿಗಳು ಉಳಿದಿಲ್ಲ. ಜನರಿಗೆ ಕೈ ಮುಗಿಯುವುದು ನಿಲ್ಲಿಸಿರಲಿಲ್ಲ.

ಕಾಲಿಗೆ ಚಕ್ರ ಕಟ್ಟಿಕೊಂಡು ಬಿಸಿಲು, ಹಸಿವು, ಬಾಯಾರಿಕೆ ಲೆಕ್ಕಿಸದೇ ಮತಯಾಚಿಸಲು ಮತದಾರರ ಮನೆ ಮನಗೆಲ್ಲುವಲ್ಲಿ ನಿರತವಾಗಿದ್ದ ಅಭ್ಯರ್ಥಿಗಳು ಬುಧುವಾರ ಚುನಾವಣೆ ಮುಗಿಯುತ್ತಿದ್ದಂತೆಯೇ ಎಲ್ಲ ಒತ್ತಡ, ಜಂಜಾಟಗಳಿಂದ ಹೊರ ಬಂದು ತಮ್ಮ ಕುಟುಂಬದವರ ಜತೆ ಕಾಲಕಳೆಯುವಲ್ಲಿ ನಿರತವಾಗಿದ್ದಾರೆ. ಮನೆಗೆ ಬರುವ ಕಾರ್ಯಕರ್ತರ ಜೊತೆಗೆ ಸೌಜನ್ಯದ ಮಾತುಕತೆ ಹಾಗೂ ಎಲ್ಲೆಲ್ಲಿ ಎಷ್ಟೆಷ್ಟು ಮತದಾನವಾಗಿದೆ ಎನ್ನುವ ಮಾಹಿತಿ ಕೇಳಿ ತಿಳಿದುಕೊಂಡರು. ಜಿಲ್ಲೆಯಲ್ಲಿ ಇರುವ ಪ್ರಮುಖ ಅಭ್ಯರ್ಥಿಗಳು ವಿಶ್ರಾಂತಿಗಾಗಿ ಯಾವುದೇ ಟೂರ್‌ ಹಮ್ಮಿಕೊಂಡಂತೆ ಕಾಣುತ್ತಿಲ್ಲ. ಆದರೆ ಎಲೆಕ್ಷನ್‌ ಮುಗಿದ ಬಳಿಕ ಸೋಲು ಗೆಲುವಿನ ಟೆನ್‌ಸನ್‌ ಮೂಡುತ್ತಿದೆ.

ಜೆಡಿಎಸ್‌-ಕಾಂಗ್ರೆಸ್‌ ಪಕ್ಷದ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಇಳಕಲ್ಲ ನಗರದಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದರು. ಕಳೆದ ಒಂದು ತಿಂಗಳಿನಿಂದ ಟಿಕೆಟ್, ಟಿಕೆಟ್ ಸಿಕ್ಕ ಮೇಲೆ ಪ್ರಚಾರದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದರು. ಆದರೆ ಬುಧವಾರ ಚುನಾವಣೆ ಗದ್ದಲದಿಂದ ಹೊರಬಂದು ಕುಟುಂಬದವರೊಂದಿಗೆ ಕಾಲ ಕಳೆದರು. ಮಕ್ಕಳಾದ ಸಕ್ಷಮ್‌ ಮತ್ತು ಸಮೀಕ್ಷಾ ಜತೆ ಹರಟೆ ಹೊಡೆಯುತ್ತಾ ಮಕ್ಕಳಿಗೆ ಕೈ ತುತ್ತು ಉಣಬಡಿಸಿದರು. ಮನೆಗೆ ಆಗಮಿಸಿದ ಕಾರ್ಯಕರ್ತರೊಂದಿಗೆ ಮತದಾನದ ಕುರಿತು ಮಾತುಕತೆ ನಡೆಸಿದರು. ರಾಜ್ಯ-ಜಿಲ್ಲಾ ಮುಖಂಡರ ಜತೆ ಸೋಲು ಗೆಲುವಿನ ಲೆಕ್ಕಾಚಾರ ಬಗ್ಗೆ ಚರ್ಚೆ ನಡೆಸಿದರು. ಇದರ ನಡುವೆ ಬರುವ ದೂರವಾಣಿ ಕರೆ ಸ್ವೀಕರಿಸಿ, ಲವಲವಿಕೆಯಿಂದ ಮಾತನಾಡುವುದು ಸಾಮಾನ್ಯವಾಗಿತ್ತು. ಗೆಲುವು ನಿಮ್ಮದೇ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಸಂಜೆ ಕೂಡಲಸಂಗಮನಾಥ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಪ್ರಾರ್ಥನೆ ಮಾಡಿದರು.

ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಕೂಡ ಚುನಾವಣೆ ಗುಂಗಿನಿಂದ ಹೊರ ಬಂದಿದ್ದು, ಬಾದಾಮಿಯ ತಮ್ಮ ನಿವಾಸದಲ್ಲಿ ಕುಟುಂಬದ ಜೊತೆಗೆ ಸಮಯ ಕಳೆದರು. ವಿವಿಧೆಡೆಯಿಂದ ಕಾರ್ಯಕರ್ತರ ದಂಡು ಆಗಮಿಸಿತ್ತು. ನಗು ನಗುತ್ತಲೇ ಕಾರ್ಯಕರ್ತರ ಬಳಿ ಮತದಾನದ ಕುರಿತು ಮಾಹಿತಿ ಪಡೆದುಕೊಂಡರು.

ಟಾಪ್ ನ್ಯೂಸ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.