ಹುಟ್ಟುಹಬ್ಬಕ್ಕೆ ಹೋದವರು ಮಸಣ ಸೇರಿದರು..: ಕಾರು ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು
Team Udayavani, Mar 29, 2021, 12:23 PM IST
ಬಾಗಲಕೋಟೆ: ಅವರು ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆಂದು ಹೋಗಿದ್ದವರು. ಪಾರ್ಟಿ ಮುಗಿಸಿ ತಡರಾತ್ರಿ ಮರಳುತ್ತಿದ್ದರು. ಈ ವೇಳೆ ನಡೆದ ಅಪಘಾತದಿಂದ ನಾಲ್ವರು ಸ್ನೇಹಿತರು ಪ್ರಾಣ ಕಳೆದುಕೊಂಡಿದ್ದಾರೆ!
ಜಿಲ್ಲೆಯ ಹುನಗುಂದ ಬಳಿ ನಡೆದ ಭೀಕರ ಕಾರು ಅಪಘಾತ ಪ್ರಕರಣದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದ್ದು, ಬರ್ತ್ ಡೇ ಗೆಂದು ಹೋದ ನಾಲ್ವರು ಮಸಣ ಸೇರಿದ್ದು,ಕಾರು ಚಾಲಕನ ಸ್ಥಿತಿ ತೀವ್ರ ಗಂಭೀರವಾಗಿದೆ.
ಇದನ್ನೂ ಓದಿ:ಕುಡಿದು ಕಾರು ಚಲಾಯಿಸಿ ಪಾದಚಾರಿಗೆ ಢಿಕ್ಕಿ ಹೊಡೆದ ಪಿಡಬ್ಲ್ಯೂಡಿ ಎಇಇ: ಪಾದಚಾರಿ ಸಾವು
ಬೇವಿನಮಟ್ಟಿ ಕ್ರಾಸ್ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಚಂದ್ರಶೇಖರ ಬುಟ್ಟಾ (22), ನವೀನ್ ಸಾಕಾ ( 20), ಚೆನ್ನಬಸವ ಅಂಜಿ (22), ಬಸವರಾಜ ಭಂಡಾರಿ (33) ಮೃತಪಟ್ಟಿದ್ದಾರೆ. ಇವರೆಲ್ಲರೂ ಇಳಕಲ್ ದವರಾಗಿದ್ದಾರೆ. ಕಾರು ಚಾಲಕ ವಿಜಯ್ ಕುಮಾರ್ ಬಂಡಿ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಇಳಕಲ್ ನಿಂದ ಗುಳೇದಗುಡ್ಡಕ್ಕೆ ಬರ್ತ್ ಡೇ ಆಚರಣೆಗೆ ಹೋಗಿದ್ದರು. ಅಲ್ಲಿಂದ ಹಿಂದೆ ಬರುವಾಗ ಕುಡಿದ ಮತ್ತಿನಲ್ಲಿ ನಿಂತಿದ್ದ ಲಾರಿಗೆ ಕಾರು ಚಾಲಕ ಢಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಎಚ್ಚರ ವಹಿಸಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 68,020 ಕೋವಿಡ್ ಪ್ರಕರಣ ಪತ್ತೆ
ಘಟನೆಯಲ್ಲಿ ಲಾರಿ ಸಮೇತ ಚಾಲಕ ಪರಾರಿಯಾಗಿದ್ದು, ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ