ಕೃಷ್ಣೆ ನೀರಿಗೆ ಕಾವೇರಿ ಪ್ರಾಧಿಕಾರ ಮಾರ್ಗದರ್ಶನ!


Team Udayavani, May 13, 2019, 12:30 PM IST

bag-1

ಬಾಗಲಕೋಟೆ: ಮುಳುಗಡೆ ನಗರಿ ಬಾಗಲಕೋಟೆಯ ಜನತೆಗೆ ಕೃಷ್ಣೆಯ ನೀರು ಕುಡಿಯಲು ಪೂರೈಸಲು ಕಾವೇರಿ ಪ್ರಾಧಿಕಾರದ ಮಾರ್ಗದರ್ಶನ ಪಡೆದರೂ, ಯೋಜನೆ ಮಾತ್ರ ಕಾರ್ಯಗತವಾಗಿಲ್ಲ…

ಹೌದು, 72 ಕೋಟಿ ರೂ. ವೆಚ್ಚದ ಹೆರಕಲ್ ಕುಡಿಯುವ ನೀರು ಪೂರೈಕೆ ಯೋಜನೆ, ಯಶಸ್ವಿಯಾಗಿ ಪೂರ್ಣಗೊಳಿಸಲು, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಕೆಬಿಜೆಎನ್‌ಎಲ್ ಮೂಲಕ, ಕಾವೇರಿ ಅಭಿವೃದ್ಧಿ ಪ್ರಾಧಿಕಾರದ ಸಲಹೆ-ಮಾರ್ಗದರ್ಶನ ಹಾಗೂ ಅಲ್ಲಿನ ಯೋಜನೆಗಳ ಅಧ್ಯಯನ ಮಾಡಿದರೂ, ನಮ್ಮ ಯೋಜನೆ ಪೂರ್ಣಗೊಂಡಿಲ್ಲ. ಅದೂ ದುಂದುವೆಚ್ಚದ ಯೋಜನೆ ಮಾಡಿದೆ ಹೊರತು, ಜನರ ಬಾಯಿಗೆ ಹನಿ ನೀರು ಕೊಡಲು ಮುಂದಾಗಿಲ್ಲ.

ಏನದು ಕಾವೇರಿ ಮಾರ್ಗದರ್ಶನ: ಬೀಳಗಿ ತಾಲೂಕು ಹೆರಕಲ್ದಿಂದ ಗದ್ದನಕೇರಿ ಕ್ರಾಸ್‌ ವರೆಗೆ ಪೈಪ್‌ಲೈನ್‌ ಅಳವಡಿಸಿ, ಬಾಗಲಕೋಟೆಯ ಜನತೆಗೆ ಕುಡಿಯುವ ನೀರು ಕೊಡಲು ರೂಪಿಸಿದ ಈ ಯೋಜನೆಗೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಹಲವು ಸಮಸ್ಯೆ ಎದುರಾಗಿವೆ. ಹೆರಕಲ್ದಿಂದ ಗದ್ದನಕೇರಿ ಕ್ರಾಸ್‌ವರೆಗೆ ಪೈಪ್‌ ಅಳವಡಿಸುವ ವೇಳೆ ಸುಮಾರು 4 ಕಿ.ಮೀಯಷ್ಟು ಹಿನ್ನೀರ ಪ್ರದೇಶ (ಘಟಪ್ರಭಾ ನದಿ) ದಾಟಬೇಕು. ಅಲ್ಲಿ ಯಾವ ರೀತಿ ಪೈಪ್‌ಲೈನ್‌ ಅಳವಡಿಸಬೇಕು ಎಂಬುದಕ್ಕೆ ಬಿಟಿಡಿಎ, ಕಾವೇರಿ ಅಭಿವೃದ್ಧಿ ಪ್ರಾಧಿಕಾರದ ಮಾರ್ಗದರ್ಶನ ಪಡೆದಿತ್ತು ಎಂದು ಬಿಟಿಡಿಎ ಖಚಿತ ಮೂಲಗಳು ತಿಳಿಸಿವೆ.

ಕಾವೇರಿ ನದಿಯಿಂದ ಬೆಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಯೋಜನೆ ಕಾರ್ಯಗತ ಸ್ಥಳದಲ್ಲೂ ಕೆಲವೆಡೆ ನದಿ ಮತ್ತು ಹಿನ್ನೀರ ಪ್ರದೇಶದಲ್ಲಿ ಪೈಪ್‌ಲೈನ್‌ ಅಳವಡಿಸಬೇಕಿತ್ತು. ಅಂತಹ ಸ್ಥಳಗಳಲ್ಲಿ ಸೇತುವೆ ನಿರ್ಮಿಸಿ, ಪೈಪ್‌ಲೈನ್‌ ಅಳವಡಿಸಲಾಗಿದೆ. ಅದೇ ಮಾದರಿಯಲ್ಲಿ ಅನಗವಾಡಿ ಸೇತುವೆ ಬಳಿ, ಘಟಪ್ರಭಾ ನದಿಯಲ್ಲಿ ಪ್ರತ್ಯೇಕ ಸೇತುವೆ ನಿರ್ಮಿಸಿ, ಅದರ ಮೇಲೆ ಪೈಪ್‌ಲೈನ್‌ ಹಾಕಿಕೊಂಡು, ಹಿನ್ನೀರ ಪ್ರದೇಶ ದಾಟಲು ಪ್ರತ್ಯೇಕ ಯೋಜನೆ ಕೈಗೊಳ್ಳಲು ಸಲಹೆ ಪಡೆದಿತ್ತು.

72 ಕೋಟಿ ಯೋಜನೆಗೆ 75 ಕೋಟಿ ಸೇತುವೆ: ಅಟ್ಟಿದ್ದೆಲ್ಲ ಹುಟ್ಟಿಗೆ ಎಂಬ (ಬೇಯಿಸಿದ ಅಡುಗೆಯಲ್ಲ ರುಬ್ಬುವ ಹುಟ್ಟಿಗೆ ಹತ್ತಿ ಹಾಳಾದಂತೆ) ಎಂಬ ಗಾದೆ ಮಾತು, ಉತ್ತರ ಕರ್ನಾಟದಲ್ಲಿ ಜನಜನಿತ. ಈ ಯೋಜನೆಯಲ್ಲೂ ಬಿಟಿಡಿಎ ಕೂಡ ಅದೇ ಮಾರ್ಗ ಅನುಸರಿಸಿದೆ ಎಂಬ ಮಾತು ಕೇಳಿ ಬರುತ್ತಿದೆ.

ಹೆರಕಲ್ನಿಂದ ಪೈಪ್‌ಲೈನ್‌ ಅಳವಡಿಸುವ ವೇಳೆ ಘಟಪ್ರಭಾ ನದಿ ದಾಟಬೇಕು. ನದಿಯಲ್ಲಿ (ಹಿನ್ನೀರ ಪ್ರದೇಶ) ಹೇಗೆ ಯೋಜನೆ ಕೈಗೊಳ್ಳಬೇಕು ಎಂಬುದರ ಕುರಿತು, ಕೆಬಿಜೆಎನ್‌ಎಲ್ ಸಲಹೆ ಕೇಳಿದಾಗ, ಕಾವೇರಿ ನೀರು, ಬೆಂಗಳೂರಿಗೆ ಪೂರೈಸಲು ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬದನ್ನು ಪರಿಶೀಲಿಸಿ, ಸಲಹೆ ಪಡೆಯಲು ತಿಳಿಸಲಾಗಿತ್ತು. ಆ ಪ್ರಕಾರ ಕಾವೇರಿ ನಿಗಮದ ಅಧಿಕಾರಿಗಳು, ನದಿಯಲ್ಲಿ ಸೇತುವೆ ನಿರ್ಮಿಸಿ, ಪೈಪ್‌ಲೈನ್‌ ಅಳವಡಿಸಲು ತಿಳಿಸಿದ್ದರು. ಅದೇ ಪ್ರಕಾರ, ಅನಗವಾಡಿ ಸೇತುವೆ ಬಳಿ, ಪೈಪ್‌ಲೈನ್‌ಗಾಗಿ ಪ್ರತ್ಯೇಕ ಸೇತುವೆ ನಿರ್ಮಿಸಲು 75 ಕೋಟಿ ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕೆಬಿಜೆಎನ್‌ಎಲ್ಗೆ ಸಲ್ಲಿಸಲಾಗಿದೆ.

•ಎಸ್‌.ಐ. ಇದ್ದಲಗಿ, ಕಾರ್ಯ ನಿರ್ವಾಹಕ ಅಭಿಯಂತರ, ಬಿಟಿಡಿಎ

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.