ಕೃಷ್ಣೆ ನೀರಿಗೆ ಕಾವೇರಿ ಪ್ರಾಧಿಕಾರ ಮಾರ್ಗದರ್ಶನ!


Team Udayavani, May 13, 2019, 12:30 PM IST

bag-1

ಬಾಗಲಕೋಟೆ: ಮುಳುಗಡೆ ನಗರಿ ಬಾಗಲಕೋಟೆಯ ಜನತೆಗೆ ಕೃಷ್ಣೆಯ ನೀರು ಕುಡಿಯಲು ಪೂರೈಸಲು ಕಾವೇರಿ ಪ್ರಾಧಿಕಾರದ ಮಾರ್ಗದರ್ಶನ ಪಡೆದರೂ, ಯೋಜನೆ ಮಾತ್ರ ಕಾರ್ಯಗತವಾಗಿಲ್ಲ…

ಹೌದು, 72 ಕೋಟಿ ರೂ. ವೆಚ್ಚದ ಹೆರಕಲ್ ಕುಡಿಯುವ ನೀರು ಪೂರೈಕೆ ಯೋಜನೆ, ಯಶಸ್ವಿಯಾಗಿ ಪೂರ್ಣಗೊಳಿಸಲು, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಕೆಬಿಜೆಎನ್‌ಎಲ್ ಮೂಲಕ, ಕಾವೇರಿ ಅಭಿವೃದ್ಧಿ ಪ್ರಾಧಿಕಾರದ ಸಲಹೆ-ಮಾರ್ಗದರ್ಶನ ಹಾಗೂ ಅಲ್ಲಿನ ಯೋಜನೆಗಳ ಅಧ್ಯಯನ ಮಾಡಿದರೂ, ನಮ್ಮ ಯೋಜನೆ ಪೂರ್ಣಗೊಂಡಿಲ್ಲ. ಅದೂ ದುಂದುವೆಚ್ಚದ ಯೋಜನೆ ಮಾಡಿದೆ ಹೊರತು, ಜನರ ಬಾಯಿಗೆ ಹನಿ ನೀರು ಕೊಡಲು ಮುಂದಾಗಿಲ್ಲ.

ಏನದು ಕಾವೇರಿ ಮಾರ್ಗದರ್ಶನ: ಬೀಳಗಿ ತಾಲೂಕು ಹೆರಕಲ್ದಿಂದ ಗದ್ದನಕೇರಿ ಕ್ರಾಸ್‌ ವರೆಗೆ ಪೈಪ್‌ಲೈನ್‌ ಅಳವಡಿಸಿ, ಬಾಗಲಕೋಟೆಯ ಜನತೆಗೆ ಕುಡಿಯುವ ನೀರು ಕೊಡಲು ರೂಪಿಸಿದ ಈ ಯೋಜನೆಗೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಹಲವು ಸಮಸ್ಯೆ ಎದುರಾಗಿವೆ. ಹೆರಕಲ್ದಿಂದ ಗದ್ದನಕೇರಿ ಕ್ರಾಸ್‌ವರೆಗೆ ಪೈಪ್‌ ಅಳವಡಿಸುವ ವೇಳೆ ಸುಮಾರು 4 ಕಿ.ಮೀಯಷ್ಟು ಹಿನ್ನೀರ ಪ್ರದೇಶ (ಘಟಪ್ರಭಾ ನದಿ) ದಾಟಬೇಕು. ಅಲ್ಲಿ ಯಾವ ರೀತಿ ಪೈಪ್‌ಲೈನ್‌ ಅಳವಡಿಸಬೇಕು ಎಂಬುದಕ್ಕೆ ಬಿಟಿಡಿಎ, ಕಾವೇರಿ ಅಭಿವೃದ್ಧಿ ಪ್ರಾಧಿಕಾರದ ಮಾರ್ಗದರ್ಶನ ಪಡೆದಿತ್ತು ಎಂದು ಬಿಟಿಡಿಎ ಖಚಿತ ಮೂಲಗಳು ತಿಳಿಸಿವೆ.

ಕಾವೇರಿ ನದಿಯಿಂದ ಬೆಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಯೋಜನೆ ಕಾರ್ಯಗತ ಸ್ಥಳದಲ್ಲೂ ಕೆಲವೆಡೆ ನದಿ ಮತ್ತು ಹಿನ್ನೀರ ಪ್ರದೇಶದಲ್ಲಿ ಪೈಪ್‌ಲೈನ್‌ ಅಳವಡಿಸಬೇಕಿತ್ತು. ಅಂತಹ ಸ್ಥಳಗಳಲ್ಲಿ ಸೇತುವೆ ನಿರ್ಮಿಸಿ, ಪೈಪ್‌ಲೈನ್‌ ಅಳವಡಿಸಲಾಗಿದೆ. ಅದೇ ಮಾದರಿಯಲ್ಲಿ ಅನಗವಾಡಿ ಸೇತುವೆ ಬಳಿ, ಘಟಪ್ರಭಾ ನದಿಯಲ್ಲಿ ಪ್ರತ್ಯೇಕ ಸೇತುವೆ ನಿರ್ಮಿಸಿ, ಅದರ ಮೇಲೆ ಪೈಪ್‌ಲೈನ್‌ ಹಾಕಿಕೊಂಡು, ಹಿನ್ನೀರ ಪ್ರದೇಶ ದಾಟಲು ಪ್ರತ್ಯೇಕ ಯೋಜನೆ ಕೈಗೊಳ್ಳಲು ಸಲಹೆ ಪಡೆದಿತ್ತು.

72 ಕೋಟಿ ಯೋಜನೆಗೆ 75 ಕೋಟಿ ಸೇತುವೆ: ಅಟ್ಟಿದ್ದೆಲ್ಲ ಹುಟ್ಟಿಗೆ ಎಂಬ (ಬೇಯಿಸಿದ ಅಡುಗೆಯಲ್ಲ ರುಬ್ಬುವ ಹುಟ್ಟಿಗೆ ಹತ್ತಿ ಹಾಳಾದಂತೆ) ಎಂಬ ಗಾದೆ ಮಾತು, ಉತ್ತರ ಕರ್ನಾಟದಲ್ಲಿ ಜನಜನಿತ. ಈ ಯೋಜನೆಯಲ್ಲೂ ಬಿಟಿಡಿಎ ಕೂಡ ಅದೇ ಮಾರ್ಗ ಅನುಸರಿಸಿದೆ ಎಂಬ ಮಾತು ಕೇಳಿ ಬರುತ್ತಿದೆ.

ಹೆರಕಲ್ನಿಂದ ಪೈಪ್‌ಲೈನ್‌ ಅಳವಡಿಸುವ ವೇಳೆ ಘಟಪ್ರಭಾ ನದಿ ದಾಟಬೇಕು. ನದಿಯಲ್ಲಿ (ಹಿನ್ನೀರ ಪ್ರದೇಶ) ಹೇಗೆ ಯೋಜನೆ ಕೈಗೊಳ್ಳಬೇಕು ಎಂಬುದರ ಕುರಿತು, ಕೆಬಿಜೆಎನ್‌ಎಲ್ ಸಲಹೆ ಕೇಳಿದಾಗ, ಕಾವೇರಿ ನೀರು, ಬೆಂಗಳೂರಿಗೆ ಪೂರೈಸಲು ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬದನ್ನು ಪರಿಶೀಲಿಸಿ, ಸಲಹೆ ಪಡೆಯಲು ತಿಳಿಸಲಾಗಿತ್ತು. ಆ ಪ್ರಕಾರ ಕಾವೇರಿ ನಿಗಮದ ಅಧಿಕಾರಿಗಳು, ನದಿಯಲ್ಲಿ ಸೇತುವೆ ನಿರ್ಮಿಸಿ, ಪೈಪ್‌ಲೈನ್‌ ಅಳವಡಿಸಲು ತಿಳಿಸಿದ್ದರು. ಅದೇ ಪ್ರಕಾರ, ಅನಗವಾಡಿ ಸೇತುವೆ ಬಳಿ, ಪೈಪ್‌ಲೈನ್‌ಗಾಗಿ ಪ್ರತ್ಯೇಕ ಸೇತುವೆ ನಿರ್ಮಿಸಲು 75 ಕೋಟಿ ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕೆಬಿಜೆಎನ್‌ಎಲ್ಗೆ ಸಲ್ಲಿಸಲಾಗಿದೆ.

•ಎಸ್‌.ಐ. ಇದ್ದಲಗಿ, ಕಾರ್ಯ ನಿರ್ವಾಹಕ ಅಭಿಯಂತರ, ಬಿಟಿಡಿಎ

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.