ಸೇವಾಲಾಲ್‌ ಜಯಂತಿ ಸಂಭ್ರಮದಿಂದ ಆಚರಿಸಿ

ಸಾಮಾಜಿಕ ಉನ್ನತ, ಆರೋಗ್ಯಭಾಗ್ಯ, ಶೈಕ್ಷಣಿಕ ಏಳ್ಗೆಗಾಗಿ ಪ್ರಾರ್ಥಿಸಬೇಕು ಎಂದು ಕೋರಿದರು.

Team Udayavani, Feb 11, 2022, 4:40 PM IST

ಸೇವಾಲಾಲ್‌ ಜಯಂತಿ ಸಂಭ್ರಮದಿಂದ ಆಚರಿಸಿ

ಬಾಗಲಕೋಟೆ: ಬಂಜಾರಾ ಸಮುದಾಯದ ಕುಲಗುರು, ಸಂತ ಸೇವಾಲಾಲರ 283ನೇ ಜಯಂತಿಯನ್ನು ಫೆ.15ರಂದು ಜಿಲ್ಲೆಯ ಪ್ರತಿಯೊಂದು ತಾಂಡಾಗಳಲ್ಲಿ ಭಕ್ತಭಾವದಿಂದ ಆಚರಿಸಬೇಕು ಎಂದು ಜಿ.ಪಂ. ಮಾಜಿ ಅಧ್ಯಕ್ಷ ಹೂವಪ್ಪ ರಾಠೊಡ ಮನವಿ ಮಾಡಿದರು.

ಸೇವಾಲಾಲ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ ನಡೆದ ಪೂರ್ವಭಾವಿ ಸಭೆಯ ಬಳಿಕ ಸಮಾಜದ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ 9 ತಾಲೂಕು ವ್ಯಾಪ್ತಿಯಲ್ಲಿ 47 ತಾಂಡಾಗಳಿವೆ. ಎಲ್ಲಾ ತಾಂಡಾಗಳಲ್ಲೂ ಸಂತ ಸೇವಾಲಾಲ ಹಾಗೂ ವಿವಿಧ ಮಠ-ಮಂದಿರಗಳಿವೆ. ಸಮಾಜ ಬಾಂಧವರು ಈ ದೇವಾಲಯ, ಮಠಗಳಿಗೆ ಸುಣ್ಣ-ಬಣ್ಣ ಬಳಿದು ಗೋ ಮಾತೆಯ ಅಮೃತದಿಂದ ದೇವಸ್ಥಾನ ಮಡಿ ಮಾಡಬೇಕು. ಬಳಿಕ ದೇವಾಲಾಲ ಮಹಾರಾಜರ ಜಯಂತಿಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಹಿರಿಯ ನಾಯಕ, ಕಾರಭಾರಿಗಳು ಸನ್ನದ್ಧರಾಗಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಕೊರೊನಾ 3ನೇ ಅಲೆ ಹಾಗೂ ಓಮಿಕ್ರಾನ್‌ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸಮಾಜ ಬಾಂಧವರು ಭಕ್ತಿಯಿಂದ ಪೂಜಿಸುವ ಜಗನ್ಮಾತೆ ಮರಿಯಮ್ಮ ಹಾಗೂ ಜಗದ್ಗುರು ಸಂತ ಸೇವಾಲಾಲರ ಆಶೀರ್ವಾದದಿಂದ ರಾಜ್ಯ ಹಾಗೂ ಜಿಲ್ಲೆಗೆ ಕೊರೊನಾ 3ನೇ ಅಲೆಯ ತೊಂದರೆ ತೀವ್ರವಾಗಿಲ್ಲ.

ಆದರೂ ಮುಂಜಾಗೃತೆ ವಹಿಸಿ, ಪ್ರತಿ ತಾಂಡಾದಲ್ಲಿ ಸಾಂಕ್ರಾಮಿಕ ರೋಗ ದೂರ ಮಾಡಲು ಪೂಜೆ, ಪುನಸ್ಕಾರ ನಡೆಸಬೇಕು. ಜತೆಗೆ ಪ್ರತಿಯೊಬ್ಬರೂ ಸಮಾನತೆಗಾಗಿ, ಶಾಂತಿಗಾಗಿ, ಉತ್ತಮ ಬೆಳೆ, ಆರ್ಥಿಕ ವೃದ್ಧಿ, ಸಾಮಾಜಿಕ ಉನ್ನತ, ಆರೋಗ್ಯಭಾಗ್ಯ, ಶೈಕ್ಷಣಿಕ ಏಳ್ಗೆಗಾಗಿ ಪ್ರಾರ್ಥಿಸಬೇಕು ಎಂದು ಕೋರಿದರು.

ಜಿ.ಪಂ. ಸಭಾ ಭವನದಲ್ಲಿ ಜಿಲ್ಲಾಡಳಿತದ ಸಹಯೋಗದಿಂದ ಸಂತ ಸೇವಾಲಾಲ ಜಯಂತಿ ನಡೆಯಲಿದ್ದು, ಜಿಲ್ಲೆಯ ಪ್ರತಿಯೊಬ್ಬ ಸಮಾಜ ಬಾಂಧವರು ಭಾಗವಹಿಸಬೇಕು ಎಂದೂ ಮನವಿ ಮಾಡಿದರು.

ಶಿರೂರ-ನೀಲಾನಗರದ ಕುಮಾರ ಮಹಾರಾಜ, ಕೃಷ್ಣಪ್ಪ ಲಮಾಣಿ, ಸಮಾಜದ ಪ್ರಮುಖರಾದ ಬಲರಾಮ ನಾಯಕ, ರಾಜು ನಾಯಕ, ರಮೇಶ ನಾಯಕ, ಲಿಂಗರಾಜ ನಾಯಕ, ಸೇವಾಲಾಲ ಮಾಲಾಧಾರಿಗಳಾದ ಅನಿಲ ಕಾರಬಾರಿ, ಸುರೇಶ ನಾಯಕ ಮುಂತಾದವರು ಪಾಲ್ಗೊಂಡಿದ್ದರು.

ಕೊರೊನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷದಿಂದ ಸೇವಾಲಾಲ ಮಹಾರಾಜರ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಈ ವರ್ಷವೂ ಸರ್ಕಾರದ ನಿಯಮಾವಳಿ ಪ್ರಕಾರ, ಜಿಲ್ಲೆಯಾದ್ಯಂತ ಫೆ. 15ರಂದು ಜಯಂತಿ ಭಕ್ತಿ-ಭಾವ ಹಾಗೂ ಸಡಗರದಿಂದ ಆಚರಿಸಬೇಕು. ಇದಕ್ಕಾಗಿ ಪ್ರತಿಯೊಂದು ತಾಂಡಾದ ದೇವಸ್ಥಾನಗಳನ್ನು ಸುಣ್ಣ-ಬಣ್ಣದಿಂದ ಸ್ವತ್ಛಗೊಳಿಸಿ, ಗೋಮಾತೆಯ ಅಮೃತದಿಂದ ಶುಚಿ ಮಾಡಬೇಕು.
ಹೂವಪ್ಪ ರಾಠೊಡ,
ಜಿಪಂ. ಮಾಜಿ ಅಧ್ಯಕ್ಷ

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.