ಜಿಲ್ಲಾದ್ಯಂತ ಸಂಭ್ರಮದ ರಂಜಾನ್ ಆಚರಣೆ
•ಹಿಂದೂ-ಮುಸ್ಲಿಮರು ಹಬ್ಬದ ಶುಭಾಶಯ ವಿನಿಮಯ•ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ
Team Udayavani, Jun 6, 2019, 9:28 AM IST
ಬಾಗಲಕೋಟೆ: ನಗರದ ಅಂಜುಮನ್ ಆವರಣದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬಾಗಲಕೋಟೆ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ರಂಜಾನ್ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ರಂಜಾನ್ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಉಪವಾಸ ವೃತ ಮಾಡಿದ್ದ ಮುಸ್ಲಿಂ ಬಾಂಧವರು, ಬುಧವಾರ ಬೆಳಗ್ಗೆ ಹೊಸ ಬಟ್ಟೆ ಧರಿಸಿ, ನಗರದ ವಿವಿಧ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದರು.
ನಗರದ ಹಳೆಯ ಅಂಜುಮನ್ ಆವರಣ, ನವನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ವ್ಯವಸ್ಥೆ ಮಾಡಲಾಗಿತ್ತು. ತಮ್ಮ ಮಕ್ಕಳೊಂದಿಗೆ ಈದ್ಗಾ ಮೈದಾನಕ್ಕೆ ಆಗಮಿಸಿದ್ದ ಮುಸ್ಲಿಂ ಬಾಂಧವರು, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಬಳಿಕ ಮಧ್ಯಾಹ್ನ ಹಿಂದೂ ಸ್ನೇಹಿತರನ್ನು ಮನೆಗೆ ಆಹ್ವಾನಿಸಿ, ವಿವಿಧ ವಿಶೇಷ ಖಾದ್ಯಗಳಿಂದ ತಯಾರಿಸಿದ ಊಟ ಉಣಬಡಿಸಿದರು. ಇದೇ ವೇಳೆ ಹಿಂದೂ-ಮುಸ್ಲಿಂರು ರಂಜಾನ್ ಹಬ್ಬದ ಶುಭಾಶಯ ವಿನಿಮಯ ಮಾಡಿದರು.