ಈ ಬಾರಿ ನಡೆದೀತೇ ಚಾಲುಕ್ಯ ಉತ್ಸವ?

ಹಂಪಿ-ಮೈಸೂರು ದಸರಾಗಿಲ್ಲದ "ಬರ' ಚಾಲುಕ್ಯ ಉತ್ಸವಗೇಕೆ? ನೆಪದಿಂದ ಉತ್ಸವ ರದ್ದು

Team Udayavani, Nov 11, 2022, 3:51 PM IST

21

ಬಾದಾಮಿ: ಬರಗಾಲ, ಚುನಾವಣೆ, ಕೊರೊನಾ ನೆಪದಿಂದ ಮುಂದೂಡುತ್ತಲೇ ಬಂದಿರುವ “ಚಾಲುಕ್ಯ ಉತ್ಸವ’ವನ್ನು ಸರಕಾರ ಈ ಬಾರಿ ಆಚರಿಸಲು ಮುಂದಾಗಬೇಕೆಂಬ ಒತ್ತಾಯ-ಕೂಗು ಕೇಳಿ ಬಂದಿದೆ.

ಐತಿಹಾಸಿಕ ಚಾಲುಕ್ಯರ ಕಾಲದ ಗತವೈಭವ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ನಡೆಸುತ್ತ ಬಂದಿರುವ “ಚಾಲುಕ್ಯ ಉತ್ಸವ’ ಕಳೆದ ಆರು ವರ್ಷಗಳಿಂದ ಆಯೋಜಿಸಿಲ್ಲ. 2018ರಲ್ಲಿ ವಿಧಾನಸಭೆ ಚುನಾವಣೆ, 2019ರಲ್ಲಿ ಲೋಕಸಭೆ ಚುನಾವಣೆ, 2020-21ರಲ್ಲಿ ಕೊರೊನಾ ನೆಪದಿಂದ ಸರಕಾರ ಚಾಲುಕ್ಯ ಉತ್ಸವ ಆಯೋಜಿಸಿರಲಿಲ್ಲ. ಸರಕಾರ ಈ ಬಾರಿಯಾದರೂ ಚಾಲುಕ್ಯ ಉತ್ಸವ ನಡೆಸುವುದೇ ಎಂದು ಜನರು ಕಾಯ್ದು ಕಾಯುತ್ತಿದ್ದಾರೆ.

2015, ಫೆ. 8, 9 ಮತ್ತು 10 ಮೂರು ದಿನಗಳ ಕಾಲ ಚಾಲುಕ್ಯ ಉತ್ಸವ ನಡೆಸಲಾಗಿತ್ತು. 2016, 2017, 2018, 2019, 2020, 2021 ಹೀಗೆ ಆರು ವರ್ಷಗಳ ಕಾಲ ಸತತ ಬರಗಾಲ, ಚುನಾವಣೆ, ಕೊರೊನಾ ನೆಪವೊಡ್ಡಿ ರದ್ದುಪಡಿಸುತ್ತಲೇ ಬರಲಾಗಿದೆ. ಕಳೆದ ವರ್ಷ ಹಂಪಿ ಉತ್ಸವ ರದ್ದುಪಡಿಸಿದ ಕಾರಣ ಅಲ್ಲಿನ ಜನರ ಪ್ರತಿಭಟನೆಗೆ ಮಣಿದು ಕೊನೆಯ ಕ್ಷಣದಲ್ಲಿ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಯಿತು. ಪ್ರತಿ ವರ್ಷ ದಸರಾ, ಹಂಪಿ ನಡೆಸಲಾಗುತ್ತಿದೆ. ದಸರಾ ಮತ್ತು ಹಂಪಿ ಉತ್ಸವಕ್ಕಿಲ್ಲದ ಬರ ಚಾಲುಕ್ಯ ಉತ್ಸವ ಏಕೆ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಈ ಬಾರಿ ಬಾದಾಮಿಯಲ್ಲಿ ಎರಡು ದಿನ ಚಾಲುಕ್ಯ ಉತ್ಸವ, ಪಟ್ಟದಕಲ್ಲನಲ್ಲಿ ಒಂದು ದಿನ ಪಟ್ಟದಕಲ್ಲ ಉತ್ಸವ, ಒಂದು ದಿನ ಐಹೊಳೆ ಉತ್ಸವವನ್ನು ಸರಕಾರದಿಂದ ಆಯೋಜಿಸಬೇಕೆಂಬ ಕೂಗು ಕೇಳಿ ಬಂದಿದೆ.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಾಂಸ್ಕೃತಿಕ ವಿಚಾರಧಾರೆಗಳು ಬೇರೆ ಬೇರೆಯಾಗಿರುವಾಗ ಚಾಲುಕ್ಯ ಉತ್ಸವದಂತಹ ಸಾಂಸ್ಕೃತಿಕ ಹಬ್ಬಗಳು ಆಕರ್ಷಣೆ ಕಳೆದುಕೊಂಡು ಜನರಿಂದ ದೂರವಾಗಿ ಸರಕಾರಿ ಪ್ರಾಯೋಜಿತ ಕಾರ್ಯಕ್ರಮಗಳಂತಾಗಿವೆ. ಇದರಿಂದ ಚಾಲುಕ್ಯ ಉತ್ಸವವನ್ನು ಹಮ್ಮಿಕೊಳ್ಳುವ ಯೋಜನೆ ಮೇಲಿಂದ ಮೇಲೆ ವಿಫಲವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಇಷ್ಟಲಿಂಗ ಶಿರಶಿ, ಸಾಮಾಜಿಕ ಹೋರಾಟಗಾರರು ಬಾದಾಮಿ.

ಕಳೆದ ಹಲವಾರು ವರ್ಷಗಳಿಂದ ವಿವಿಧ ಕಾರಣಗಳಿಂದ ಚಾಲುಕ್ಯ ಉತ್ಸವ ನಡೆದಿಲ್ಲ. ಈ ಬಾರಿ ಸರಕಾರದ ವತಿಯಿಂದ ಚಾಲುಕ್ಯ ಉತ್ಸವ ಆಯೋಜಿಸಲು ಉಸ್ತುವಾರಿ ಸಚಿವರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.  ಸಿದ್ದರಾಮಯ್ಯ, ಮಾಜಿ ಸಿಎಂ, ಶಾಸಕರು ಬಾದಾಮಿ.

-ಶಶಿಧರ ವಸ್ತ್ರದ

 

 

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.