ಮುಖ್ಯ ವೈದ್ಯರು ರಜೆ; ಗರ್ಭಿಣಿಯರ ಪರದಾಟ; ಬಡಜನರಿಗೆ ವರವಾಗಿದ್ದಆಸ್ಪತ್ರೆ

ಬಡವರು ಈಗ ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ

Team Udayavani, Jun 1, 2023, 3:53 PM IST

ಮುಖ್ಯ ವೈದ್ಯರು ರಜೆ; ಗರ್ಭಿಣಿಯರ ಪರದಾಟ; ಬಡಜನರಿಗೆ ವರವಾಗಿದ್ದಆಸ್ಪತ್ರೆ

ಗುಳೇದಗುಡ್ಡ: ಇಲ್ಲಿಯ ಸರ್ಕಾರಿ ಆಸ್ಪತ್ರೆ ಕಳೆದ ಐದಾರು ವರ್ಷಗಳಿಂದ ಗರ್ಭಿಣಿಯರಿಗೆ ವರವಾಗುತ್ತ ಬಂದಿದೆ. ಆದರೆ ಕಳೆದ 20 ದಿನಗಳಿಂದ ಮುಖ್ಯ ವೈದ್ಯರು ರಜೆ ಮೇಲೆ ತೆರಳಿದ್ದರಿಂದ ಗರ್ಭಿಣಿಯರು ಹೆರಿಗೆ ಮಾಡಿಸಿಕೊಳ್ಳಲು ಪರದಾಡುವಂತಾಗಿದೆ.
ಅಲ್ಲದೇ ಹೆರಿಗೆ ಸಂಕಟ ಒಂದೆಡೆಯಾದರೆ ಖಾಸಗಿ ಆಸ್ಪತ್ರೆಗೆ ತೆರಳಿದರೆ ದೊಡ್ಡ ಮೊತ್ತ ತೆರಬೇಕಲ್ಲ ಎಂಬ ಚಿಂತೆ ಸಾರ್ವಜನಿಕರಲ್ಲಿ ಕಾಡುತ್ತಿದೆ.

ಕಳೆದ 25 ದಿನಗಳಿಂದ ಇಲ್ಲಿನ ಮುಖ್ಯ ವೈದ್ಯಾಧಿಕಾರಿಗಳು ಹಾಗೂ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾಗಿದ್ದ ಡಾ|ನಾಗರಾಜ ಕುರಿ ವಿಶ್ರಾಂತಿ ರಜೆ ಪಡೆದಿದ್ದು, ಅವರ ಸ್ಥಾನಕ್ಕೆ ತಾತ್ಕಾಲಿಕವಾಗಿ ಬೇರೆ ವೈದ್ಯರನ್ನು ನೇಮಕ ಮಾಡದೇ ಇರುವುದರಿಂದ ಆಸ್ಪತ್ರೆ ಈಗ ಬಿಕೋ ಎನ್ನುತ್ತಿದೆ.

ಡಾ|ನಾಗರಾಜ ಕುರಿ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ದಿನದಿಂದ ಆಸ್ಪತ್ರೆಯಲ್ಲಿ ಸಾಕಷ್ಟು ಹೆರಿಗೆಗಳು ಆಗುತ್ತಿವೆ. ಅಲ್ಲದೇ ಬಡವರಿಗೆ ಇದು ವರವಾಗಿದೆ. ಈ ಸಮುದಾಯ ಆರೋಗ್ಯ ಕೇಂದ್ರ ಕಳೆದ ಐದಾರು ವರ್ಷಗಳಿಂದ ಹೆರಿಗೆಯ ಕೇಂದ್ರವಾಗಿತ್ತು. ಗುಳೇದಗುಡ್ಡ ಸೇರಿದಂತೆ ಬಾದಾಮಿ, ಗಜೇಂದ್ರಗಡ, ಮುದ್ದೇಬಿಹಾಳ, ಕಮತಗಿ, ಇಳಕಲ್ಲ, ಗುಡೂರ ಮತ್ತಿತರ ಊರುಗಳಲ್ಲಿನ ಬಡ ಜನರು ಹೆರಿಗೆಗಾಗಿ ಇಲ್ಲಿಗೆ ಆಗಮಿಸುತ್ತಿದ್ದರು.

ಮುಖ್ಯ ವೈದ್ಯಾಧಿ ಕಾರಿಗಳು ಹಾಗೂ ಹೆರಿಗೆ ತಜ್ಞರಾಗಿದ್ದ ಡಾ|ಕುರಿ ಸಹಜ ಹೆರಿಗೆ ಮಾಡಿಸುವುದರಲ್ಲಿ ಹೆಸರು ಗಳಿಸಿದ್ದರಿಂದ ಪ್ರತಿ ತಿಂಗಳು ನೂರಕ್ಕೂ ಹೆಚ್ಚು ಹೆರಿಗೆಗಳು ಈ ಆಸ್ಪತ್ರೆಯಲ್ಲಿ ದಾಖಲಾಗುತ್ತಿದ್ದವು. ಈಗಲೂ ದೂರ ದೂರಿನಿಂದ ಬಡ ಹೆಣ್ಣು ಮ್ಕಕಳು ಇಲ್ಲಿಗೆ ಹೆರಿಗೆ ಮಾಡಿಸಿಕೊಳ್ಳಲು ಆಗಮಿಸಿ ಹೆರಿಗೆಯ ವೈದ್ಯರಿಲ್ಲದಿರುವುದನ್ನು ಕಂಡು ವಾಪಸ್‌ ಬೇರೆ ಆಸ್ಪತ್ರೆಗೆ ತೆರಳುತ್ತಿದ್ದಾರೆ. ಹೆರಿಗೆಗೆ ಬರುತ್ತಿದ್ದ ಬಡವರು ಈಗ ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ.

ಹೀಗೆ ತುರ್ತಾಗಿ ಆಗಮಿಸುವ ಗರ್ಭಿಣಿಯರಿಗೆ ತೊಂದರೆಯಾದರೆ ಈ ಆಸ್ಪತ್ರೆಯಲ್ಲಿ ನೋಡುವವರು ಇಲ್ಲ. ಇದಕ್ಕೆ ಯಾರು ಹೊಣೆ? ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಇಲ್ಲಿನ ಆಸ್ಪತ್ರೆಗೆ ಕೂಡಲೇ ತಾತ್ಕಾಲಿಕವಾಗಿ ತಜ್ಞ ಹೆರಿಗೆ ವೈದ್ಯರನ್ನು ನೇಮಕ ಮಾಡಬೇಕಾಗಿದೆ.

ಗುಳೇದಗುಡ್ಡದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾ ಧಿಕಾರಿಗಳು ವಿಶ್ರಾಂತಿ ರಜೆ ಮೇಲೆ ಇರುವುದರಿಂದ, ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದು ಇಲ್ಲಿನ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ.

ಎಂ.ಬಿ. ಪಾಟೀಲ,
ತಾಲೂಕು ವೈದ್ಯಾಧಿಕಾರಿಗಳು, ಬಾದಾಮಿ

ಮೇ 11ರಂದು ನನ್ನ ಸೊಸೆಯ ಡಿಲೇವರಿ ಇಲ್ಲಿಯೇ ಇತ್ತು. ನನ್ನ ಸೊಸೆಯ ಜತೆಗೆ ಒಟ್ಟು 11 ಗರ್ಭಿಣಿಯರು ಬಂದಿದ್ದರು. ಆದರೆ ಯಾವ ವೈದ್ಯರು ಇಲ್ಲಿರಲಿಲ್ಲ. ಹೀಗಾಗಿ ನಾವು ಎಲ್ಲ 11 ಜನರು ಖಾಸಗಿ ಆಸ್ಪತ್ರೆಗೆ ಹೋಗಬೇಕಾಯಿತು. ಇದರಿಂದ ಆರ್ಥಿಕವಾಗಿ ತೊಂದರೆಗೆ ಸಿಲುಕುವಂತಾಗಿದೆ. ಕೂಡಲೇ ಇಲ್ಲಿನ ವೈದ್ಯರ ಸಮಸ್ಯೆ ಬಗೆಹರಿಸಬೇಕು.
ಸಾವಿತ್ರಿ ಜೋಗೂರ, ಗುಳೇದಗುಡ್ಡ

ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.