ಚಿಕ್ಕಆದಾಪುರ ಸರಕಾರಿ ಶಾಲೆ ಕಟ್ಟಡ ಶಿಥಿಲ
ಭಯದ ವಾತಾವರಣದಲ್ಲಿ ಮಕ್ಕಳ ಶಿಕ್ಷಣ ; ಕೊಠಡಿಗಳ ಕೊರತೆ -ಶಾಲಾ ಆವರಣದಲ್ಲಿ ಮಕ್ಕಳಿಗೆ ಪಾಠ
Team Udayavani, Jun 17, 2022, 12:22 PM IST
ಇಳಕಲ್ಲ: ತಾಲೂಕಿನ ಚಿಕ್ಕಆದಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದೆ. ಆರ್ಸಿಸಿ ಮೇಲ್ಛಾವಣಿ ಎಲ್ಲೆಂದರಲ್ಲಿ ಉದುರಿಬೀಳುತ್ತಿದೆ. ಮಕ್ಕಳು ಭಯದ ವಾತಾವರಣದಲ್ಲಿ ಪಾಠ ಆಲಿಸುವಂತಾಗಿದೆ.
ಚಿಕ್ಕಆದಾಪುರದಲ್ಲಿ 1938ರಲ್ಲಿ ಆರಂಭಗೊಂಡ ಪ್ರಾಥಮಿಕ ಶಾಲೆ 1ರಿಂದ 7ನೇ ತರಗತಿ ಹೊಂದಿದ್ದು, ಒಟ್ಟು 125ಮಕ್ಕಳು ವಿದ್ಯಾರ್ಜನೆ ಮಾಡುತ್ತಿದ್ದು, ಮೂವರು ಶಿಕ್ಷಕರು ಹಾಗೂ ಓರ್ವ ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಖ್ಯ ಶಿಕ್ಷಕರು ಸೇರಿ ಏಳು ಕೊಠಡಿಗಳಿದ್ದು, ಶಿಥಿಲಾವಸ್ಥೆಯಲ್ಲಿವೆ.
ಇದೇ ಕಟ್ಟಡದಲ್ಲಿ 2006-07ರಲ್ಲಿ ಪ್ರೌಢಶಾಲೆ ಆರಂಭಗೊಂಡಿದೆ. ಕೆಂಪು ಹಂಚು ಹೊಂದಿರುವ ಮೇಲ್ಛಾವಣಿ ಶಿಥಿಲಗೊಂಡಿರುವ ಶಾಲಾ ಕಟ್ಟಡದಲ್ಲಿ ಬೆಳಗ್ಗೆ 7ರಿಂದ 12ಗಂಟೆಯವರೆಗೆ ಪ್ರಾಥಮಿಕ ಶಾಲೆ, 12ಗಂಟೆಯಿಂದ ಸಂಜೆ 5ಗಂಟೆಯವರೆಗೆ ಪ್ರೌಢಶಾಲೆ ನಡೆಯುತ್ತಿದೆ. ಶಾಲೆಯ ಯಾವ ಕೊಠಡಿಯೂ ಸುರಕ್ಷಿತವಾಗಿಲ್ಲ. ಕೆಲವರ್ಗಗಳು ಶಾಲಾ ಆವರಣದಲ್ಲೇ ನಡೆಯುತ್ತಿವೆ. ಮಳೆಗಾಲ ಆರಂಭವಾಗುವುದರಿಂದ ವಿದ್ಯಾರ್ಥಿ ಹಾಗೂ ಶಿಕ್ಷಕ ವೃಂದದವರು ಇನ್ನಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ, ಗ್ರಾಮಸ್ಥರಿಗೆ ಇಂತಹ ಶಿಥಿಲಾವಸ್ಥೆಯಲ್ಲಿ ಇರುವ ಶಾಲೆಯಲ್ಲಿ ತಮ್ಮ ಮಕ್ಕಳೇ ಕಲಿಯುತ್ತಿದ್ದರೂ ಗ್ರಾಮಸ್ಥರು ಮಾತ್ರ ನಿರ್ಲಿಪ್ತರಾಗಿರುವುದು ವಿಷಾದಕರ ಸಂಗತಿ.
ಅಡುಗೆ ಕೊಠಡಿ ಸೇರಿದಂತೆ 10 ಕೊಠಡಿಗಳಿದ್ದು, ಆರು ಕೊಠಡಿಗಳು ದುರಸ್ತಿಯಲ್ಲಿವೆ. ಶಿಕ್ಷಣ ಪ್ರೇಮಿ ಶಿವನಗೌಡ ಮನೆತನದವರು ಪ್ರೌಢಶಾಲೆಗೆ 5 ಎಕರೆ ಭೂಮಿಯನ್ನು ಸರಕಾರಕ್ಕೆ ದಾನ ನೀಡಿದ್ದರಿಂದ 2006-07ರಲ್ಲೇ ಸುಮಾರು 23ಲಕ್ಷ ವೆಚ್ಚದಲ್ಲಿ ಪ್ರೌಢಶಾಲೆ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಯಿತು.
ಆದರೆ, ಸಮರ್ಪಕವಾಗಿ ಅನುದಾನ ಬಿಡುಗಡೆಯಾಗದ್ದರಿಂದ ಮತ್ತು ಕಟ್ಟಡ ಸಾಮಗ್ರಿಗಳಲ್ಲಿ ಬೆಲೆಯ ವ್ಯತ್ಯಾಸದಿಂದ ಕಟ್ಟಡ ಕಾಮಗಾರಿ ಕುಂಟುತ್ತ ಸಾಗಿದ್ದು, ಇದುವರೆಗೂ ಪೂರ್ಣಗೊಂಡಿಲ್ಲ ಈ ಕಾರಣದಿಂದ ಪ್ರೌಢಶಾಲೆಯು ಪ್ರಾಥಮಿಕ ಶಾಲೆಯ ಕಟ್ಟಡದಲ್ಲೆ ಉಳಿಯುವಂತಾಗಿದೆ.
ನಮ್ಮ ಶಾಲೆಯ ಸಮಸ್ಯೆಯನ್ನು ವಿಧಾನಸಭೆಯಲ್ಲೇ ಶಾಸಕ ದೊಡ್ಡನಗೌಡ ಜಿ. ಪಾಟೀಲ ಧ್ವನಿ ಎತ್ತಿದ್ದಾರೆ. ಈಗ ಸ್ವತಃ ಡಿಡಿಪಿಐ ಅವರೇ ಆಸಕ್ತಿ ತೋರಿಸಿದ್ದು, ಗುತ್ತಿಗೆದಾರರಿಗೆ ಉಳಿದ ಸುಮಾರು 5 ಲಕ್ಷ ಹಣವನ್ನು ಹೊಂದಿಸಿ ಕೊಡುವುದಾಗಿ ತಿಳಿಸಿದ್ದಾರೆ. ಒಂದೆರಡು ವಾರದಲ್ಲಿ ಸಮಸ್ಯೆ ಬಗೆಹರಿಯುವ ಭರವಸೆ ಇದೆ. ಈಗಿರುವ ಶಾಲೆಯ ಮೂರು ಕೊಠಡಿ ಕೆಡವಿ ಹೊಸ ಕಟ್ಟಡ ಕಟ್ಟಲು ಆದೇಶಿಸಲಾಗಿದೆ. –ವಿ.ವಾಯ್ ಪಾಟೀಲ, ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಲಾಲತ್ತಗಿ, ಪ್ರಾಥಮಿಕ ಶಾಲಾ ಮುಖ್ಯಗುರುಗಳು
ಶಾಲೆಯ ಕಟ್ಟಡ ಕಾಮಗಾರಿ ಸಂಪೂರ್ಣವಾಗಿದೆ. ಕೇವಲ ಬಾಗಿಲು, ಕಿಟಕಿ ಜೋಡಣೆ ಮತ್ತು ಬಣ್ಣ ಹಚ್ಚುವ ಕೆಲಸ ಮಾತ್ರ ಇದ್ದು, ಡಿಡಿಪಿಐ ಅವರು ಉಳಿದ ಬಾಕಿ ಹಣ ನೀಡುವ ಭರವಸೆ ನೀಡಿದ್ದಾರೆ. ಎರಡು ವಾರದಲ್ಲಿ ಕಟ್ಟಡವನ್ನು ಶಿಕ್ಷಣ ಇಲಾಖೆಗೆ ಒಪ್ಪಿಸುತ್ತೇನೆ. -ಶಿವನಗೌಡ ಪಾಟೀಲ ಗುತ್ತಿಗೆದಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ