ಮಕ್ಕಳಿಗೆ ಸಂಸ್ಕಾರಭರಿತ ಶಿಕ್ಷಣ ಅಗತ್ಯ: ಡಾ| ವಿಜಯಲಕ್ಷ್ಮೀ

ವಿಕಸನಕ್ಕೆ ತಾಯಿ ಮತ್ತು ಸಮರ್ಥಗುರುವಿನ ಮಾರ್ಗದರ್ಶನ ಅಗತ್ಯವಾಗಿಬೇಕು.

Team Udayavani, Jul 13, 2022, 5:36 PM IST

ಮಕ್ಕಳಿಗೆ ಸಂಸ್ಕಾರಭರಿತ ಶಿಕ್ಷಣ ಅಗತ್ಯ: ಡಾ| ವಿಜಯಲಕ್ಷ್ಮೀ

ಬಾಗಲಕೋಟೆ: ಒಂದು ರಾಷ್ಟ್ರೀಯ ಭವಿಷ್ಯ ನಿಂತಿರುವುದು ಒಳ್ಳೆಯ ಸಂಸ್ಕಾರವಂತ ಮಕ್ಕಳ ಮೇಲೆ. ಶಿಕ್ಷಣ, ಶಿಸ್ತು, ಶಿಷ್ಟಾಚಾರ, ಸುಚಿತ್ವ, ಮತ್ತು ಸ್ವಾಸ್ಥ್ಯ ಈ ಪಂಚ ತತ್ವಗಳನ್ನು ಅಳವಡಿಸಿಕೊಂಡ ಮಕ್ಕಳು ಒಂದು ಸಮಾಜ‌, ರಾಷ್ಟ್ರದ ಆಸ್ತಿಯಾಗಬಲ್ಲರು ಎಂದು ಬೆಂಗಳೂರು ವೈದ್ಯಕೀಯ ಕಾಲೇಜಿನ ಹಾಗೂ ಸಂಶೋಧನ ಸಂಸ್ಥೆಯ ಹಿರಿಯ ವಿಶ್ರಾಂತ ವೈದ್ಯ ಪ್ರಾಧ್ಯಾಪಕಿ ಡಾ|ವಿಜಯಲಕ್ಷ್ಮೀ ಬಾಳೆಕುಂದ್ರಿ ಹೇಳಿದರು.

ನಗರದ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಕಾಲೇಜಿನ ಮಹಿಳಾ ಸಶಕ್ತೀಕರಣ ಘಟಕ, ಅಕ್ಕಮಹಾದೇವಿ ಮಹಿಳಾ ಕಾಲೇಜಿನ ಮಹಿಳಾ ಸಶಕ್ತೀಕರಣ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವ್ಯಕ್ತಿತ್ವ ವಿಕಸನ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತೀಯ ಸಾಮಾಜಿಕ ಮತ್ತು ಕೌಟುಂಬಿಕ ವ್ಯವಸ್ಥೆಯಲ್ಲಿ ಮಹಿಳೆ ಕೇಂದ್ರ ಬಿಂದು. ಶ್ರಮದ ಬದುಕನ್ನು ತಳೆದು, ತನ್ನ ನಿರಂತರ ಕ್ರಿಯಾಶೀಲತೆಯಿಂದ ಸಮಾಜದ ವಿವಿಧ ಕ್ಷೇತ್ರಗಳಲ್ಲಿ$ವಿವಿಧ ಆಯಾಮಗಳಲ್ಲಿ ವೈವಿಧ್ಯಮಯವಾಗಿ ಕಾರ್ಯನಿರ್ವಹಿಸಿ ತನ್ನ ಅಸ್ಮಿತೆಯನ್ನು ಉಳಿಸಿಕೊಂಡು ಬಂದವಳು.

ಕೌಟುಂಬಿಕ ಅನೇಕ ಸಮಸ್ಯೆ ಮತ್ತು ಸವಾಲುಗಳ ಮಧ್ಯದಲ್ಲಿಯೂ ತನ್ನ ಆತ್ಮಸ್ಥೈರ್ಯ ಕಳೆದುಕೊಳ್ಳದೇ ತನ್ನ ಕುಟುಂಬಕ್ಕೆ ಆತ್ಮಬಲವನ್ನು ತುಂಬಿ ಇಡಿ ಕುಟುಂಬವನ್ನು ಮುನ್ನಡೆಸುತ್ತಾ ಬಂದಿದ್ದಾಳೆ.

ಅಂತಹ ತಾಯಿಯೊಂದಿಗೆ ಅಜ್ಜ, ಅಜ್ಜಿಯರ ಸಂಸ್ಕಾರ ಒಂದೆಡೆಯಾದರೆ, ಇನ್ನೊಂದೆಡೆ ಗುರುವಿನ ಸಂಸ್ಕಾರ ಮಗುವಿಗೆ ದೊರೆಯುವಂತಾಗಬೇಕು. ವ್ಯಕ್ತಿತ್ವ ವಿಕಸನಕ್ಕೆ ತಾಯಿ ಮತ್ತು ಸಮರ್ಥಗುರುವಿನ ಮಾರ್ಗದರ್ಶನ ಅಗತ್ಯವಾಗಿಬೇಕು. ಪರಿಶುದ್ಧವಾದ, ಪ್ರಾಮಾಣಿಕತೆಯ ಮತ್ತು ಅನ್ಯರ ನೋವಿಗೆ ಸ್ಪಂದಿಸುವ ಹೃದಯವಂತಿಕೆಯಲ್ಲಿ ಮಗುವಿನ ವ್ಯಕ್ತಿತ್ವ ಅರಳುವಂತಾಗಬೇಕು ಎಂದರು.

ಬಿವಿವಿ ಸಂಘದ ಮುಖ್ಯ ಸಲಹೆಗಾರ ಡಾ| ಮೀನಾ ಚಂದಾವರಕರ ಮಾತನಾಡಿ, ಅವರಿಬ್ಬರ ಸಹಕಾರ ಮನೋಭಾವ ಬಹಳ ಮುಖ್ಯ ಎಂದು ಹೇಳಿದರು. ಕಾಲೇಜಿನ ಪ್ರಾಚಾರ್ಯ ಪ್ರೊ| ಎಸ್‌.ಎ. ಭೂಸನೂರಮಠ, ಆಡಳಿತಾಧಿ ಕಾರಿ ಪ್ರೊ| ವಿ.ಆರ್‌. ಶಿರೋಳ, ಮಹಿಳಾ ಕಾಲೇಜಿನ ಪ್ರಾಚಾರ್ಯೆ ಎಸ್‌. ಜೆ. ಒಡೆಯರ, ಡಾ|ಎಸ್‌.ಎಂ. ಗಾಂವಕರ, ಎಸ್‌. ಆರ್‌. ದೇಶಪಾಂಡೆ, ಪಿ.ಕೆ. ಚೌಗಲಾ, ವಿ.ಆರ್‌. ಗೌಡರ, ಟಿ.ಪಿ. ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಎಸ್‌.ಜೆ. ಒಡೆಯರ ಸ್ವಾಗತಿಸಿ ಪರಿಚಯಿಸಿದರು. ಶ್ವೇತಾ ಪಾಟೀಲ ನಿರೂಪಿಸಿದರು. ಎಸ್‌.ಆರ್‌. ದೇಶಪಾಂಡೆ ವಂದಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.