ಹೋಳಿ ವೇಳೆ ಶಿರಹಟ್ಟಿಯಲ್ಲಿ ಗುಂಪು ಘರ್ಷಣೆ;ನಾಲ್ವರಿಗೆ ಗಾಯ
Team Udayavani, Mar 1, 2018, 10:22 AM IST
ಶಿರಹಟ್ಟಿ: ಇಲ್ಲಿನ ಯಳವಟ್ಟಿ ಗ್ರಾಮದಲ್ಲಿ ಬುಧವಾರ ರಾತ್ರಿ ಹೋಳಿ ಹುಣ್ಣಿಮೆಯ ಕಾಮ ದಹನದ ವಿಚಾರದಲ್ಲಿ ಒಂದೇ ಜನಾಂಗದ 2 ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು ದಿವ್ಯಾಂಗ ಮಹಿಳೆ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಜಕೀಯ ವೈಷಮ್ಯ ಹಿನ್ನಲೆಯಲ್ಲಿ ಮಾರಾಮಾರಿ ನಡೆದಿದ್ದು, ಸಾವಮ್ಮ ಎಂಬ ದಿವ್ಯಾಂಗ ಮಹಿಳೆಯೂ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಫಕೀರಪ್ಪ ಮತ್ತು ಬಸವಣ್ಣಪ್ಪ ಎನ್ನುವವರ ಕುಟುಂಬದ ನಡುವೆ ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ದ್ವೇಷವೇ ಈ ಮಾರಾಮಾರಿಗೆ ಕಾರಣ ಎನ್ನಲಾಗಿದೆ.
ಶಿರಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಗ್ರಾಮದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?