ಘಟಪ್ರಭಾ ತೀರದಲ್ಲಿ ಸ್ವಚ್ಛತಾ ಅಭಿಯಾನ
ನದಿ ತೀರದ ಭಾಗದಲ್ಲಿ ತ್ಯಾಜ್ಯ ವಸ್ತುಗಳ ಸಂಗ್ರಹ
Team Udayavani, Mar 23, 2022, 1:37 PM IST
ಮುಧೋಳ: ಘಟಪ್ರಭಾ ನದಿ ತೀರದಲ್ಲಿ ತ್ಯಾಜ್ಯ ವಸ್ತುಗಳನ್ನು ಬಿಸಾಕಿರುವ, ಸ್ನಾನ ಮಾಡಿ ಹಾಗೇ ಉಳಿಸಿ ಹೋಗಿರುವ ಬಟ್ಟೆಗಳು, ಕಸ ಕಡ್ಡಿಗಳು, ಉಳಿದಿರುವ ತ್ಯಾಜ್ಯ ವಸ್ತುಗಳನ್ನು ಬಿಸಾಕಲಾಗಿತ್ತು. ಅದನ್ನು ಗಮನಿಸಿ ಸಂಗ್ರಹಿಸಿ ಸ್ವಚ್ಛಗೊಳಿಸುವ ಕಾರ್ಯಕ್ರಮವನ್ನು ದಾಲ್ಮಿಯಾ ಸಿಮೆಂಟ್ ಭಾರತ್ ಲಿಮಿಟೆಡ್ ಮಾನವ ಸಂಪನ್ಮೂಲ ಹಿರಿಯ ವ್ಯವಸ್ಥಾಪಕ ಉಮೇಶ ದೇಸಾಯಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ನದಿ ತೀರದ ಭಾಗದಲ್ಲಿ ತ್ಯಾಜ್ಯ ವಸ್ತುಗಳ ಸಂಗ್ರಹವಾಗಿತ್ತು. ಆ ಸಮಸ್ಯೆಯನ್ನು ಗಮನಿಸಿಯೇ ನದಿ ಯಾವಾಗಲೂ ಸ್ವಚ್ಛತೆಯಿಂದ ಕೂಡಿರಬೇಕು. ತ್ಯಾಜ್ಯ ಮುಕ್ತವಾಗಿರಬೇಕೆಂಬ ಕಳಕಳಿಯಿಂದಲೇ ನಮ್ಮ ಕಂಪನಿಯ ಅಧಿಕಾರಿಗಳು, ಸಿಬ್ಬಂದಿ, ಸ್ನೇಹಿತರ ಸಹಕಾರದಿಂದ ಸ್ವಚ್ಛತೆ ಅಭಿಯಾನ ಆಯೋಜನೆ ಮಾಡಿದ್ದೇವೆ. ಮುಂದೇ ಇದೇ ರೀತಿ ವಿಭಿನ್ನವಾಗಿರುವ ಕಾರ್ಯಗಳನ್ನು ಮಾಡುವ ಆಶಯ ವನ್ನು ದೇಶಾಯಿ ವ್ಯಕ್ತಪಡಿಸಿದರು.
ಬೆಳಗ್ಗೆ 6.30ರಿಂದ 8 ಗಂಟೆವರೆಗೂ ಅಕ್ಕಪಕ್ಕದ ತ್ಯಾಜ್ಯವಸ್ತುಗಳನ್ನು ಸಂಗ್ರಹಿಸಿ ನಗರಸಭೆ ವಾಹನಗಳಿಗೆ ತುಂಬಿದರು. ನಗರಸಭೆ ಅಧ್ಯಕ್ಷ ಗುರುಪಾದ ಕುಳಲಿ, ಪೌರಾಯುಕ್ತ ಶಿವಪ್ಪ ಅಂಬಿಗೇರ, ಸಿಮೆಂಟ್ ಕಂಪನಿಯ ಅಧಿಕಾರಿ ಅಜಯಸಿಂಗ್, ಮೋಹನ ಎಂ.ಎನ್.,ಜೈ ಶಂಕರ ತಿವಾರಿ, ಮಾಂಕುಮಾರ ಪಾಠಕ, ಆರೋಗ್ಯ ನಿರೀಕ್ಷಿಕ ಸಂತೋಷ ಬೆಳ್ಳಿಕಟ್ಟಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ