ದತ್ತ ಕೆರೆಗೆ ಸ್ವಚ್ಛತೆ ಭಾಗ್ಯ; ಯುವ ಸಮೂಹ ಕಾರ್ಯಕ್ಕೆ ಮೆಚ್ಚುಗೆ

ಕೆರೆಗೆ ಮತ್ತೆ ಗತವೈಭವ ತರುವ ಉದ್ದೇಶ

Team Udayavani, May 30, 2022, 3:19 PM IST

16

ಮುಧೋಳ: ಬಹಳ ವರ್ಷದಿಂದ ಸ್ವಚ್ಛತೆ ಕಾಣದಾಗಿದ್ದ ಐತಿಹಾಸಿಕ ದತ್ತ ಕೆರೆಯ ಗತವೈಭವವನ್ನು ಮರಳಿ ತರುವ ಉದ್ದೇಶದೊಂದಿಗೆ ಪಣ ತೊಟ್ಟ ಯುವ ಸಮೂಹದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಗರದ ವಿವಿಧ ಯುವಕ ಮಿತ್ರ ಮಂಡಳಿ ಸದಸ್ಯರು ಕೆರೆ ಸ್ವಚ್ಛತೆ ಅಭಿಯಾನಕ್ಕೆ ಕೈ ಜೋಡಿಸಿರುವುದು ಪರಿಸರ ಪ್ರಿಯರಲ್ಲಿ ಸಂತಸ ಮನೆ ಮಾಡಿದೆ.

ಗುರೂಜಿ ಮಾತು ಪ್ರೇರಣೆ: ಇತ್ತೀಚೆಗೆ ನಗರಕ್ಕಾಗಮಿಸಿದ್ದ ಗೌರಿಗದ್ದೆ ಆಶ್ರಮದ ಅವಧೂತ ವಿನಯ ಗುರೂಜಿಯವರು ದತ್ತ ಮಂದಿರಕ್ಕೆ ಭೇಟಿ ನೀಡಿದ್ದಾಗ ದತ್ತಕೆರೆ ವೀಕ್ಷಿಸಿದ್ದರು. ದೇವಸ್ಥಾನದ ಪಕ್ಕದ ಕೆರೆ ಸ್ವಚ್ಛತೆಯಿಂದಿದ್ದರೆ ಶೋಭೆ ಎಂಬ ಮಾತು ಹೇಳಿದ್ದರು. ಇದನ್ನೇ ಪ್ರೇರಣೆಯಾಗಿಸಿಕೊಂಡ ಯುವಕರ ಕೆರೆ ಸ್ವಚ್ಛತೆ ಅಭಿಯಾನಕ್ಕೆ ಟೊಂಕ ಕಟ್ಟಿ ನಿಂತಿದೆ.

ಮೊದಲ ದಿನ ಮೂವತ್ತು ಜನ: ಅಂದಾಜು ಒಂದು ತಿಂಗಳು ಕಾಲ ಸ್ವಚ್ಛತೆ ಅಭಿಯಾನದ ಯೋಜನೆ ಹಾಕಿಕೊಂಡಿದ್ದು, ಸ್ವಚ್ಛತಾ ಕಾರ್ಯಕ್ಕೆ ಮೊದಲ ದಿನ ಮೂವತ್ತು ಜನರು ಕೈಜೋಡಿಸಿದ್ದಾರೆ. ಬಹುತೇಕ ಯುವಕರು ಅವರವರ ಕೆಲಸ ಕಾರ್ಯಗಳಿಗನುಗುಣವಾಗಿ ಅನುಕೂಲವಾಗುವಂತೆ ಬೆಳಗಿನ ಜಾವ 6ರಿಂದ 9 ಗಂಟೆವರೆಗೆ ಕೆರೆ ಸ್ವಚ್ಛತೆ ಕಾರ್ಯದಲ್ಲಿ ತೊಡಗುತ್ತಾರೆ. ಇದರಿಂದ ಕೆರೆ ಸ್ವತ್ಛತೆಯೂ ಆಗುತ್ತದೆ, ವ್ಯಾಯಾಮವೂ ಆಗುತ್ತದೆ. ಯುವಕರು ಹಮ್ಮಿಕೊಂಡ ಸ್ವಚ್ಛತೆ ಅಭಿಯಾನದ ಮೊದಲ ದಿನ ನಗರಸಭೆ ಅಧ್ಯಕ್ಷ ಗುರುಪಾದ ಕುಳಲಿಯೂ ಸಹ ಭಾಗಿಯಾಗಿದ್ದರು.

ಸ್ವಚ್ಛತೆಗೆ ಯಾರೇ ಬಂದರೂ ಸ್ವಾಗತ: ನಗರದ ಕೆರೆ ಅಭಿವೃದ್ಧಿಗೆ ಪಕ್ಷಾತೀತವಾಗಿ ದುಡಿಯುತ್ತಿದ್ದು, ಕೆರೆ ಸ್ವಚ್ಛತೆಗೆ ಯಾರೇ ಬಂದರೂ ಸ್ವಾಗತಿಸುತ್ತೇವೆ. ನಮಗೆ ವಿವಿಧ ಯುವಕ ಸಂಘದವರು ಕರೆ ಮಾಡಿ ಕೆರೆ ಸ್ವಚ್ಛತೆಗೆ ಕೈಜೋಡಿಸುವ ಭರವಸೆ ನೀಡಿದ್ದು, ಹೊಸ ಹುಮ್ಮಸ್ಸು ಮೂಡಿಸಿದೆ ಎನ್ನುತ್ತಾರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸದಾ ಜಾಧವ.

ವಧೂತ ವಿನಯ ಗುರೂಜಿಯವರ ಪ್ರೇರಣೆಯಿಂದ ಐತಿಹಾಸಿಕ ದತ್ತ ಕೆರೆ ಸ್ವಚ್ಛತೆ ಅಭಿಯಾನಕ್ಕೆ ಮುಂದಾಗಿದ್ದು, ಅಭಿಯಾನದ ಮೊದಲ ದಿನದ ಕಾರ್ಯ ಮುಗಿದ ಬಳಿಕ ಹಲವಾರು ಯುವಕ ಸಂಘದವರು ಕರೆ ಮಾಡಿ ಸ್ವಚ್ಛತಾ ಅಭಿಯಾನಕ್ಕೆ ನಾವೂ ಕೈಜೋಡಿಸುತ್ತೇವೆ ಎಂದು ತಿಳಿಸಿದ್ದಾರೆ. ಯಾರೇ ಬಂದರೂ ಅವರಿಗೆ ಸ್ವಾಗತ. –ಸದಾ ಜಾಧವ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.