ಕಬ್ಬಿನ ಗದ್ದೆಗೆ ಬಿದ್ದ ಸಿಎಂ ಭದ್ರತಾ ವಾಹನ: ಪಿಎಸ್ಐ ಸೇರಿ ಮೂವರಿಗೆ ಗಾಯ
Team Udayavani, Oct 4, 2019, 2:21 PM IST
ಬಾಗಲಕೋಟೆ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಳಗಾವಿ ಬಾಗಲಕೋಟೆ ಗಡಿಯಿಂದ ಜಿಲ್ಲೆಗೆ ಕರೆತರಲು ತೆರಳುತ್ತಿದ್ದ ಸಿಎಂ ಭದ್ರತಾ ವಾಹನ ಪಲ್ಟಿಯಾಗಿ ಪಿಎಸ್ಐ ಸೇರಿ ಮೂವರು ಗಾಯಗೊಂಡ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಕಪ್ಪಲಗುದ್ದಿ ಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಮುಖ್ಯಮಂತ್ರಿಗಳ ವಾಹನಕ್ಕೆ ಭದ್ರತೆ ನೀಡಲು ತೆರಳುತ್ತಿದ್ದ ಇಳಕಲ್ಲ ನಗರ ಠಾಣೆಯ ಪಿಎಸ್ಐ ಕುಮಾರ ಹಾಡಕರ, ಚಾಲಕ ಶಿವಾನಂದ ಕಟ್ಟಿಮನಿ ಹಾಗೂ ಮಹಾಲಿಂಗಪುರ ಪೊಲೀಸ್ ಠಾಣೆಯ ಪೇದೆ ಮಂಜುನಾಥ ರಾಠೋಡ ಗಾಯಗೊಂಡಿದ್ದು, ಅವರನ್ನು ಮಹಾಲಿಂಗಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಬ್ಬಿನ ಗದ್ದೆಗೆ ಬಿದ್ದ ಪೊಲೀಸ್ ಜೀಪ್: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೂಲಕ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿಗೆ ಬರಲಿದ್ದರು. ಹೀಗಾಗಿ ಬೆಳಗಾವಿ ಜಿಲ್ಲೆಯ ಗಡಿಯಿಂದ ನಮ್ಮ ಜಿಲ್ಲೆಗೆ ಮುಖ್ಯಮಂತ್ರಿಗಳನ್ನು ಬರ ಮಾಡಿಕೊಂಡು, ಅಲ್ಲಿಂದ ಸಿಎಂ ವಾಹನಗಳಿಗೆ ಭದ್ರತೆ ನೀಡಲು ಇಳಕಲ್ಲ ನಗರ ಠಾಣೆಯ ಪಿಎಸ್ಐ ಕುಮಾರ ಹಾಡಕರ ನಿಯೋಜನೆಗೊಂಡಿದ್ದರು.
ಅವರು ಮಹಾಲಿಂಗಪುರ ಬಳಿಯ ಜಿಲ್ಲೆಯ ಗಡಿ ಗ್ರಾಮವಾದ ಸೈದಾಪುರ ಮತ್ತು ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಮಾರ್ಗದಲ್ಲಿ ಸಿಎಂ ಭದ್ರತೆಗಾಗಿ ರಿಹರ್ಸಲ್ ಮಾಡುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ವಾಹನ, ರಸ್ತೆ ಪಕ್ಕದ ಕಬ್ಬಿನ ಗದ್ದೆಗೆ ಬಿದ್ದಿದೆ. ಕೂಡಲೇ ಸ್ಥಳೀಯರು ಹಾಗೂ ರೈತರು, ಪಿಎಸ್ಐ ಸೇರಿ ಮೂವರು ಪೊಲೀಸ್ರಿಗೆ ಪ್ರಾಥಮಿಕ ಉಪಚಾರ ನಡೆಸಿ, ಬಳಿಕ 108 ತುರ್ತು ವಾಹನಕ್ಕೆ ಕರೆ ಮಾಡಿ, ಮಹಾಲಿಂಗಪುರ ಆಸ್ಪತ್ರೆಗೆ ಸಾಗಿಸಲು ನೆರವಾದರು. ಸಿಎಂ ಭದ್ರತಾ ವಾಹನ ಪಲ್ಟಿಯಾದ ಹಿನ್ನೆಲೆಯಲ್ಲಿ ಬೇರೋಂದು ಭದ್ರತಾ ವಾಹನವನ್ನು ನಿಯೋಜನೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ