ಸಾಲ ಮಾಡಿಯಾದರೂ ಯುಕೆಪಿ ಪೂರ್ಣ ಮಾಡ್ತೇವೆ: ಸಿಎಂ ಯಡಿಯೂರಪ್ಪ
ಮುಂದಿನ ತಿಂಗಳು ಪ್ರಧಾನಿ ಭೇಟಿ / ಆಲಮಟ್ಟಿ ಯೋಜನೆಗೆ ನೆರವು ನೀಡಲು ಮನವಿ
Team Udayavani, Aug 25, 2020, 4:43 PM IST
ಬಾಗಲಕೋಟೆ: ರಾಜ್ಯದ ಬೃಹತ್ ನೀರಾವರಿ ಯೋಜನೆಯಡಿಯಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ 2ನೇ ಹಂತದ ಎಲ್ಲ ಕಾಮಗಾರಿಗಳನ್ನು ಸಾಲ ಮಾಡಿಯಾದರೂ ಪೂರ್ಣಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಆಲಮಟ್ಟಿಯಲ್ಲಿ ಕೃಷ್ಣಾ ನದಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ 6.24 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಯುಕೆಪಿ ಯೋಜನೆ 2ನೇ ಹಂತಕ್ಕೆ 130 ಟಿಎಂಸಿ ನೀರು ಹಂಚಿಕೆಯಾಗಿದೆ. ಈ ನೀರು ಸದ್ಭಳಕೆ ಮಾಡಿಕೊಳ್ಳಲು ಬದ್ಧತೆಯಿಂದ ಕೆಲಸ ಮಾಡುತ್ತೇವೆ ಎಂದರು.
ಕೋವಿಡ್ ಹಿನ್ನೆಲೆ ರಾಜ್ಯದ ಆರ್ಥಿಕ ಸ್ಥಿತಿಗತಿ ಸರಿಯಾಗಿಲ್ಲ. ಆದರೂ ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆಯಾಗಲು ಬಿಡಲ್ಲ. ಪ್ರವಾಹದಿಂದ ಹಾನಿಯಾದ ಬೆಳೆ ಹಾಗೂ ಬಿದ್ದ ಮನೆಗಳಿಗೆ ತಕ್ಷಣ ಪರಿಹಾರ, ಹಾಳಾದ ರಸ್ತೆಗಳನ್ನು ತಕ್ಷಣ ದುರಸ್ಥಿಗೊಳಿಸಲು ಸೂಚಿಸಲಾಗಿದೆ ಎಂದರು.
ಪ್ರವಾಹ ಹಾನಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳ ಸಚಿವರು, ಸಂಸದರು, ಶಾಸಕರೊಂದಿಗೆ ಒಂದು ಗಂಟೆಗಳ ಕಾಲ ಚರ್ಚೆ ಮಾಡಿದ್ದೇನೆ. ಈ ಭಾಗದ ಜನಪ್ರತಿನಿಧಿಗಳು ಒಂದೇ ಮನವಿಯನ್ನು ಒಕ್ಕೋರಲಿನಿಂದ ಹೇಳಿದ್ದಾರೆ. ಆಲಮಟ್ಟಿ ಜಲಾಶಯವನ್ನು 524.256 ಮೀಟರ್ ಗೆ ಎತ್ತರಿಸಬೇಕು. ಯುಕೆಪಿ 2 ನೇ ಹಂತದ ಎಲ್ಲ ಕಾಮಗಾರಿ ಪೂರ್ಣಗೊಳಿಸಲು ಕೇಳಿಕೊಂಡಿದ್ದಾರೆ. ಇದಕ್ಕೆ ನಾನು ಸಂಪೂರ್ಣ ಭರವಸೆ ನೀಡಿದ್ದು, ಆರ್ಥಿಕ ಸಮಸ್ಯೆ ಇದ್ದರೂ ಸಾಲ ಮಾಡಿಯಾದ್ರೂ ಈ ಯೋಜನೆ ಪೂರ್ಣಗೊಳಿಸುವ ಭರವಸೆ ನೀಡಿದ್ದೇನೆ ಎಂದು ಹೇಳಿದರು.\
ಇದನ್ನೂ ಓದಿ: ಡಿಕೆ ಶಿವಕುಮಾರ್ ಗೆ ಸೋನಿಯಾ, ರಾಹುಲ್ ಗಾಂಧಿ ದೂರವಾಣಿ ಕರೆ; ಶೀಘ್ರ ಗುಣಮುಖರಾಗುವಂತೆ ಹಾರೈಕೆ
ಮುಂದಿನ ತಿಂಗಳು ಪಿಎಂ ಭೇಟಿ:
ಆಲಮಟ್ಟಿಯ ಕೃಷ್ಣಾ ಮೇಲ್ದಂಡೆ ಯೋಜನೆಗೆ ಆರ್ಥಿಕ ನೆರವು ನೀಡುವಂತೆ ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿಮಾಡಿ ಮನವಿ ಮಾಡುತ್ತೇನೆ. ರಾಜ್ಯದ ಪಾಲಿನ ಜಿ.ಎಸ್.ಟಿ ಹಣ ನೀಡುವಂತೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಪ್ರಲ್ಹಾದ ಜೋಶಿ ಅವರೊಂದಿಗೆ ಚರ್ಚೆ ಮಾಡಿರುವೆ. ಶೀಘ್ರವೇ ಆ ಹಣ ಕೇಂದ್ರದಿಂದ ರಾಜ್ಯಕ್ಕೆ ಬರಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ