ಸಮ್ಮಿಶ್ರ ಸರ್ಕಾರದ ಸಚಿವರ ಅವಧಿ 2 ವರ್ಷ: ಸಿದ್ದರಾಮಯ್ಯ
Team Udayavani, Jun 11, 2018, 6:30 AM IST
ಬಾಗಲಕೋಟೆ: ಸಮ್ಮಿಶ್ರ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಿರುವುದು ಎರಡು ವರ್ಷಕ್ಕೆ ಮಾತ್ರ. ಅತೃಪ್ತರಿಗೆ ಮುಂದೆ ಮಂತ್ರಿ ಸ್ಥಾನ ನೀಡುತ್ತೇವೆಂದು ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಹೇಳಿದರು.
ಭಾನುವಾರ ನೀಲಗುಂದ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅತೃಪ್ತ ಶಾಸಕರಿಗೆ ಸ್ಪಂದಿಸಿಲ್ಲ ಅನ್ನೋದು ಊಹಾಪೋಹ. ಅಸಮಾಧಾನ ಇರುವ ಎಲ್ಲ ಶಾಸಕರೊಂದಿಗೆ ದಿನಕ್ಕೆ 2ರಿಂದ 3 ಬಾರಿ ಮಾತನಾಡಿದ್ದೇನೆ. ಸದ್ಯ ಅವರೆಲ್ಲ ಸಮಾಧಾನವಾಗಿದ್ದಾರೆ. ಯಾವುದೇ ರೀತಿಯ ಅತೃಪ್ತಿ ಇಲ್ಲ. ಸರ್ಕಾರಕ್ಕೂ ತೊಂದರೆಯಿಲ್ಲ. ನಾನು ಹೈಕಮಾಂಡ್ ಜತೆಗೆ ಫೋನ್ನಲ್ಲಿ ಮಾತನಾಡಿದ್ದೇನೆ. ಎಲ್ಲ ಅಸಮಾಧಾನ ಶಮನವಾಗಿದೆ. ಸದ್ಯ ಮಂತ್ರಿಗಳನ್ನು ಮಾಡಿದ್ದು ಎರಡು ವರ್ಷಕ್ಕೆ ಮಾತ್ರ. ಮುಂದೆ ಅರ್ಹರಿಗೆ ಸಚಿವ ಸ್ಥಾನ ನೀಡುತ್ತೇವೆ ಎಂದರು.
ಎಂ.ಬಿ. ಪಾಟೀಲ ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿರುವುದು ನಿಜ. ಇನ್ನೊಂದು ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಯಾಗಲ್ಲ. ಹೈಕಮಾಂಡ್ನಿಂದ ನನಗೆ ಬುಲಾವ್ ಬಂದಿಲ್ಲ. ಅದೆಲ್ಲ ಸುಳ್ಳು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬುದನ್ನು ರಾಹುಲ್ ಗಾಂಧಿ ನಿರ್ಧರಿಸುತ್ತಾರೆ. ನಾನು ಯಾರನ್ನೂ ಶಿಫಾರಸು ಮಾಡಲ್ಲ. ರಾಹುಲ್ ಗಾಂಧಿ ನನ್ನನ್ನು ಕರೆದು ಕೇಳಿದರೆ ನನ್ನ ಅಭಿಪ್ರಾಯ ತಿಳಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ