ಕುಸಿದ ಮೆಕ್ಕೆಜೋಳ ಬೆಲೆ: ರೈತ ಕಂಗಾಲು

690 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಬೆಳೆ

Team Udayavani, Apr 21, 2020, 1:43 PM IST

ಕುಸಿದ ಮೆಕ್ಕೆಜೋಳ ಬೆಲೆ: ರೈತ ಕಂಗಾಲು

ಸಾಂದರ್ಭಿಕ ಚಿತ್ರ

ಗುಳೇದಗುಡ್ಡ: ತಾಲೂಕಿನಾದ್ಯಂತ 690 ಹೆಕ್ಟೇರ್‌ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದ ರೈತರು ಕಂಗಾಲಾಗಿದ್ದಾರೆ. ಲಾಕ್‌ಡೌನ್‌ನಿಂದ ಮಾರುಕಟ್ಟೆಯಲ್ಲಿ ಕೊಂಡುಕೊಳ್ಳುವವರೇ ಇಲ್ಲದೇ ಮೆಕ್ಕೆಜೋಳದ ಬೆಲೆ ಪಾತಾಳಕ್ಕೆ ಕುಸಿದಿದ್ದು, ಇದರಿಂದ ರೈತರು ಮತ್ತಷ್ಟು ಆತಂಕ್ಕೀಡಾಗಿದ್ದು, ಕೈಗೆ ಬಂದರೂ ಬಾಯಿಗೆ ಬರಲಿಲ್ಲ ಎನ್ನುವ ಹಾಗೇ ಆಗಿದೆ ರೈತರ ಸ್ಥಿತಿ.

ತಾಲೂಕಿನ ಕೋಟೆಕಲ್‌ 15, ಕಟಗೇರಿ 65, ಹಳದೂರ 25, ಬೂದಿನಗಡ 5, ಕಟಗಿನಹಳ್ಳಿ 10, ಕೊಂಕಣಕೊಪ್ಪ 25, ಪರ್ವತಿ 20 ಹೆಕ್ಟೇರ್‌ ಪ್ರದೇಶ ಸೇರಿ ಸುಮಾರು 690 ಹೆಕ್ಟೇರ್‌ ಪ್ರದೇಶದಲ್ಲಿ ಹಿಂಗಾರಿನ ಬೆಳೆ ಮೆಕ್ಕೆಜೋಳವನ್ನು ರೈತರು ಬಿತ್ತಿದ್ದು, ಬೆಳೆಯನ್ನು ಚೆನ್ನಾಗಿ ಬಂದಿದೆ. ಆದರೆ, ಮಾರಾಟ ಮಾಡಲು ಮಾರುಕಟ್ಟೆಯೇ ಇಲ್ಲವಾಗಿದೆ.

ಫೆಬ್ರವರಿಯಲ್ಲಿ ಮೆಕ್ಕೆಜೋಳ ಪ್ರತಿ ಕ್ವಿಂಟಲ್‌ಗೆ 2070 ರೂ. ದರವಿತ್ತು. ಲಾಕ್‌ಡೌನ್‌ನಿಂದ ದರ ಕುಸಿದು, ಈಗ 1000-1100 ರೂ. ದರವಿದೆ. ರೈತರು ರಾಶಿ ಮಾಡಿ, ಚೀಲಗಳಲ್ಲಿ ಶೇಖರಣೆ ಮಾಡಿಟ್ಟರೆ, ಇನ್ನೂ ಕೆಲವರು ತೆನೆ ಸಮೇತ ಬಿಟ್ಟಿದ್ದಾರೆ. ಮೆಕ್ಕೆಜೋಳ ಮಾರಾಟ ಖರೀದಿಗೆ ಅವಕಾಶ ಸಿಗದಿದ್ದರೇ ಇನ್ನೂ ಸ್ವಲ್ಪ ದಿನಗಳಲ್ಲಿ ಮೆಕ್ಕೆಜೋಳಕ್ಕೆ ನುಸಿ ಆವರಿಸಿ ಬೆಳೆ ಶೇಖರಣೆ ಮಾಡಿಟ್ಟ ಸ್ಥಳದಲ್ಲಿ ಹಾಳಾಗುತ್ತದೆ ಎಂಬ ಚಿಂತೆ ರೈತರನ್ನು ಕಾಡುತ್ತಿದೆ.

ಕೊರೊನಾ ಹಾಗೂ ಹಕ್ಕಿಜ್ವರದ ನೆಪದಲ್ಲಿ ಬಹುತೇಕ ಕುಕ್ಕುಟೋದ್ಯಮ ನೆಲಕಚ್ಚಿದೆ. ಮೆಕ್ಕೆಜೋಳ ಕೋಳಿಗೆ ಆಹಾರವಾಗಿ ಬಳಕೆಯಾಗುತ್ತಿತ್ತು. ಈಗ ಫಾರಂಗಳು ಸಹ ಹೇಳಿಕೊಳ್ಳುವಷ್ಟರ ಮಟ್ಟಿಗೆ ಆರಂಭವಿಲ್ಲ. ಇದರಿಂದ ಮೆಕ್ಕೆಜೋಳ ಖರೀದಿಸಲು ಯಾರೂ ಮುಂದಾಗುತ್ತಿಲ್ಲ.

ಈ ಬಾರಿ ಮೆಕ್ಕೆಜೋಳ ಫಸಲು ಚೆನ್ನಾಗಿ ಬಂದಿದೆ. ಆದರೆ, ಅದನ್ನು ಕೊಂಡುಕೊಳ್ಳುವವರೇ ಇಲ್ಲವಾಗಿದೆ. ಈಗ ನಾವು ಅದಕ್ಕೆ ಖರ್ಚು ಮಾಡಿದ ಹಣವು ಸಹ ಬರದ ಸ್ಥಿತಿ ಬಂದಿದೆ. ಸರಕಾರವೇ ಇದಕ್ಕೆ ಪರಿಹಾರ ಕಲ್ಪಿಸಬೇಕು. -ಶಂಕ್ರಪ್ಪ ಕೋಟಿ, ದಂಡಪ್ಪ ಅಬಕಾರಿ ಕೋಟೆಕಲ್ಲ ರೈತರು

ತಾಲೂಕಿನಲ್ಲಿ 690 ಹೆಕ್ಟೇರ್‌ ಪ್ರದೇಶದಲ್ಲಿ ಹಿಂಗಾರಿ ಬೆಳೆ ಮೆಕ್ಕೆಜೋಳ ಬೆಳೆದಿದ್ದಾರೆ. ಬೆಂಬಲ ಬೆಲೆ ಘೋಷಣೆ ಮಾಡಬೇಕಾಗಿದೆ. ಬೆಂಬಲ ಬೆಲೆ ಬಂದ ಕೂಡಲೇ ರೈತರಿಗೆ ಮಾಹಿತಿ ನೀಡಲಾಗುವುದು. ಅಲ್ಲಿಯವರೆಗೆ ರೈತರು ಗೋವಿನ ಜೋಳ ಸಂಗ್ರಹಿಸಿಟ್ಟು ಮಾರಾಟ ಮಾಡಬಹುದು. ಮೆಕ್ಕೆಜೋಳ ಬೇಗನೆ ಕೆಡುವುದಿಲ್ಲ. -ಆನಂದ ಗೌಡರ, ಕೃಷಿ ಇಲಾಖೆ ಅಧಿಕಾರಿ

 

ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.