ನೋಡ ಬನ್ನಿ ಹಿರೇಹಳ್ಳದ ದಿಡಗಿನ ವೈಯಾರ


Team Udayavani, Sep 20, 2019, 12:39 PM IST

bk-tdy-2

ಗುಳೇದಗುಡ್ಡ: ಪಟ್ಟಣದಲ್ಲಿ ಬುಧವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಸುರಿದ ಮಳೆಗೆ ಹಿರೇ ಹಳ್ಳದ ದಿಡಗಿನ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಗುಳೇದಗುಡ್ಡ ಭಾಗದಲ್ಲಿ ಸರಿಯಾಗಿ ಮಳೆಯಾಗದ ಕಾರಣ ಈ ಹಿರೇಹಳ್ಳದ ದಿಡಗಿನ ಜಲಪಾತ ಹರಿದಿರಲಿಲ್ಲ. ಆದರೆ ಬುಧವಾರ ರಾತ್ರಿ ಸುರಿದ ಮಳೆಗೆ ಧುಮ್ಮಿಕ್ಕಿ ಹರಿಯುತ್ತಿದೆ.

ಬಿಸಿಲು ಬಿದ್ದರೇ ಮೈದುಂಬುವ ಜಲಪಾತ: ಹಿರೇಹಳ್ಳದ ದಿಡಗಿನ ಜಲಪಾತ ಈ ಭಾಗದಲ್ಲಿ ಪ್ರಸಿದ್ಧ ಜಲಪಾತವಾಗಿದ್ದು, ಸತತ ಎಡೆಬಿಡದೇ ಮಳೆಯಾಗಿ ಬಿರುಬಿಸಿಲು ಬಿದ್ದರೆ ಜಲಪಾತ ಮೈದುಂಬಿ ಹರಿಯುತ್ತದೆ. ಸುಮಾರು 35 ಅಡಿ ಎತ್ತರದಿಂದ ನೀರು ಬೀಳುವ ಮೂಲಕ ಈ ಭಾಗದಲ್ಲಿ ಸುಂದರ ಜಲಪಾತ ಸೃಷ್ಟಿಯಾಗುತ್ತದೆ. ಬೆಟ್ಟ ಗುಡ್ಡಗಳ ಹಸಿರು ಸಿರಿಯ ಮಧ್ಯೆ ಹಾಲಿನ ನೊರೆಯಂತೆ ಹರಿಯುವ ಜಲಪಾತ ನೋಡುವುದೇ ಮನಮೋಹಕ.

ಹೋಗುವ ಮಾರ್ಗ: ಜಲಪಾತಕ್ಕೆ ಗುಳೇದಗುಡ್ಡದಿಂದ ಯಾವುದೇ ದಿಕ್ಕಿನಿಂದಾದರೂ ಗುಡ್ಡ ಹತ್ತಿ ಹೋಗಬಹುದು, ಕೋಟೆಕಲ್‌ ಹುಚ್ಚೇಶ್ವರಮಠದ ಹಿಂದಿನ ಮಾರ್ಗವಾಗಿ ಮೂರು ಕಿ.ಮೀ. ವರೆಗೆ ವಾಹನದೊಂದಿಗೆ ಹೋಗಲು ರಸ್ತೆ ಇದೆ. ನಂತರ ಒಂದು ಕಿ.ಮೀ ಗುಡ್ಡದಲ್ಲಿ ಸಾಗಿದರೆ ಜಲಪಾತದ ಜುಳು-ಜುಳು ನಾದ ಕೇಳುತ್ತದೆ. ಈ ನಾದಕ್ಕೆ ಕಿವಿಯೊಡ್ಡಿ ಸಾಗಿದರೇ ಕಾಣ ಸಿಗುವುದೇ ಹಿರೇದಿಡಿಗಿನ ಹಳ್ಳದ ಜಲಪಾತ.

ಒನ್‌ಡೇ ಪಿಕ್‌ನಿಕ್‌: ಗುಳೇದಗುಡ್ಡ ಅನೇಕ ಇತಿಹಾಸಕ್ಕೆ ಹೆಸರು ವಾಸಿಯಾಗಿದೆ. ಜಲಪಾತವು ಇದಕ್ಕೆ ಸಾಕ್ಷಿಯಾಗಿದ್ದು, ಒನ್‌ಡೇ ಪಿಕ್‌ನಿಕ್‌ ಗೆ ಸೂಕ್ತ ಸ್ಥಳವಾಗಿದೆ. ಹೀಗಾಗಿ ಈ ಜಲಪಾತ(ದಿಡಗು) ಕುರಿತು ಹೆಚ್ಚು ಜನರಿಗೆ ಗೊತ್ತಿರದಿದ್ದರೂ ಈ ಭಾಗದ ಜನರಿಗೆ ಚಿರಪರಿಚಿತ. ಹೀಗಾಗಿ ಹೆಚ್ಚು ಜನರು ಕುಟುಂಬ ಸಮೇತ ಹೋಗುತ್ತಾರೆ. ಈ ಭಾಗದಲ್ಲಿ ಜಲಪಾತಕ್ಕೆ ದಿಡಗು ಎಂಬ ಹೆಸರಿನಿಂದ ಕರೆಯುತ್ತಾರೆ.

ಈ ಜಲಪಾತದ ಹತ್ತಿರವೇ ಒಂದು ಬಾವಿಯಿದ್ದು, ಈ ಬಾವಿಯಲ್ಲಿ ವರ್ಷಪೂರ್ತಿ ನೀರು ಇರುವುದರಿಂದ ಗುಡ್ಡದಲ್ಲಿ ಮೇಯಲು ಹೋಗುವ ಎಮ್ಮೆ, ಆಕಳು, ಎತ್ತು, ಕುರಿ ಹಾಗೂ ಕಾಡುಪ್ರಾಣಿಗಳಿಗೆ ನೀರಿನ ದಾಹ ತಣಿಸುವ ಜಲಧಾರಿಯಾಗಿದೆ. ಇದು ಎಂತಹ ಬೇಸಿಗೆಯಲ್ಲೂ ಬತ್ತಿಲ್ಲದಿರುವುದು ವಿಶೇಷವಾಗಿದೆ. ಇಂದಿನ ಯಾಂತ್ರಿಕ ಬದುಕಿನಲ್ಲಿ ಸ್ವಲ್ಪ ರಿಲ್ಯಾಕ್ಸ್‌ ಆಗಲು ಮತ್ತು ಒಂದು ದಿನದ ಪ್ರವಾಸಕ್ಕೆ ಈ ಜಲಪಾತ ಸೂಕ್ತ ಸ್ಥಳವಾಗಿದೆ. ಮಳೆಗಾಲದಲ್ಲಿ ಮಾತ್ರ ಕಾಣ ಸಿಗುವ ಈ ಜಲಪಾತ ತನ್ನ ಪ್ರಕೃತಿ ಸೊಬಗಿನಿಂದ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

 

-ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.