ಬಾವುಟದ ವಿಷಯದಲ್ಲಿ ಕಮಿಷನ್ ವ್ಯಾಪಾರ : ಮಾಜಿ ಸಚಿವೆ ಉಮಾಶ್ರೀ


Team Udayavani, Aug 12, 2022, 8:39 PM IST

1-ADSAD

ರಬಕವಿ-ಬನಹಟ್ಟಿ: ಯಾವಾಗಲೂ ದೇಶದ ಧ್ವಜವನ್ನು ದ್ವೇಷಿಸುತ್ತಿದ್ದ ಬೆಜೆಪಿಯವರು ಈಗ ಕೈಯಲ್ಲಿ ಧ್ವಜವನ್ನು ಹಿಡಿದುಕೊಂಡು ನಾಟಕವಾಡುತ್ತಿರುವುದು ಜನರಿಗೆ ಗೊತ್ತಾಗುತ್ತದೆ. ರಾಷ್ಟ್ರ ಧ್ವಜದ ವಿಷಯದಲ್ಲೂ ಕಮಿಷನ್ ವ್ಯಾಪಾರ ನಡೆಸುವುದರ ಮೂಲಕ ರಾಷ್ಟ್ರ ಧ್ವಜದ ನಿಯಮಗಳನ್ನು ಗಾಳಿಗೆ ತೂರಿ ರಾಷ್ಟ್ರ ಧ್ವಜಗಳಲ್ಲಿ ಪ್ರಮಾದಗಳನ್ನು ಕಾಣದೆ ಮನ ಬಂದಂತೆ ರಾಷ್ಟ್ರ ಧ್ವಜಗಳನ್ನು ತಯಾರಿಸಲು ಅನುಮತಿ ನೀಡಿರುವುದು ಖಂಡನೀಯವಾಗಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಕಿಡಿ ಕಾರಿದರು.

ಶುಕ್ರವಾರ ಸ್ಥಳೀಯ ಈಶ್ವರಲಿಂಗ ಮೈದಾನದಲ್ಲಿ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ನಿಮಿತ್ತವಾಗಿ ಹಮ್ಮಿಕೊಂಡ ಪಾದಯಾತ್ರೆಯ ನಂತರ ನಡೆದ ಸಭೆಯಲ್ಲಿ ಮಾತನಾಡಿ, ಸ್ವಾತಂತ್ರ‍್ಯದ ಅರ್ಥವನ್ನು ಯುವ ಪೀಳಿಗೆ ಆರ್ಥೈಯಿಸಿಕೊಳ್ಳಬೇಕಿದೆ. ಸಂವಿಧಾನ ಮತ್ತು ಮೂಲಭೂತ ಹಕ್ಕುಗಳ ಮನವರಿಕೆ ಇಂದಿನ ಯುವಕರಿಗೆ ಆಗಬೇಕಾಗಿದೆ. ಸಮಾನತೆ. ಸಹೋದರ ಭಾಂಧವ್ಯ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ದೇಶದ ಜನರನ್ನು ಸಶಕ್ತರನ್ನಾಗಿಸಿದ್ದು ಕಾಂಗ್ರೆಸ್. ಬಿಜೆಪಿ ಸರ್ಕಾರ ಹಳೆ ನೀರನ್ನು ಹೊಸ ಬಾಟಲಿಗೆ ಹಾಕಿ ಯೋಜನೆಗಳನ್ನು ತಯಾರು ಮಾಡುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮಾತನಾಡಿ, ಆರ್‌ಎಸ್‌ಎಸ್ ಗೆ ಸ್ವಾತಂತ್ರ‍್ಯ ಹೋರಾಟ ಮತ್ತು ಆಚರಣೆಯ ನೈತಿಕತೆ ಇಲ್ಲವಾಗಿದೆ. ದೇಶದ ಮಹಾತ್ಮನನ್ನು ಕೊಂದ ನಾಥೂರಾಮ ಗೋಡ್ಸೆಯಂತಹ ದ್ರೋಹಿಗಳ ಬಾಯಿಂದ ಘೋಷಣೆಗಳು ಹೇಗೆ ಬರುತ್ತಿವೆ ಎಂಬುದು ತಿಳಿಯುತ್ತಿಲ್ಲ.ಬಿಜೆಪಿ ದೇಶಕ್ಕೆ ಯಾವುದೆ ಮಹತ್ವದ ಯೋಜನೆಗಳನ್ನು ನೀಡದೆ ಕೇವಲ ತೆರಿಗೆಯ ಹೊರೆಯನ್ನು ನೀಡಿದೆ. ದೇಶದ ಪ್ರಾಧಾನಿ ಕೇವಲ ಬಂಡವಾಳಶಾಹಿಗಳ ಪರವಾಗಿದ್ದು, ಜನ ಸಾಮಾನ್ಯರ ವಿರೋಧಿಯಾಗಿದ್ದಾರೆ. ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತ ನಡೆಸುವಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಬಕವಿ, ರಾಮಪುರ ಹಾಗೂ ಬನಹಟ್ಟಿ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಜಾಥಾ ನಡೆಸಿದರು.

ಡಾ.ಪದ್ಮಜೀತ ನಾಡಗೌಡಪಾಟೀಲ, ರಾಜು ಭದ್ರನವರ, ಬಸವರಾಜ ಶೇಗಾವಿ, ಸಂಗಮೇಶ ಬಬಲೇಶ್ವರ, ಡಾ.ಎ.ಆರ್.ಬೆಳಗಲಿ, ಡಾ.ಎಂ.ಎಸ್.ದಡ್ಡೆನವರ, ಮಲ್ಲಪ್ಪ ಸಿಂಗಾಡಿ, ಲಕ್ಷ್ಮಣ ದೇಸಾರಟ್ಟಿ, ರಮೇಶ ಸವದಿ, ಪ್ರಭಾವತಿ ಚಾವಡಿ, ಪ್ರವೀಣ ನಾಡಗೌಡ, ಶಂಕರ ಸೋರಗಾವಿ, ಅಶೋಕ ಆಳಗೊಂಡ, ಮಾಳು ಹಿಪ್ಪರಗಿ, ರಾಹುಲ ಕಲಾಲ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.