ಮೂಲ ಸೌಕರ್ಯ ಒದಗಿಸಲು ಬದ್ಧ: ನಿರಾಣಿ


Team Udayavani, Sep 4, 2019, 9:48 AM IST

bk-tdy-2

ಕೆರೂರ: ಚಿಂಚಲಕಟ್ಟಿ ಲಂಬಾಣಿ ತಾಂಡಾದಲ್ಲಿ ನಡೆದ ಕುಂದುಕೊರತೆ ನಿವಾರಣೆ ಸಭೆಯಲ್ಲಿ ಶಾಸಕ ಮುರಗೇಶ ನಿರಾಣಿ ಮಾತನಾಡಿದರು.

ಕೆರೂರ: ಬೀಳಗಿ ಮತಕ್ಷೇತ್ರದ ಲಂಬಾಣಿ ತಾಂಡಾಗಳಲ್ಲಿ ಕುಡಿವ ನೀರು, ರಸ್ತೆ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಕರ್ಯ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವುದಾಗಿ ಶಾಸಕ ಮುರಗೇಶ ನಿರಾಣಿ ವಿವಿಧ ಹಳ್ಳಿಗಳ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಚಿಂಚಲಕಟ್ಟಿ ಲಂಬಾಣಿ ತಾಂಡಾದಲ್ಲಿ ನಡೆದ ಬಂಜಾರಾ ಸಮುದಾಯದ ಕುಂದು ಕೊರತೆ ನಿವಾರಣೆ ಸಭೆಯಲ್ಲಿ ಅವರು ಮಾತನಾಡಿದರು. ಕೆರೂರ ಹೋಬಳಿ ಸುತ್ತಮುತ್ತಲಿನ ನರೇನೂರ ಎಲ್ಟಿ 1 ಹಾಗೂ 2, ಜಲಗೇರಿ ಎಲ್ಟಿ 1,2 ಹಾಗೂ ಚಿಂಚಲಕಟ್ಟಿ ಮತ್ತು ಇನಾಂ ಹುಲ್ಲಿಕೇರಿ ಲಂಬಾಣಿ ತಾಂಡಾಗಳಲ್ಲಿ ಕುಡಿಯುವ ನೀರು, ಸಿಸಿ (ಕಾಂಕ್ರೀಟ್) ರಸ್ತೆ ಸಮಸ್ಯೆ ಸೇರಿದಂತೆ ರುದ್ರಭೂಮಿ ಇಲ್ಲದ ಕಾರಣ ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ಆಶ್ರಯ ಮನೆಗಳು, ವಿಧವೆಯರಿಗೆ ಮತ್ತು ಅಂಗವಿಕಲರಿಗೆ, ದೇವದಾಸಿಯರಿಗೆ ಸರಿಯಾಗಿ ಮಾಶಾಸನ ವಿಲೇವಾರಿ ಆಗುತ್ತಿಲ್ಲ ಎಂದು ಜಲಗೇರಿ ತಾಂಡಾ ನಿವಾಸಿ ಮಂಜುನಾಥ ಪಮ್ಮಾರ ಸಮಸ್ಯೆಗಳ ಕುರಿತು ಶಾಸಕರ ಗಮನಕ್ಕೆ ತಂದರು.

ಪಿಡಿಒಗಳ ತರಾಟೆಗೆ: ನನ್ನ ಕ್ಷೇತ್ರದ ಪ್ರತಿಯೊಂದು ತಾಂಡಾಗಳಲ್ಲಿ ಯಾರು ಪಿಂಚಣಿ ವಂಚಿತರಾಗಿದ್ದಾರೆ ಎಂಬುದರ ಕುರಿತು ಮೊದಲು ಪಟ್ಟಿ ತಯಾರಿಸಿ, ಶೀಘ್ರದಲ್ಲಿ ಅವರ ಸಮಸ್ಯೆಗಳ ನಿವಾರಣೆಗೆ ಪ್ರಾಧಾನ್ಯತೆ ಕೊಡಿ. ಸೂಚನೆ ನಿರ್ಲಕ್ಷಿಸಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಭೆಯಲ್ಲಿದ್ದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳನ್ನು ಶಾಸಕ ತರಾಟೆಗೆ ತೆಗೆದುಕೊಂಡರು.

ಮೊದಲು ನೀರು ಕೊಡಿ: ತಾಂಡಾಗಳ ಜನತೆಗೆ ಮೊದಲು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ. ಅಗತ್ಯವಿದ್ದಲ್ಲಿ ಕೂಡಲೇ ಕೊಳವೆಬಾವಿಗಳನ್ನು ಕೊರೆಸುವಂತೆ ಅಕಾರಿಗಳಿಗೆ ಸೂಚಿಸಿದ ಶಾಸಕರು, ತಾಂಡಾಗಳ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಹೊಸದಾಗಿ ಬರುವ ಅತಿಥಿ ಶಿಕ್ಷಕರನ್ನು ನಿಯೋಜಿಸುವ ಮೂಲಕ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳುವೆ ಎಂದರು.

ಈ ಭಾಗದಲ್ಲಿ ಪಶು ವೈದ್ಯರ ಅಭಾವವಿದೆ. ಕೆರೂರ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಶಿವಾನಂದ ಕರಡಿಗುಡ್ಡ ಅವರಿಗೆ ಪ್ರಮುಖ ಗ್ರಾಮಗಳಲ್ಲಿ ನಿಗದಿ ಮಾಡಿದ ಒಂದೊಂದು ದಿನ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಜಿಪಂ ಸದಸ್ಯ ಹೂವಪ್ಪ ರಾಠೊಡ, ಹೂಲಗೇರಿ ಗ್ರಾಪಂ ಅಧ್ಯಕ್ಷ ಹನಮಂತ ಮುಗಳೊಳ್ಳಿ, ಗೋವಿಂದಗೌಡ ಕೆರಕಲಮಟ್ಟಿ, ಹನಮಂತಗೌಡ ಗೌಡರ, ಬಾಬುರಾವ್‌ ಕುಲಕರ್ಣಿ, ರಾಜು ಕಕರೆಡ್ಡಿ, ಎಂ.ಡಿ. ವಾಲೀಕಾರ, ಎಂ.ಎಚ್. ಕೆರೂರ, ಮಲ್ಲಪ್ಪ ಪೂಜಾರ ಇದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.