ಮಂಗಳಮುಖೀಯರ ಉನ್ನತಿಗೆ ಸಮಿತಿ

•ಜಿಲ್ಲೆಯಲ್ಲಿ 884 ಜನ ಮಂಗಳಮುಖೀಯರಿಗೆ ಗುರುತಿನ ಚೀಟಿ•ಸಮಾಜದಲ್ಲಿ ಉತ್ತಮ ಬದುಕಿಗೆ ಕ್ರಮ

Team Udayavani, Jul 24, 2019, 4:14 PM IST

bk-tdy-4

ಬಾಗಲಕೋಟೆ: ಜಿಲ್ಲೆಯಲ್ಲಿರುವ ಮಂಗಳ ಮುಖೀಯರ ಶ್ರೇಯೋಭಿವೃದ್ಧಿಗಾಗಿ, ಸಮಾಜ ದಲ್ಲಿ ಗೌರವಯುತವಾದ ಅಸ್ತಿತ್ವ ಹಾಗೂ ಜನಸಮುದಾಯದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಹೇಳಿದರು.

ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ದಮನಿತ ಮಹಿಳೆಯರ ಮತ್ತು ಟ್ರಾನ್ಸ್‌ಜೆಂಡರ್ಗಳ ಜೀವನ ಮಟ್ಟ ಸುಧಾರಣೆ, ಸಬಲೀಕರಣ ಮತ್ತು ಪುನರ್ವಸತಿ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದ ಸಮಿತಿ ರಚಿಸುವ ಕುರಿತು ಜರುಗಿದ ಸಭೆಯಲ್ಲಿ ಅವರು ಮಾತನಾಡಿದರು.

ಟ್ರಾನ್ಸ್‌ಜೆಂಡರ್ಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಈ ಸಮಿತಿ ರಚಿಸಲಾಗಿದೆ. ಜಿಲ್ಲೆಯಲ್ಲಿ 884 ಟ್ರಾನ್ಸ್‌ಜೆಂಡರ್ಗಳಿದ್ದು, ಅವರಿಗೆ ಮೊದಲು ಗುರುತಿನ ಚೀಟಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಾಲೂಕಾ ಹಂತದಲ್ಲಿ ತಹಶೀಲ್ದಾರ್‌ ನೇತೃತ್ವದಲ್ಲಿ ಅರ್ಹ ಟ್ರಾನ್ಸ್‌ಜೆಂಡರ್ಗಳಿಂದ ಅರ್ಜಿ ಸ್ವೀಕಾರ, ದಾಖಲಾತಿ ಪರಿಶೀಲನೆಗಳೊಂದಿಗೆ ಮಿಲನ ಸಂಸ್ಥೆಯೊಂದಿಗೆ ಸಭೆ ನಡೆಸಿ ಜಿಲ್ಲಾ ಮಟ್ಟದಲ್ಲಿ ಅನುಮೋದನೆ ಪಡೆದು ಗುರುತಿನ ಚೀಟಿ ನೀಡಲು ಕ್ರಮ ಕೈಗೊಳ್ಳಬೇಕು. ತೃತೀಯ ಲಿಂಗಗಳನ್ನು ಗೌರವದಿಂದ ಕಾಣುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಟ್ರಾನ್ಸ್‌ಜೆಂಡರ್ಗಳ ಬಗ್ಗೆ ಶಾಲೆಗಳ ಮತ್ತು ಮಕ್ಕಳ ಹಕ್ಕುಗಳ ಸಂಸ್ಥೆಗಳ ಮತ್ತು ನೆಟ್ವರ್ಕ್‌ಗಳ ಸಹಭಾಗಿತ್ವದಲ್ಲಿ ಶಿಕ್ಷಕರಿಗೆ ಹಾಗೂ ಕುಟುಂಬದವರಿಗೆ ಅರಿವು ಮೂಡಿಸುವ ಕೆಲಸವಾಗಬೇಕು. ಟ್ರಾನ್ಸ್‌ ಜೆಂಡರ್ಗಳ ಮಕ್ಕಳಿಗೆ ಸರ್ಕಾರದ ವಿವಿಧ ವಸತಿ ನಿಲಯಗಳಡಿ ಉಚಿತ ಪ್ರವೇಶ ಒದಗಿಸಬೇಕು. ಪೋಷಕರು ಮತ್ತು ಟ್ರಾನ್ಸ್‌ಜೆಂಡರ್ ಮಕ್ಕಳನ್ನು ಪರಿತ್ಯಜಿಸದೆ ಅವರಿಗೆ ಕುಟುಂಬದಲ್ಲಿ ಸಮಾನ ಅವಕಾಶ ನೀಡುವಂತೆ ಅರಿವು ಮೂಡಿಸುವ ಕೆಲಸವಾಗಬೇಕು. ಟ್ರಾನ್ಸ್‌ಜೆಂಡರ್ಗಳ ಮೇಲೆ ನಡೆಯುವ ದೌರ್ಜನ್ಯ ತಡೆಯಲು ಪೊಲೀಸ್‌ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದ ವಿವಿಧ ಇಲಾಖಾ ಸೌಲಭ್ಯ ಟ್ರಾನ್ಸ್‌ಜೆಂಡರ್ಗಳಿಗೆ ಒದಗಿಸಲು ನಿಟ್ಟಿನಲ್ಲಿ ಸೌಲಭ್ಯ ನೀಡಲು ಬೆಂಬಲ ಘಟಕದಿಂದ ಪ್ರತ್ಯೇಕ ಕ್ರಿಯಾಯೋಜನೆ ಸಿದ್ಧಪಡಿಸಿ ರಾಜ್ಯದ ಮಟ್ಟದ ಕೋಶಕ್ಕೆ ತಕ್ಷಣವೇ ಪತ್ರ ಬರೆಯುವಂತೆ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಟ್ರಾನ್ಸ್‌ಜೆಂಡರ್ಗಳ ಮಕ್ಕಳಿಗೆ ಸುರಕ್ಷಿತ ನಿವಾಸ, ಅಲ್ಪಾವಧಿ ವಸತಿ ಗೃಹಗಳ, ಅನಾಥಾಶ್ರಮಮಗಳ, ದತ್ತು ಮತ್ತು ಪೋಷಣಾ ಸೇವೆಗಳ ಸೌಕರ್ಯ ಒದಗಿಸಬೇಕು. ವಯಸ್ಸಾದವರಿಗೆ ವೃದ್ಧ್ದಾಶ್ರಮಗಳ ವ್ಯವಸ್ಥೆ ಮತ್ತು ಪಿಂಚಣಿ ಒದಗಿಸಿಕೊಡುವ ಬಗ್ಗೆ ಕ್ರಮವಹಿಸಬೇಕು. ಟ್ರಾನ್ಸ್‌ಜೆಂಡರ್ಗಳ ನೀತಿಯ ಬಗ್ಗೆ ಮೂಲ ಮಾಹಿತಿ ರೇಡಿಯೋ, ಟಿವಿ ಮೂಲಕ ಬಿತ್ತರಿಸಿ ಅವರನ್ನು ಮುಖ್ಯವಾಹಿನಿಯಲ್ಲಿ ವಿಲೀನಗೊಳಿಸುವ ಬಗ್ಗೆ ಧನಾತ್ಮಕ ಚಿಂತನೆ ಮೂಡಿಸಬೇಕು. ವಿದ್ಯಾರ್ಥಿ ವೇತನ, ಆರೋಗ್ಯ ಸೇವೆ, ಸಾಮಾಜಿಕ ಭದ್ರತೆ ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಹೇಳಿದರು.

ಜಿಪಂ ಸಿಇಒ ಗಂಗೂಬಾಯಿ ಮಾನಕರ ಮಾತನಾಡಿ, ಬೇರೆ ಇಲಾಖೆಗಳಡಿ ಬಾಹ್ಯ ಗುತ್ತಿಗೆಯಲ್ಲು ಗ್ರುಫ್‌ ಡಿ ಹುದ್ದೆಗಳಲ್ಲಿ ಆಯ್ಕೆಗೊಳಿಸಲು ಕ್ರಮ ಕೈಗೊಳ್ಳಲು ತಿಳಿಸಿದರು. ಬಾಲಕರ ಬಾಲಭವನದಲ್ಲಿ ಕಚೇರಿ ಸ್ಥಾಪಿಸಲು ಸೂಚಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಗರಿಮಾ ಪೋವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಅನಂತ ದೇಸಾಯಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.