ಹೊಂದಾಣಿಕೆ ರಾಜಕೀಯ; ಹಣದ ಹೊಳೆಗೆ ಮರುಳಾಗಬೇಡಿ

ಕನಿಷ್ಠ ಆಶ್ರಯ ಮನೆ ಆಯ್ಕೆ ಮಾಡುವ ಅಧಿಕಾರವೂ ಗ್ರಾಪಂಗೆ ಇಲ್ಲದಂತಾಗಿದೆ.

Team Udayavani, Dec 3, 2021, 5:31 PM IST

ಹೊಂದಾಣಿಕೆ ರಾಜಕೀಯ; ಹಣದ ಹೊಳೆಗೆ ಮರುಳಾಗಬೇಡಿ

ಬಾಗಲಕೋಟೆ: ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ನಡೆಯುತ್ತಿರುವ ವಿಧಾನ್‌ ಪರಿಷತ್‌ ದ್ವಿ ಸದಸ್ಯ ಸ್ಥಾನದ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು, ಜನಪ್ರತಿನಿಧಿಗಳ ಸಂವಿಧಾನಬದ್ಧ ಹಕ್ಕನ್ನೇ ಕಸಿದುಕೊಳ್ಳಲು ಮುಂದಾಗಿದ್ದವು. ಗ್ರಾಪಂ ಸದಸ್ಯರಿಗೆ ಐದು ವರ್ಷದಲ್ಲಿ ಒಮ್ಮೆ ಸಿಗುವ ಈ ಮತದಾನದ ಅವಕಾಶ ದೊರೆಯಲು ಗ್ರಾಮ ಪಂಚಾಯಿತಿ ಸದಸ್ಯರ ಸ್ವಾಭಿಮಾನದ ಪ್ರತೀಕವಾಗಿ ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ.

ಯಾರು ಎಷ್ಟೇ ಹಣದ ಹೊಳೆ ಹರಿಸಿದರೂ ನೀವು ಸ್ವಾಭಿಮಾನ ಬಿಡಬೇಡಿ ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಹೇಳಿದರು. ತಾಲೂಕಿನ ನೀರಲಕೇರಿಯಲ್ಲಿ ನಡೆದ ಬಾಗಲಕೋಟೆ ತಾಲೂಕಿನ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಅಭಿವೃದ್ಧಿಗಾಗಿ ಅಧಿಕಾರ ವಿಕೇಂದ್ರೀಕರಣ ಮಾಡಲಾಗಿದೆ. ಮಂಡಲ ಪಂಚಾಯಿತಿ ಇದ್ದಾಗ ಇದ್ದ ಎಲ್ಲ ಅಧಿಕಾರಗಳನ್ನು ಇಂದು ಶಾಸಕರು ಕಸಿದುಕೊಂಡಿದ್ದಾರೆ. ಕನಿಷ್ಠ ಆಶ್ರಯ ಮನೆ ಆಯ್ಕೆ ಮಾಡುವ ಅಧಿಕಾರವೂ ಗ್ರಾಪಂಗೆ ಇಲ್ಲದಂತಾಗಿದೆ. ಗ್ರಾಪಂಗಳಿಗೆ ಮೊದಲಿದ್ದ ಅಧಿಕಾರ ಮರಳಿ ಕೊಡಿಸಬೇಕು. ಗ್ರಾಪಂ ಸದಸ್ಯರಿಗೆ ಸದ್ಯ 1 ಸಾವಿರ, ಉಪಾಧ್ಯಕ್ಷರಿಗೆ ಎರಡು ಸಾವಿರ ಹಾಗೂ ಅಧ್ಯಕ್ಷರಿಗೆ ಮೂರು ಸಾವಿರ ಗೌರವಧನವಿದೆ. ಅದೇ ಶಾಸಕರು, ಸಂಸದರಿಗೆ ಲಕ್ಷಾಂತರ ರೂ. ಗೌರವಧನ ಬರುತ್ತಿದ್ದು, ಕನಿಷ್ಠ ಗೌರವಧನದಿಂದ ಗ್ರಾ.ಪಂ. ಸದಸ್ಯರು ಸಭೆ-ಸಮಾರಂಭಕ್ಕೂ ತೆರಳುವ ಬಸ್‌ ಚಾಚ್‌ ìಗೆ ಸಾಲುವುದಿಲ್ಲ. ಹೀಗಾಗಿ ಗೌರವಧನ ಹೆಚ್ಚಿಸಬೇಕು ಎಂಬುದು ನನ್ನ ಗುರಿಯಾಗಿದೆ ಎಂದರು.

ಸ್ಥಳೀಯ ಸಂಸ್ಥೆಗಳ ಪ್ರತಿ ಸದಸ್ಯರು ಜಿಲ್ಲೆಯಾದ್ಯಂತ ಕೆಲಸ-ಕಾರ್ಯಗಳಿಗೆ ಸಂಚರಿಸಲು ಉಚಿತ ಬಸ್‌ಪಾಸ್‌, ಅವರ ಕುಟುಂಬದವರಿಗೆ ಉಚಿತ ಆರೋಗ್ಯ ಸೇವೆ, ಜಿಪಂ, ತಾಪಂ ಸದಸ್ಯರಿಗೆ ನೀಡುವ ಪ್ರದೇಶಾಭಿವೃದ್ಧಿ ಅನುದಾನ ಗ್ರಾಪಂ ಸದಸ್ಯರಿಗೂ ವಿಸ್ತರಿಸಿ, ಅವರಿಗೆ ಪ್ರತಿವರ್ಷ ಅನುದಾನ ಬಿಡುಗಡೆ ಮಾಡಿ, ಗ್ರಾಮದಲ್ಲಿ ಸ್ವತಂತ್ರವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅಧಿಕಾರ ದೊರೆಯಬೇಕು. ಸ್ಥಳೀಯ ಸಂಸ್ಥೆಗಳ ಸಹಕಾರಿ ಒಕ್ಕೂಟ ರಚಿಸಿ, ಆ ಮೂಲಕ ಸದಸ್ಯರಿಗೆ ವಿವಿಧ ಆರ್ಥಿಕ ನೆರವು, ಹಲವು ಸೌಲಭ್ಯ ಒದಗಿಸಬೇಕಿದೆ. ಮಾಜಿ ಸದಸ್ಯರಿಗೆ ಈ ಒಕ್ಕೂಟದಲ್ಲಿ ಸದಸ್ಯತ್ವ ಕಲ್ಪಿಸಿ, ಸೌಲಭ್ಯ ನೀಡಬೇಕು.

ಗ್ರಾಪಂ ಸದಸ್ಯರಿಗೆ ಅನ್ಯಾಯ, ಸಮಸ್ಯೆಗಳಿಗೆ ಒಕ್ಕೂಟದಿಂದ ತಕ್ಷಣ ನೆರವಿಗೆ ಬರಬೇಕು. ಈ ನಿಟ್ಟಿನಲ್ಲಿ ಒಕ್ಕೂಟದ ಅವಶ್ಯಕತೆ ಇದೆ. ಗ್ರಾಮೀಣ ಅಭಿವೃದ್ಧಿಗಾಗಿ ಸದಸ್ಯರು ಯಾವುದೇ ಕಚೇರಿಗೆ ಹೋದರೂ ಅಧಿಕಾರಿಗಳು ತಕ್ಷಣ ಸ್ಪಂದಿಸಿ, ಅವರ ಕೆಲಸ ಕಾರ್ಯ ಮಾಡಿ ಕೊಡಬೇಕು. ಇದಕ್ಕಾಗಿ ಸರ್ಕಾರದಿಂದ ಎಲ್ಲ ಇಲಾಖೆಗಳಿಗೂ ವಿಶೇಷ ಸೂಚನೆ- ನಿರ್ದೇಶನ ಹೋಗಬೇಕು. ಇದಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡುವುದಾಗಿ ಹೇಳಿದರು.

ನಾನು ಅಖಂಡ ವಿಜಯಪುರ ಜಿಲ್ಲೆಯ ಜಿಪಂ ಸದಸ್ಯನಾಗಿ, ಉಪಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಈ ಕ್ಷೇತ್ರದಲ್ಲಿ ಕೆಲಸ ಮಾಡಿ ಅನುಭವ ಇರುವವರನ್ನೇ ಆಯ್ಕೆ ಮಾಡಬೇಕು. ಹಣಬಲ, ತೋಳ್ಬಲ ಇದ್ದವರು ಆಯ್ಕೆಯಾದರೆ, ಆರು ವರ್ಷ ಸದಸ್ಯರ ಸಮಸ್ಯೆಯನ್ನೇ ಕೇಳಲು ಬರುವುದಿಲ್ಲ. ಹೀಗಾಗಿ ಎಲ್ಲ ಸದಸ್ಯರು ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು. ಬಾಗಲಕೋಟೆ ತಾಲೂಕಿನ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಹಲವು ಮುಖಂಡರು ಪಾಲ್ಗೊಂಡಿದ್ದರು.

ಈ ಚುನಾವಣೆಯಲ್ಲಿ ಗ್ರಾಪಂ ಸದಸ್ಯರನ್ನೇ ಮಾತನಾಡಿಸದಂತಹ ಪರಿಸ್ಥಿತಿ ಇತ್ತು. ಲೋಣಿ ಅವರ ಸ್ಪರ್ಧೆಯಿಂದ ಈಗ ಎರಡೂ ಪಕ್ಷಗಳ ಅಭ್ಯರ್ಥಿಗಳು ನಮ್ಮತ್ತ ಕೈಮುಗಿದು ಬರುತ್ತಿದ್ದಾರೆ. ನಮಗೂ ಸ್ವಾಭಿಮಾನವಿದೆ. ಗ್ರಾಪಂ ಸದಸ್ಯರ ಗೌರವ ಎತ್ತಿ ಹಿಡಿದವರ ಪರವಾಗಿ ಮತ ಚಲಾಯಿಸಬೇಕಿದೆ.
ಅಡಿವೆಪ್ಪ ಶಾಸ್ತ್ರಿ, ಚಿಕ್ಕಶೆಲ್ಲಿಕೇರಿ ಗ್ರಾಪಂ ಸದಸ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.