ದೂರು ಪ್ರಾಧಿಕಾರದ್ದೇ ದೊಡ್ಡ ದೂರು!

ಹೊಸದಾಗಿ ಆರಂಭಗೊಂಡಿದೆ ಕುಂದು-ಕೊರತೆ ನಿವಾರಣೆ ಹೊಸ ಪ್ರಾಧಿಕಾರ ; ನಿವೃತ್ತ ಅಧಿಕಾರಿಯ ನೇಮಕ

Team Udayavani, Jun 27, 2022, 5:44 PM IST

15

ಬಾಗಲಕೋಟೆ: ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ನಾಗರಿಕರಿಗೂ ಸರ್ಕಾರದ ಎಲ್ಲ ರೀತಿಯ ಮೂಲಭೂತ ಸೌಲಭ್ಯ ದೊರೆಯಬೇಕು. ಅದರ ಉಸ್ತುವಾರಿ ನೋಡಿಕೊಳ್ಳಲು ಅಥವಾ ಸೌಲಭ್ಯ ದೊರೆಯದಿದ್ದರೆ ಅದನ್ನು ಸಂಬಂಧಿಸಿದ ಇಲಾಖೆಯ ಗಮನಕ್ಕೆ ತಂದು, ಸಮಸ್ಯೆ ಪರಿಹರಿಸಲು ಸರ್ಕಾರ, ಕುಂದು-ಕೊರತೆ ನಿವಾರಣೆ ಹೊಸ ಪ್ರಾಧಿಕಾರ ಆರಂಭಗೊಂಡಿದೆ.

ಹೌದು, ರಾಜ್ಯ ಸರ್ಕಾರ, ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 (296-ಎ) ಅಡಿಯಲ್ಲಿ ಪ್ರತಿಯೊಬ್ಬರಿಗೂ ಮಾನವ ಹಕ್ಕುಗಳು ದೊರೆಯಬೇಕು ಎಂಬುದು ಸರ್ಕಾರದ ಗುರಿ. ಹೀಗಾಗಿ ಬಾಗಲಕೋಟೆಯಲ್ಲೂ ಈ ಹೊಸ ಪ್ರಾಧಿಕಾರದ ಕಚೇರಿ ಆರಂಭಗೊಂಡಿದ್ದು, ಬೆಳಗಾವಿ ವಿಭಾಗಕ್ಕೆ ಓರ್ವ ನಿವೃತ್ತ ಹಿರಿಯ ಅಧಿಕಾರಿಯನ್ನು ಸಾರ್ವಜನಿಕ ಕುಂದು ಕೊರತೆ ನಿವಾರಣೆ ಪ್ರಾಧಿಕಾರಕ್ಕೆ ನೇಮಕ ಮಾಡಲಾಗಿದೆ. ಇದಕ್ಕಾಗಿ ಜಿಪಂ ಕಚೇರಿ ಆವರಣದಲ್ಲಿ ಹೊಸ (ಉಪಾಧ್ಯಕ್ಷರ ಕೊಠಡಿ) ಕಚೇರಿಯನ್ನೂ ಆರಂಭಿಸಲಾಗಿದೆ.

ಕಳೆದ ತಿಂಗಳು ಈ ಹೊಸ ಪ್ರಾಧಿಕಾರ ಮತ್ತು ಅದಕ್ಕೊಂದು ಹೊಸ ಕಚೇರಿಯನ್ನೂ ಆರಂಭಿಸಿದ್ದು, ಪ್ರಾಧಿಕಾರಕ್ಕೆ ನೇಮಕವಾದ ನಿವೃತ್ತಿ ಅಧಿಕಾರಿ, ಈವರೆಗೂ ಜಿಲ್ಲೆಗೆ ಭೇಟಿ ನೀಡಿಲ್ಲ. ಈ ಪ್ರಾಧಿಕಾರದ ರೀತಿ-ನೀತಿ-ನಿಯಮಗಳ ಬಗ್ಗೆ ಸಿಬ್ಬಂದಿಗೂ ಸ್ಪಷ್ಟವಾಗಿ ಗೊತ್ತಿಲ್ಲ. ಇದು ಆರಂಭಗೊಂಡು ಒಂದು ತಿಂಗಳಾದರೂ ಈವರೆಗೂ ಒಂದೂ ದೂರು ಬಂದಿಲ್ಲ. ಮುಖ್ಯವಾಗಿ, ಈ ಪ್ರಾಧಿಕಾರ ಆರಂಭಗೊಂಡಿರುವ ಕುರಿತೇ, ಸೌಲಭ್ಯ ವಂಚಿತ ಜನರಿಗೆ ಗೊತ್ತಿಲ್ಲ ಎನ್ನಲಾಗಿದೆ.

ಏನಿದು ಪ್ರಾಧಿಕಾರ? ಗ್ರಾಮೀಣ ಭಾಗದ ಪ್ರತಿಯೊಬ್ಬ ಅರ್ಹ ನಾಗರಿಕರು, ಕುಡಿಯುವ ನೀರು, ಆರೋಗ್ಯ ಸೇವೆ, ರಸ್ತೆ ನಿರ್ವಹಣೆ, ಬೀದಿ ದೀಪಗಳ ನಿರ್ವಹಣೆ, ಸ್ವತ್ಛತೆ, ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ, ಯೋಜನೆಗಳ ಹಂಚಿಕೆ, ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ಮಂಜೂರು ಮಾಡುವ ಯೋಜನೆಗಳು, ಅನುದಾನ ಹಂಚಿಕೆ ಅಥವಾ ಹೊರಡಿಸುವ ವಿವಿಧ ಪ್ರಮಾಣ ಪತ್ರ, ದಾಖಲೆಗಳು ದೊರೆಯಬೇಕು. ಈ ಯೋಜನೆಗಳಲ್ಲಿ ಲೋಪ ಕಂಡುಬಂದರೆ, ಜನರಿಗೆ ಸಮರ್ಪಕವಾಗಿ ಸೌಲಭ್ಯ ದೊರೆಯದಿದ್ದರೆ, ಹೊಸದಾಗಿ ರಚನೆಯಾದ ಸಾರ್ವಜನಿಕ ಕುಂದು ಕೊರತೆ ನಿವಾರಣೆ ಪ್ರಾಧಿಕಾರಕ್ಕೆ ದೂರು ಸಲ್ಲಿಸಬೇಕು. ಅದನ್ನು ಪ್ರಾಧಿಕಾರದ ಅಧಿಕಾರಿ-ಸಿಬ್ಬಂದಿ ಸಂಬಂಧಿಸಿದ ಇಲಾಖೆಯೊಂದಿಗೆ ಪತ್ರ ವ್ಯವಹಾರ ಮಾಡಿ, ಸೌಲಭ್ಯ ದೊರಕಿಸುವಂತೆ ಮಾಡುತ್ತದೆ.

ಈ ಪ್ರಾಧಿಕಾರದಡಿ ಭ್ರಷ್ಟಾಚಾರ, ಆಡಳಿತಾತ್ಮಕ, ಅವ್ಯವಹಾರ, ನರೇಗಾ ಯೋಜನೆ ಹೀಗೆ ಕೆಲ ವಿಷಯಗಳು ಬರುವುದಿಲ್ಲ. ಬದಲಾಗಿ ಸೌಲಭ್ಯಗಳ ಹಂಚಿಕೆಯಲ್ಲಿ ವಿಳಂಬವಾದರೆ, ಸೌಲಭ್ಯಗಳೇ ದೊರೆಯದಿದ್ದರೆ ಅಂತಹ ಜನರು, ಪ್ರಾಧಿಕಾರಕ್ಕೆ ದೂರು ಸಲ್ಲಿಸಬಹುದು. ದೂರು ಸಲ್ಲಿಸಲೆಂದೇ ಒಂದು ನಿಗದಿ ಅರ್ಜಿ ಮಾಡಿದ್ದು, ಅದರಡಿಯೇ ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಿದರೆ, ಅದನ್ನು ಪ್ರಾಧಿಕಾರ ಮುಂದಿನ ಕ್ರಮ ಕೈಗೊಳ್ಳಲಿದೆ.

ದೂರು ಪ್ರಾಧಿಕಾರದ್ದೇ ದೊಡ್ಡ ದೂರು: ಹೊಸದಾಗಿ ಆರಂಭಗೊಂಡ ಈ ದೂರು ಪ್ರಾಧಿಕಾರದ್ದೇ ದೊಡ್ಡ ದೂರು ಜಿಲ್ಲೆಯ ಜನರಲ್ಲಿದೆ. ಸಾರ್ವಜನಿಕರಿಗೆ ಉಪಯುಕ್ತವಾಗುವ ಇಂತಹ ಒಂದು ಪ್ರಾಧಿಕಾರ ಆರಂಭಗೊಂಡಿರುವುದು ಜನರಿಗೆ ಗೊತ್ತಿಲ್ಲ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಹಲವಾರು ಸಮಸ್ಯೆಗಳಿದ್ದು, ಅವುಗಳ ಪರಿಹಾರಕ್ಕಾಗಿ ಇರುವ ಪ್ರಾಧಿಕಾರದ ಕುರಿತು ಎಲ್ಲೆಡೆ ಪ್ರಚಾರಪಡಿಸಬೇಕಿತ್ತು. ಒಂದು ತಿಂಗಳಾದರೂ ಒಂದೂ ಅರ್ಜಿ ಬಂದಿಲ್ಲವೆಂದರೆ ಜಿಲ್ಲೆಯಲ್ಲಿ ಸಮಸ್ಯೆಗಳೇ ಇಲ್ಲವೇ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಇಂದೇ ದೂರು ಕೊಡಿ: ಜಿ.ಪಂ. ಕಚೇರಿ ಆವರಣದ ಉಪಾಧ್ಯಕ್ಷರ ಕೊಠಡಿಯನ್ನೇ ಈ ನೂತನ ಪ್ರಾಧಿಕಾರದ ಕಚೇರಿಯನ್ನಾಗಿ ಮಾಡಲಾಗಿದ್ದು, ಜಿ.ಪಂ. ಸಿಬ್ಬಂದಿಯೊಬ್ಬರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಯಾವುದೇ ಗ್ರಾ.ಪಂ ವ್ಯಾಪ್ತಿಯ ಜನರು, ಅರ್ಹ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಾಧಿಕಾರಕ್ಕೆ ನಿಯೋಜನೆಗೊಂಡ ಜಿಪಂ ಸಿಬ್ಬಂದಿ ತಿಳಿಸಿದರು.

ಸರ್ಕಾರದ ಯೋಜನೆಗಳ ಹಂಚಿಕೆ ಹಾಗೂ ಸೌಲಭ್ಯ ಕಲ್ಪಿಸುವಲ್ಲಿ ವಿಳಂಬ ಅಥವಾ ಅರ್ಹರನ್ನು ಕೈಬಿಟ್ಟಿದ್ದರೆ, ಹಳ್ಳಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲೂ ತೊಂದರೆಯಾಗಿದ್ದರೆ ದೂರು ಸಲ್ಲಿಸಲು ಅವಕಾಶವಿದೆ. ಆದರೆ, ಇಂತಹವೊಂದು ಜನೋಪಯೋಗಿ ಪ್ರಾಧಿಕಾರ, ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಇದಕ್ಕೆ ನೇಮಕಗೊಂಡ ಅಧಿಕಾರಿ, ಪ್ರತಿ ವಾರಕ್ಕೊಮ್ಮೆ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಬೇಕು. -ಬಸವರಾಜ ಧರ್ಮಂತಿ, ಕರವೇ ಜಿಲ್ಲಾ ಅಧ್ಯಕ್ಷ

ವಿಶೇಷ ವರದಿ

ಟಾಪ್ ನ್ಯೂಸ್

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.