ಜಾತಿ ಬಲದ ನಿರೀಕ್ಷೆಯಲ್ಲಿ ಕೈ-ಕಮಲ

ಕಮಲ •ವೀಣಾ ಕಾಶಪ್ಪನವರಗೆ ಕುರುಬ-ಪಂಚಮಸಾಲಿ ಬಲ•ಗದ್ದಿಗೌಡರಿಗೆ ಸ್ಥಳೀಯರೆಂಬ ಪ್ರತಿಷ್ಠೆ

Team Udayavani, May 7, 2019, 12:19 PM IST

gadaga-tdy-1..01
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರಾಗಿರುವ ಬಾದಾಮಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಪ್ರತಿಷ್ಠೆಯಿಂದ ನಡೆದಿದೆ.

ಇಲ್ಲಿ ಪಕ್ಷಕ್ಕಿಂತ ಜಾತಿ ಆಧಾರದ ಮೇಲೆಯೇ ಈ ವರೆಗಿನ ಎಲ್ಲ ಚುನಾವಣೆ ನಡೆದಿವೆ. ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಸ್ಥಳೀಯರೆಂಬ ಪ್ರತಿಷ್ಠೆಯ ಜತೆಗೆ ಎಲ್ಲ ಪಕ್ಷಗಳಲ್ಲೂ ಸ್ನೇಹ ಬಳಗ ಹೊಂದಿದ್ದು, ಅದು ತಮಗೆ ಬಲ ಕೊಡಲಿದೆ ಎಂಬ ವಿಶ್ವಾಸದಲ್ಲಿದ್ದರೆ, ಜೆಡಿಎಸ್‌ ಮೈತ್ರಿಯೊಂದಿಗೆ ಸಿದ್ದರಾಮಯ್ಯ ಅವರ ಬಲದಿಂದ ಈ ಕ್ಷೇತ್ರದಲ್ಲಿ ಅತಿಹೆಚ್ಚು ಲೀಡ್‌ ಬರಲಿದೆ ಎಂಬ ನಿರೀಕ್ಷೆ ಕಾಂಗ್ರೆಸ್‌ ಹೊಂದಿದೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಲ್ಲಿ ಶೇ.70.25ರಷ್ಟು ಮತದಾನವಾಗಿದೆ. ಕಳೆದ ಬಾರಿ ಇಲ್ಲಿ ಶೇ.66.54ರಷ್ಟು ಮತದಾನ ಮಾತ್ರ ಆಗಿತ್ತು.ಕಳೆದ ಬಾರಿಗಿಂತ ಶೇ.3.71ರಷ್ಟು ಮತದಾನ ಹೆಚ್ಚಳವಾಗಿದ್ದು, ಇದು ಬಿಜೆಪಿಗೆ ಲಾಭ ಎಂಬ ಲೆಕ್ಕಾಚಾರ ಆ ಪಕ್ಷದ್ದು. ಅಲ್ಲದೇ ಕಳೆದ ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಒಟ್ಟು 2,03,125 ಮತದಾರರಿದ್ದು, ಅದರಲ್ಲಿ 1,35,153 (ಶೇ.66.54) ಜನರು ಹಕ್ಕು ಚಲಾಯಿಸಿದ್ದರು. ಆಗ ಇಲ್ಲಿ ಬಿಜೆಪಿ 73,128 ಮತ ಪಡೆದಿದ್ದರೆ, ಕಾಂಗ್ರೆಸ್‌-54,261 ಮತ ಗಳಿಸಿತ್ತು.

ಸಿದ್ದು ಬಲದೊಂದಿಗೆ ಮೈತ್ರಿಯ ಲಾಭ: ಈ ಕ್ಷೇತ್ರದಲ್ಲಿ ಜೆಡಿಎಸ್‌ ಕೂಡ ಒಂದಷ್ಟು ನೆಲೆ ಹೊಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಇಲ್ಲಿ 24,484 ಮತ ಪಡೆದಿತ್ತು. ಅವು ಬಹುತೇಕ ಬಿಜೆಪಿಯ (ಪಂಚಸಾಲಿ) ಮತಗಳಾಗಿದ್ದವು ಎಂಬ ವಿಶ್ಲೇಷಣೆಯಾಗಿತ್ತು. ಈ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಇರುವುದರಿಂದ ಜೆಡಿಎಸ್‌ ಮತಗಳೂ ಕಾಂಗ್ರೆಸ್‌ಗೆ ಬರಲಿವೆ ಎಂಬ ಲೆಕ್ಕಾಚಾರ ಕಾಂಗ್ರೆಸ್‌ ಹಾಕಿದೆ.ಕ್ಷೇತ್ರದ ಒಟ್ಟು 260 ಮತಗಟ್ಟೆಗಳಲ್ಲೂ ಬಹುತೇಕ 68ರಿಂದ 72ರ ವರೆಗೆ ಮತದಾನವಾಗಿದೆ. ಅದರಲ್ಲೂ ಕಾಂಗ್ರೆಸ್‌ ಪ್ರಬಲವಾಗಿರುವ ಏರಿಯಾಗಳಲ್ಲಿ ಹೆಚ್ಚು ಮತದಾನವಾಗಿರುವುದು ನಮಗೆ ಲಾಭವೇ ಹೆಚ್ಚು ಎಂಬುದು ಕಾಂಗ್ರೆಸ್‌ನ ಲೆಕ್ಕ.

ಕೈಗೆ ಒಳ ಹೊಡೆತ: ಆದರೆ, ಕಾಂಗ್ರೆಸ್‌ ಲೆಕ್ಕಾಚಾರ ಬುಡಮೇಲಾಗಿ, ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಮತ ಪಡೆಯಲಿವೆ ಎಂಬ ಲೆಕ್ಕಾಚಾರ ಬಿಜೆಪಿಯವರು ಮಾಡುತ್ತಿದ್ದಾರೆ. ಕಾಂಗ್ರೆಸ್‌, ಜೆಡಿಎಸ್‌ ಎರಡೂ ಪಕ್ಷಗಳಲ್ಲಿ ಬಿಜೆಪಿ ಅಭ್ಯರ್ಥಿ ಉತ್ತಮ ಸ್ನೇಹಿತರನ್ನು ಹೊಂದಿದ್ದಾರೆ. ಚುನಾವಣೆ ಘೋಷಣೆಯಾದಾಗಿನಿಂದ, ಮತದಾನ ಪ್ರಕ್ರಿಯೆ ಮುಗಿಯುವರೆಗೂ ಅವರೊಂದಿಗೆ ಸಂಪರ್ಕದಲ್ಲಿದ್ದು, ಬಿಜೆಪಿ ಪರವಾಗಿ ಕೆಲಸ ಮಾಡಲು ಗುಪ್ತ ಒಪ್ಪಂದ ಆಗಿತ್ತು ಎಂಬ ಮಾಹಿತಿ ಬಿಜೆಪಿ ವಲಯದಿಂದ ಹೊರ ಬಿದ್ದಿವೆ. ಮೇಲಾಗಿ, ಬಾದಾಮಿ ತಾಲೂಕಿನ ವ್ಯಕ್ತಿ, 4ನೇ ಬಾರಿ ಲೋಕಸಭೆಗೆ ಸ್ಪರ್ಧಿಸಿದ್ದು, ಸ್ಥಳೀಯರೆಂಬ ಕಾಳಜಿ-ಪ್ರತಿಷ್ಠೆಯೂ ಈ ಚುನಾವಣೆಯಲ್ಲಿ ಹೆಚ್ಚಿತ್ತು ಎಂಬ ಕೆಲವರ ಅಭಿಪ್ರಾಯ.

ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ, ಗದ್ದಿಗೌಡರಿಗೆ ಲಾಭ ತಂದುಕೊಡಲಿದೆ ಎಂದೂ ಹೇಳಲಾಗುತ್ತಿದೆ. ಆದರೆ, ಈ ಕ್ಷೇತ್ರದಲ್ಲಿ ಜಾತಿ ರಾಜಕಾರಣವೇ ಪ್ರತಿ ಬಾರಿ ಮೇಲುಗೈ ಸಾಧಿಸುತ್ತ ಬಂದಿದೆ. ಕುರುಬ-ವಾಲ್ಮೀಕಿ ಇಲ್ಲಿ ಪ್ರಭಲ ಸಮಾಜಗಳು. ಕುರುಬ ಸಮಾಜ ಸದಾ ಕಾಂಗ್ರೆಸ್‌ನೊಂದಿಗಿದ್ದರೆ, ವಾಲ್ಮೀಕಿ ಬಿಜೆಪಿಗೆ ನಿಷ್ಠೆ ತೋರಿಸಿದ ಉದಾಹರಣೆ ಇವೆ. ಎರಡೂ ಸಮಾಜದ ಮತಗಳೇ ಇಲ್ಲಿ 1 ಲಕ್ಷ ದಾಟುತ್ತವೆ. ಜತೆಗೆ ಪಂಚಮಸಾಲಿ, ಗಾಣಿಗ, ಮುಸ್ಲಿಂ, ದಲಿತ ಹಾಗೂ ನೇಕಾರ, ಉಪ್ಪಾರ ಮತದಾರರು ಹಲವು ಗ್ರಾಮಗಳಲ್ಲಿ ನಿರ್ಣಾಯರಾಗಿದ್ದಾರೆ. ಮುಸ್ಲಿಂ, ದಲಿತ ಮತಗಳು ಇಭ್ಭಾಗ ಮಾಡುವ ಪ್ರಯತ್ನಗಳೂ ನಡೆದಿದ್ದವು. ಅವು ವಿಭಜನೆಯಾಗಿದ್ದರೆ, ಕಾಂಗ್ರೆಸ್‌ಗೆ ಒಂದಷ್ಟು ಹಿನ್ನಡೆ ಎಂಬ ಲೆಕ್ಕಾಚಾರದ ಮಾತು ಕೇಳಿ ಬಂದಿವೆ.

ಇಲ್ಲಿ ಬಣ ರಾಜಕೀಯ ಕೇವಲ ಕಾಂಗ್ರೆಸ್‌ಗೆ ಸೀಮಿತವಾಗಿಲ್ಲ. ಬಿಜೆಪಿಯಲ್ಲೂ ಅದು ಪ್ರತಿಷ್ಠೆ ಯಾಗಿದೆ. ಗುಳೇದಗುಡ್ಡ, ಕೆರೂರ, ಬಾದಾಮಿ ಮೂರು ಪಟ್ಟಣಗಳು ಕ್ಷೇತ್ರ ವ್ಯಾಪ್ತಿಯಲ್ಲಿದ್ದು, ಬಾದಾಮಿ-ಗುಳೇದಗುಡ್ಡದ ರಾಜಕೀಯ ಬೇರೆ ಬೇರೆಯಾಗೇ ಇದೆ. ಇದು ಬಿಜೆಪಿಗೆ ಒಂದಷ್ಟು ಮತಗಳ ಕೊರತೆ ತಂದರೂ ಅಚ್ಚರಿಯಿಲ್ಲ ಎಂಬ ಮಾತಿದೆ.

ಸಿದ್ದು ಕ್ಷೇತ್ರ:

ಈ ಕ್ಷೇತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕ. ಹೀಗಾಗಿ ಸತತ ಮೂರು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್‌ಗೆ, ಮತ್ತೆ ಅಧಿಕಾರ ಕೊಡಿಸಬೇಕು ಎಂಬುದು ಅವರ ಪ್ರತಿಷ್ಠೆಯಾಗಿತ್ತು. ಅದಕ್ಕಾಗಿಯೇ ಸ್ವತಃ ಅಳೆದು-ತೂಗಿ, ಲಿಂಗಾಯತ ಮಹಿಳೆಗೆ ಅವರು ಟಿಕೆಟ್ ಕೊಡಿಸಿದ್ದರು. ಜತೆಗೆ ತಮ್ಮ ಸ್ವಸಮಾಜದ ಮತಗಳು ಹೆಚ್ಚಿಗೆ ಇರುವ ಪ್ರದೇಶಗಳಲ್ಲಿ ಅವರು ಪ್ರಚಾರವೂ ನಡೆಸಿದ್ದರು. ಅಲ್ಲದೇ ಕೇವಲ 10 ತಿಂಗಳಲ್ಲಿ ಬಾದಾಮಿ ಕ್ಷೇತ್ರಕ್ಕೆ 781 ಕೋಟಿ ಅನುದಾನ ತಂದಿದ್ದಾಗಿ, 3 ಬಾರಿ ಸಂಸದರಾಗಿರುವ ಗದ್ದಿಗೌಡರು ಬಾದಾಮಿಗೆ ಏನು ಮಾಡಿದ್ದಾರೆಂಬ ವೈಫಲ್ಯದ ಮಾತು ಹೇಳಿ, ಮತ ಸೆಳೆಯುವ ಪ್ರಯತ್ನ ಮಾಡಿದ್ದರು. ಈ ಅಂಶಗಳು, ಒಂದಷ್ಟು ಮತಗಳು, ಕಾಂಗ್ರೆಸ್‌ನತ್ತ ವಾಲಲು ಕಾರಣವಾಗಲಿವೆ ಎಂಬ ಚರ್ಚೆಯೂ ನಡೆಯುತ್ತಿದೆ.
ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.