ಕಾಂಗ್ರೆಸ್‌ನಿಂದ ಚುನಾವಣೆ ಗಿಮಿಕ್‌:ತೇರದಾಳ ಶಾಸಕ ಸಿದ್ದು ಸವದಿ

ಡಿಕೆಶಿ, ಉಮಾಶ್ರೀ ಅವರಿಗೆ ನೇಕಾರಿಕೆ ಬರುತ್ತದೆಯೇ?

Team Udayavani, Jul 20, 2021, 5:26 PM IST

Udayavani Kannada Newspaper

ಬನಹಟ್ಟಿ: 5 ದಶಕಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್‌ ಪಕ್ಷ ಇದೀಗ ವಿಪಕ್ಷದಲ್ಲಿದ್ದಾಗ ನೇಕಾರರ ನೆನಪಿನೊಂದಿಗೆ ಚುನಾವಣೆ ಗಿಮಿಕ್‌ ಮಾಡುತ್ತಿದೆ. ಇವೆಲ್ಲವೂ ನೇಕಾರರಿಗೆ ಅರಿವಾಗುತ್ತದೆ. ಅಧಿಕಾರದಲ್ಲಿದಾಗಲೇ ನೇಕಾರ ಸಮುದಾಯಕ್ಕೆ ಏನೂ ನೀಡದ ಕಾಂಗ್ರೆಸ್‌ ಈಗೇನು ಮಾಡಲು ಸಾಧ್ಯ. ಬಿಜೆಪಿಯಿಂದಲೇ ನೇಕಾರರ ಸಂಕಷ್ಟಗಳ ಪರಿಹಾರವಾಗುತ್ತಿವೆ ಎಂದು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ತೇರದಾಳ ಶಾಸಕ ಸಿದ್ದು ಸವದಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.

ಬನಹಟ್ಟಿಯ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೇರದಾಳ ಕ್ಷೇತ್ರದಲ್ಲಿ ನೇಕಾರರೊಂದಿಗಿನ ಸಂವಾದ ನಡೆಸಲು ಆಗಮಿಸಿದ್ದು, ಕಾಂಗ್ರೆಸ್‌ನ ಪ್ರಚಾರಕ್ಕೆ ಹೊರತು ನೇಕಾರರ ಕಳಕಳಿ ಹೊತ್ತು ಬಂದಿಲ್ಲ. ಆಡಳಿತ ಪಕ್ಷದಲ್ಲಿದ್ದಾಗಲೇ ಇಂದಿಗೂ ನೇಕಾರರ ಪರ ಧ್ವನಿ ಎತ್ತುತ್ತಿದ್ದೇನೆ. ಒಂದೇ ಒಂದು ಸಲವಾದರೂ ನನ್ನೊಂದಿಗೆ ಧ್ವನಿಗೂಡಿಸಿದ್ದರೆ ನೇಕಾರರ ನಿಜವಾದ ಕಳಕಳಿ ಎನ್ನಬಹುದು. ಆಡಳಿತ ಪಕ್ಷದಲ್ಲಿರುವ ನಾವೇ ನಾಲ್ಕೈದು ಶಾಸಕರು ನಿತ್ಯ ನೇಕಾರರ ಸಮಸ್ಯೆಗಳಿಗೆ ಧ್ವನಿಯಾಗಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿದೆ. ಈ ಸಂವಾದ ಬದಲಾಗಿ ಕಲಾಪದಲ್ಲಿ ಸಮಸ್ಯೆ ಪರಿಹರಿಸಿ ಎಂದು ಸವದಿ ತೀಕ್ಷ್ಣವಾಗಿ ಡಿಕೆಶಿಗೆ ಟಾಂಗ್‌ ನೀಡಿದರು.

ಒಂದೇ ಒಂದು ಉದಾಹರಣೆ ನೀಡಲಿ: ಪಾವರ್‌ಲೂಮ್‌ ನಿಗಮದ ಅಧ್ಯಕ್ಷನಿದ್ದಾಗ ವಿದ್ಯಾವಿಕಾಶ ಯೋಜನೆಯಲ್ಲಿ ಶೇ.20 ರಷ್ಟು ಬಟ್ಟೆ ಖರೀದಿಯಲ್ಲಿ ಹೆಚ್ಚಳ ಮಾಡಿತ್ತು. ಇದನ್ನು ರದ್ದು ಮಾಡಿದ್ದೇ ಕಾಂಗ್ರೆಸ್‌. ಸಾಲ ಮನ್ನಾ, ಬಡ್ಡಿ ಮನ್ನಾ, ರಿಯಾಯ್ತಿ ಸಾಲ, 1.25 ವಿದ್ಯುತ್‌ ಸಬ್ಸಿಡಿ ಹಾಗು ಶೇ.1 ಮತ್ತು 3 ಬಡ್ಡಿ ಆಕರಣೆ ನೇಕಾರನಿಗೆ ಸಾಲ ಬಿಜೆಪಿ ಸರ್ಕಾರದಲ್ಲಿದ್ದಾಗಲೇ ಮಾಡಿದೆ. 2 ಮಗ್ಗದ ಸಬ್ಸಿಡಿ ಜವಳಿ ಆಶ್ರಯ ಬಡನೇಕಾರಿಕೆ ಪುನರ್‌ ಪ್ರಾರಂಭ, ಸಂಧ್ಯಾ ಸುರಕ್ಷಾ, ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ “ನೇಕಾರ ಸಮ್ಮಾನ ಯೋಜನೆ’ಯಡಿ 2 ಸಾವಿರ ಮತ್ತು 3 ಸಾವಿರ ಸಹಾಯ ಧನ ಮಾಡಿದ್ದು ಯಡಿಯೂರಪ್ಪನವರ ಸರ್ಕಾರ. ಇವೆಲ್ಲವಿದ್ದಾಗ ಕಾಂಗ್ರೆಸ್‌ನ ಅವಧಿಯಲ್ಲಿ ನೇಕಾರರಿಗೆ ರೂಪಿಸಿದ ಸಹಾಯವನ್ನು ವೇದಿಕೆ ಮೂಲಕ ಒಂದೇ ಒಂದು ಉದಾಹರಣೆ ನೀಡಲಿ ಎಂದು ಸವದಿ ಹೇಳಿದರು.

ನಿಗಮ ಅವನತಿಗೆ ಕಾಂಗ್ರೆಸ್‌ ಕಾರಣ:
ರಾಜ್ಯದಲ್ಲಿ ಕಳೆದ 5 ವರ್ಷ ಕಾಂಗ್ರೆಸ್‌ ನಲ್ಲಿದ್ದಾಗ 32.65 ಕೋಟಿ ರೂ. ಗಳಷ್ಟು ಕೆಎಚ್‌ಡಿಸಿ ನಿಗಮವನ್ನು ಹಾನಿ ಮಾಡಿ ಅವನತಿಗೆ ತಂದಿದ್ದಾರೆ. ಇದೀಗ ಪುನಶ್ಚೇತನಗೊಳ್ಳುತ್ತಿದೆ. ಎಂ.ಡಿ. ಲಕ್ಷ್ಮೀನಾರಾಯಣ ಅವರನ್ನು ಬೆಳಕಿಗೆ ತಂದಿದ್ದೇ ಬಿಜೆಪಿ. ಇದೀಗ ಪಕ್ಷಕ್ಕೆ ದ್ರೋಹ ಬಗೆದು ಅಧಿಕಾರದ ಸ್ವಾರ್ಥಕ್ಕಾಗಿ ಕಾಂಗ್ರೆಸ್‌ಗೆ ಹೋಗಿದ್ದಾರೆ. ಡಿಕೆಶಿ, ಉಮಾಶ್ರೀ ಅವರಿಗೆ ನೇಕಾರಿಕೆ ಬರುತ್ತದೆಯೇ? ನೇಕಾರ ಕುಲದಿಂದ ಬಂದರೆ ನೇಕಾರಿಕೆ ಬಂದಂತೆಯೇ?
ಹಾಗಿದ್ದಲ್ಲಿ ಸಚಿವರಾಗಿ, ಮಾಜಿ ಸಿಎಂ ಸಿದ್ದರಾಮಯ್ಯನವರ ಬಲಗೈ ಬಂಟರಾಗಿ ಕೆಲಸ ಮಾಡುವ ಸಂದರ್ಭ ನೇಕಾರರಿಗೆ ಯಾವ ಯೋಜನೆ ಜಾರಿ ತಂದಿದ್ದೀರಿ ಎಂದು ಉಮಾಶ್ರೀ ಅವರನ್ನು ಸವದಿ ಪ್ರಶ್ನಿಸಿದರು. ನಗರಸಭಾಧ್ಯಕ್ಷ ಶ್ರೀಶೈಲ ಬೀಳಗಿ, ರಾಜು ಅಂಬಲಿ, ಮಲ್ಲಿಕಾರ್ಜುನ ಬಾಣಕಾರ, ಜಿ.ಎಸ್‌. ಗೊಂಬಿ, ಮಹಾದೇವ ಮುನ್ನೋಳ್ಳಿ, ಸಿದ್ರಾಮಪ್ಪ ಸವದತ್ತಿ, ಬಸವರಾಜ ತೆಗ್ಗಿ, ನಾರಾಯಣ ಮಾಲಪಾನಿ, ಹಟ್ಟಿ ಸೇರಿದಂತೆ ಅನೇಕ ನೇಕಾರ ಮುಖಂಡರಿದ್ದರು.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.