ಕಾಂಗ್ರೆಸ್‌ನಿಂದ ಚುನಾವಣೆ ಗಿಮಿಕ್‌:ತೇರದಾಳ ಶಾಸಕ ಸಿದ್ದು ಸವದಿ

ಡಿಕೆಶಿ, ಉಮಾಶ್ರೀ ಅವರಿಗೆ ನೇಕಾರಿಕೆ ಬರುತ್ತದೆಯೇ?

Team Udayavani, Jul 20, 2021, 5:26 PM IST

Udayavani Kannada Newspaper

ಬನಹಟ್ಟಿ: 5 ದಶಕಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್‌ ಪಕ್ಷ ಇದೀಗ ವಿಪಕ್ಷದಲ್ಲಿದ್ದಾಗ ನೇಕಾರರ ನೆನಪಿನೊಂದಿಗೆ ಚುನಾವಣೆ ಗಿಮಿಕ್‌ ಮಾಡುತ್ತಿದೆ. ಇವೆಲ್ಲವೂ ನೇಕಾರರಿಗೆ ಅರಿವಾಗುತ್ತದೆ. ಅಧಿಕಾರದಲ್ಲಿದಾಗಲೇ ನೇಕಾರ ಸಮುದಾಯಕ್ಕೆ ಏನೂ ನೀಡದ ಕಾಂಗ್ರೆಸ್‌ ಈಗೇನು ಮಾಡಲು ಸಾಧ್ಯ. ಬಿಜೆಪಿಯಿಂದಲೇ ನೇಕಾರರ ಸಂಕಷ್ಟಗಳ ಪರಿಹಾರವಾಗುತ್ತಿವೆ ಎಂದು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ತೇರದಾಳ ಶಾಸಕ ಸಿದ್ದು ಸವದಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.

ಬನಹಟ್ಟಿಯ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೇರದಾಳ ಕ್ಷೇತ್ರದಲ್ಲಿ ನೇಕಾರರೊಂದಿಗಿನ ಸಂವಾದ ನಡೆಸಲು ಆಗಮಿಸಿದ್ದು, ಕಾಂಗ್ರೆಸ್‌ನ ಪ್ರಚಾರಕ್ಕೆ ಹೊರತು ನೇಕಾರರ ಕಳಕಳಿ ಹೊತ್ತು ಬಂದಿಲ್ಲ. ಆಡಳಿತ ಪಕ್ಷದಲ್ಲಿದ್ದಾಗಲೇ ಇಂದಿಗೂ ನೇಕಾರರ ಪರ ಧ್ವನಿ ಎತ್ತುತ್ತಿದ್ದೇನೆ. ಒಂದೇ ಒಂದು ಸಲವಾದರೂ ನನ್ನೊಂದಿಗೆ ಧ್ವನಿಗೂಡಿಸಿದ್ದರೆ ನೇಕಾರರ ನಿಜವಾದ ಕಳಕಳಿ ಎನ್ನಬಹುದು. ಆಡಳಿತ ಪಕ್ಷದಲ್ಲಿರುವ ನಾವೇ ನಾಲ್ಕೈದು ಶಾಸಕರು ನಿತ್ಯ ನೇಕಾರರ ಸಮಸ್ಯೆಗಳಿಗೆ ಧ್ವನಿಯಾಗಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿದೆ. ಈ ಸಂವಾದ ಬದಲಾಗಿ ಕಲಾಪದಲ್ಲಿ ಸಮಸ್ಯೆ ಪರಿಹರಿಸಿ ಎಂದು ಸವದಿ ತೀಕ್ಷ್ಣವಾಗಿ ಡಿಕೆಶಿಗೆ ಟಾಂಗ್‌ ನೀಡಿದರು.

ಒಂದೇ ಒಂದು ಉದಾಹರಣೆ ನೀಡಲಿ: ಪಾವರ್‌ಲೂಮ್‌ ನಿಗಮದ ಅಧ್ಯಕ್ಷನಿದ್ದಾಗ ವಿದ್ಯಾವಿಕಾಶ ಯೋಜನೆಯಲ್ಲಿ ಶೇ.20 ರಷ್ಟು ಬಟ್ಟೆ ಖರೀದಿಯಲ್ಲಿ ಹೆಚ್ಚಳ ಮಾಡಿತ್ತು. ಇದನ್ನು ರದ್ದು ಮಾಡಿದ್ದೇ ಕಾಂಗ್ರೆಸ್‌. ಸಾಲ ಮನ್ನಾ, ಬಡ್ಡಿ ಮನ್ನಾ, ರಿಯಾಯ್ತಿ ಸಾಲ, 1.25 ವಿದ್ಯುತ್‌ ಸಬ್ಸಿಡಿ ಹಾಗು ಶೇ.1 ಮತ್ತು 3 ಬಡ್ಡಿ ಆಕರಣೆ ನೇಕಾರನಿಗೆ ಸಾಲ ಬಿಜೆಪಿ ಸರ್ಕಾರದಲ್ಲಿದ್ದಾಗಲೇ ಮಾಡಿದೆ. 2 ಮಗ್ಗದ ಸಬ್ಸಿಡಿ ಜವಳಿ ಆಶ್ರಯ ಬಡನೇಕಾರಿಕೆ ಪುನರ್‌ ಪ್ರಾರಂಭ, ಸಂಧ್ಯಾ ಸುರಕ್ಷಾ, ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ “ನೇಕಾರ ಸಮ್ಮಾನ ಯೋಜನೆ’ಯಡಿ 2 ಸಾವಿರ ಮತ್ತು 3 ಸಾವಿರ ಸಹಾಯ ಧನ ಮಾಡಿದ್ದು ಯಡಿಯೂರಪ್ಪನವರ ಸರ್ಕಾರ. ಇವೆಲ್ಲವಿದ್ದಾಗ ಕಾಂಗ್ರೆಸ್‌ನ ಅವಧಿಯಲ್ಲಿ ನೇಕಾರರಿಗೆ ರೂಪಿಸಿದ ಸಹಾಯವನ್ನು ವೇದಿಕೆ ಮೂಲಕ ಒಂದೇ ಒಂದು ಉದಾಹರಣೆ ನೀಡಲಿ ಎಂದು ಸವದಿ ಹೇಳಿದರು.

ನಿಗಮ ಅವನತಿಗೆ ಕಾಂಗ್ರೆಸ್‌ ಕಾರಣ:
ರಾಜ್ಯದಲ್ಲಿ ಕಳೆದ 5 ವರ್ಷ ಕಾಂಗ್ರೆಸ್‌ ನಲ್ಲಿದ್ದಾಗ 32.65 ಕೋಟಿ ರೂ. ಗಳಷ್ಟು ಕೆಎಚ್‌ಡಿಸಿ ನಿಗಮವನ್ನು ಹಾನಿ ಮಾಡಿ ಅವನತಿಗೆ ತಂದಿದ್ದಾರೆ. ಇದೀಗ ಪುನಶ್ಚೇತನಗೊಳ್ಳುತ್ತಿದೆ. ಎಂ.ಡಿ. ಲಕ್ಷ್ಮೀನಾರಾಯಣ ಅವರನ್ನು ಬೆಳಕಿಗೆ ತಂದಿದ್ದೇ ಬಿಜೆಪಿ. ಇದೀಗ ಪಕ್ಷಕ್ಕೆ ದ್ರೋಹ ಬಗೆದು ಅಧಿಕಾರದ ಸ್ವಾರ್ಥಕ್ಕಾಗಿ ಕಾಂಗ್ರೆಸ್‌ಗೆ ಹೋಗಿದ್ದಾರೆ. ಡಿಕೆಶಿ, ಉಮಾಶ್ರೀ ಅವರಿಗೆ ನೇಕಾರಿಕೆ ಬರುತ್ತದೆಯೇ? ನೇಕಾರ ಕುಲದಿಂದ ಬಂದರೆ ನೇಕಾರಿಕೆ ಬಂದಂತೆಯೇ?
ಹಾಗಿದ್ದಲ್ಲಿ ಸಚಿವರಾಗಿ, ಮಾಜಿ ಸಿಎಂ ಸಿದ್ದರಾಮಯ್ಯನವರ ಬಲಗೈ ಬಂಟರಾಗಿ ಕೆಲಸ ಮಾಡುವ ಸಂದರ್ಭ ನೇಕಾರರಿಗೆ ಯಾವ ಯೋಜನೆ ಜಾರಿ ತಂದಿದ್ದೀರಿ ಎಂದು ಉಮಾಶ್ರೀ ಅವರನ್ನು ಸವದಿ ಪ್ರಶ್ನಿಸಿದರು. ನಗರಸಭಾಧ್ಯಕ್ಷ ಶ್ರೀಶೈಲ ಬೀಳಗಿ, ರಾಜು ಅಂಬಲಿ, ಮಲ್ಲಿಕಾರ್ಜುನ ಬಾಣಕಾರ, ಜಿ.ಎಸ್‌. ಗೊಂಬಿ, ಮಹಾದೇವ ಮುನ್ನೋಳ್ಳಿ, ಸಿದ್ರಾಮಪ್ಪ ಸವದತ್ತಿ, ಬಸವರಾಜ ತೆಗ್ಗಿ, ನಾರಾಯಣ ಮಾಲಪಾನಿ, ಹಟ್ಟಿ ಸೇರಿದಂತೆ ಅನೇಕ ನೇಕಾರ ಮುಖಂಡರಿದ್ದರು.

ಟಾಪ್ ನ್ಯೂಸ್

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.