ಹೈಕಮಾಂಡ್‌ ನಿರ್ಣಯಿಸಿದವರೇ ಸಿಎಂ : ಸತೀಶ ಜಾರಕಿಹೋಳಿ

| ಸಿದ್ದು-ಡಿಕೆಶಿ-ಖರ್ಗೆ-ಪರಮೇಶ್ವರ ಸಹಿತ ನಾಲ್ಕಾರು ಅಪೇಕ್ಷಿತರು | ನನಗಿನ್ನೂ ವಯಸ್ಸಿದೆ: ಸತೀಶ

Team Udayavani, Jun 24, 2021, 4:34 PM IST

23 bgk-1

ಬಾಗಲಕೋಟೆ: ಮುಂದಿನ ಚುನಾವಣೆಯಲ್ಲಿ ನಾವು 113 ಸ್ಥಾನ ಗೆಲ್ಲಬೇಕು. ಅದುವೇ ನಮ್ಮ ಮುಂದಿರುವ ಗುರಿ. ಆ ಬಳಿಕ ಸಿಎಂ ಯಾರು ಆಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ನಾಲ್ಕಾರು ಜನ ಸಿಎಂ ಆಗಬೇಕೆಂಬ ಆಸೆ ಹೊಂದಿದವರಿದ್ದಾರೆ. ಅವರವರ ಬೆಂಬಲಿಗರೂ ನಮ್ಮ ನಾಯಕರೇ ಸಿಎಂ ಆಗಲಿ ಎಂದು ಹೇಳುವುದು ಸಹಜ. ಹಾಗೆ ಹೇಳುವವರನ್ನು ನಿಯಂತ್ರಿಸಲು ಆಗಲ್ಲ. ಅದು ಅವರ ಅಭಿಮಾನದ ಮಾತುಗಳು. ಯಾರೆಲ್ಲ ಏನೇ ಅಭಿಮಾನ, ಹೇಳಿಕೆ ವ್ಯಕ್ತಪಡಿಸಿದರೂ, ಕೊನೆಗೆ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ ಎಂದರು. ಮುಂದಿನ ಚುನಾವಣೆಯಲ್ಲಿ ನಾವು 113 ಸ್ಥಾನ ಗೆಲ್ಲಬೇಕು ಎಂಬುದೇ ನಮ್ಮ ಮುಂದಿನ ಗುರಿ.

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ, ನಾನು ಸಹಿತ ಎಲ್ಲರೂ ಗೆಲ್ಲಬೇಕು. ಸಿಎಂ ಯಾರು ಆಗಬೇಕು ಎಂಬುದು ಎಲ್ಲ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್‌ ನಿರ್ಧರಿಸುತ್ತದೆ. ಯಾರು, ಯಾರನ್ನೂ ಸೋಲಿಸಲು ಕೆಲಸ ಮಾಡುವುದಿಲ್ಲ. ಆ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ, ಖರ್ಗೆ, ಪರಮೇಶ್ವರ ಸಹಿತ ಎಲ್ಲರೂ ಸಿಎಂ ಆಗಬೇಕೆಂಬ ಬಯಕೆ ಅವರವರ ಬೆಂಬಲಿಗರಲ್ಲಿದೆ ಎಂದರು.

ನನಗೆ ಇನ್ನೂ ವಯಸ್ಸಿದೆ. ರಾಜಕೀಯದಲ್ಲಿ ಸಾಕಷ್ಟು ಬೆಳೆದಿದ್ದೇನೆ. ಈಗಲೂ ಬೆಳೆಯುತ್ತಿದ್ದೇನೆ. ನನಗೂ ಸಿಎಂ ಆಗಬೇಕೆಂಬ ಕನಸಿದೆ. ಆದರೆ, ಅದಕ್ಕೆ ಇನ್ನೂ ಸಾಕಷ್ಟು ಸಮಯವಿದೆ. ಈಗ ಯಾರು ಸಿಎಂ ಆಗಬೇಕೆಂದು ಬಯಸಿದ್ದಾರೋ ಅವರೆಲ್ಲ ಆಗಲಿ. ಬಳಿಕ ನಮಗೂ ಒಂದು ಕಾಲ ಬಂದಾಗ ನಾನು ಸಿಎಂ ಆಗುತ್ತೇನೆ ಎಂದರು.

ಜಮೀರ್‌ ಸಿಕ್ಸರ ಬಾರಿಸುತ್ತಾರೆ: ಸಿದ್ದರಾಮಯ್ಯ ಅವರೇ ಸಿಎಂ ಆಗಬೇಕೆಂಬ ಶಾಸಕ ಜಮೀರ್‌ ಅಹ್ಮದ ಅವರ ಹೇಳಿಕೆ ಯಿಂದ ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿಲ್ಲ. ಅವರು ಅಭಿಮಾನ- ಪ್ರೀತಿಯಿಂದ ಹಾಗೆ ಹೇಳಿದ್ದಾರೆ. ಅವರು ಯಾವಾಗಲೂ ಸಿಕ್ಸರ್‌ ಬಾರಿಸುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಪರವಾಗಿ ಮತ್ತೂಮ್ಮೆ ಸಿಕ್ಸರ್‌ ಬಾರಿಸಿದ್ದಾರೆ. ಇದಕ್ಕೆ ಗೊಂದಲದ ಲೇಪನ ಮಾಡಬೇಕಿಲ್ಲ ಎಂದು ಹೇಳಿದರು.

ಸರ್ಕಾರ ಜೀವಂತವಾಗಿಲ್ಲ: ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಕೊರೊನಾ ವಿಷಯದಲ್ಲಿ ಸಂಪೂರ್ಣ ವಿಫಲವಾಗಿದೆ. ಪ್ರವಾಹ ವೇಳೆ ಸಂತ್ರಸ್ತರಿಗೆ ಸರ್ಕಾರ ಘೋಷಣೆ ಮಾಡಿದ ಅನುದಾನ ಇನ್ನೂ ಬಂದಿಲ್ಲ. ಮನೆ ಕಟ್ಟಿಕೊಡುವುದಾಗಿ ಹೇಳಿ, ವರ್ಷವಾದ್ರೂ ಮಾಡಿಲ್ಲ. ಇಂತಹ ಅವ್ಯವಸ್ಥೆಯ ಸರ್ಕಾರ ಎಂದೂ ಇರಲಿಲ್ಲ ಎಂದರು. ತೈಲ ಬೆಲೆ ಏರಿಕೆಯಿಂದ ಇಡೀ ದೇಶದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರಕ್ಕೆ ಬಡ ಜನರ ಮೇಲೆ ಕಾಳಜಿ ಇದ್ದರೆ ತಕ್ಷಣ ಬೆಲೆ ಇಳಿಕೆ ಮಾಡಬೇಕು. ಬೆಲೆ ಇಳಿಕೆಯಲ್ಲಿ ರಾಜ್ಯ ಸರ್ಕಾರಗಳ ಪಾತ್ರ ಇರುವುದಿಲ್ಲ. ಕೇಂದ್ರ ಸರ್ಕಾರ ಸರ್ಕಾರವೇ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.