ಬಾಗಲಕೋಟೆ: ವಿರೋಧ ಪಕ್ಷದ ನಾಯಕರಿಗೆ ಜಲ ದಿಗ್ಬಂಧನ
Team Udayavani, Aug 9, 2019, 12:04 PM IST
ಬಾಗಲಕೋಟೆ: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಅವಲೋಕನಕ್ಕೆ ಆಗಮಿಸಿದ್ದ ಕೆಪಿಸಿಸಿ ನೇಮಿಸಿದ್ದ ಸಮಿತಿ ಸದಸ್ಯರಿಗೆ ಪ್ರವಾಹದ ಬಿಸಿ ತಟ್ಟಿದೆ. ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ ನೇತೃತ್ವದದಲ್ಲಿ ಕೆಪಿಸಿಸಿ ತಂಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ವೀಕ್ಷಣೆ ಮಾಡಲು ಆಗಮಿಸಬೇಕಿತ್ತು.ಆದರೆ ಹುಬ್ಬಳ್ಳಿಯಿಂದ ಆಗಮಿಸುತ್ತಿದ್ದ ಎಚ್.ಕೆ.ಪಾಟೀಲ್ ಕೊಣ್ಣೂರ ಸೇತುವೆ ಬಂದ್ ಆಗಿದ್ದರಿಂದ ಮುಂದೆ ಸಾಗಲಾರದೆ ಅಲ್ಲಿಯೆ ಉಳಿದಿದ್ದಾರೆ.
ಕೆಪಿಸಿಸಿ ತಂಡ ಬಾದಾಮಿ ಮೂಲಕ ಆಗಮಿಸಲು ಪ್ರಯತ್ನ ಮಾಡಿದರೂ ಸಹ ಬಾದಾಮಿ ಬಳಿ ಮಲಪ್ರಭಾ ನದಿಯ ಚೂಳಚಗುಡ್ಡ ಸೇತುವೆ ಕೂಡಾ ಜಲಾವೃತವಾದ ಕಾರಣ ಸಾಧ್ಯವಾಗಲಿಲ್ಲ.
ಪ್ರವಾಹ ಪರಿಸ್ಥಿತಿ ಅವಲೋಕನಕ್ಕೆ ಕೆಪಿಸಿಸಿ ತಂಡ ಬರುತ್ತದೆ ಎಂದು ಬಾಗಲಕೋಟೆ ನಗರ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲೆಯ ನಾಯಕರು ಕಾದು ಕುಳಿತಿದ್ದಾರೆ. ವಿ.ಪ.ಸದಸ್ಯ ಎಸ್.ಆರ್.ಪಾಟೀಲ, ಮಾಜಿ ಶಾಸಕರಾದ ಎಚ್.ವೈ.ಮೇಟಿ, ಜೆ.ಟಿ.ಪಾಟೀಲ, ಎಸ್.ಜಿ.ನಂಜಯ್ಯನಮಠ ಮತ್ತು ಇತರೆ ಮುಖಂಡರು ಕಾಂಗ್ರೆಸ್ ಕಚೇರಿಯಲ್ಲಿ ಕಾದು ಕುಳಿತಿದ್ದಾರೆ.
ಕೆಪಿಸಿಸಿ ತಂಡ ಇಂದು ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಾದ ಮುಧೋಳ, ಜಮಖಂಡಿ ತಾಲೂಕಿಗೆ ಭೇಟಿ ನೀಡಬೇಕಿತ್ತು. ಆದರೆ ರಸ್ತೆ ಸಂಚಾರ ಅಸ್ತವ್ಯಸ್ತವಾದ ಕಾರಣ ಇದು ಕಷ್ಟ ಸಾಧ್ಯ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!