Congressಗೆ ತೇರದಾಳದಲ್ಲಿ ಬಂಡಾಯದ ಬಿಸಿ; ಕಣದಿಂದ ಹಿಂದೆ ಸರಿದ ಶಿವಶಂಕರ ಶ್ರೀ

7 ನಾಮಪತ್ರ ಹಿಂದಕ್ಕೆ, 12 ಅಭ್ಯರ್ಥಿಗಳು ಕಣದಲ್ಲಿ

Team Udayavani, Apr 24, 2023, 7:23 PM IST

1-sadsdsa

ಶಿವಶಂಕರ ಶ್ರೀ

ರಬಕವಿ-ಬನಹಟ್ಟಿ : ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 19 ಸದಸ್ಯರ ನಾಮಪತ್ರಗಳು ಊರ್ಜಿತಗೊಂಡಿದ್ದವು. ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಸೋಮವಾರದಂದು ಯಾರೂ ನಾಮಪತ್ರ ಹಿಂಪಡೆದುಕೊಂಡಿರಲಿಲ್ಲ. ಕೊನೆಯ 30 ನಿಮಿಷಗಳಲ್ಲಿ ಏಳು ಮಂದಿ ನಾಮಪತ್ರ ಹಿಂಪಡೆದ ಕಾರಣ 12 ಮಂದಿ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಸಿದ್ದು ಸವದಿ(ಬಿಜೆಪಿ), ಸಿದ್ದು ಕೊಣ್ಣೂರ(ಕಾಂಗ್ರೆಸ್), ಡಾ. ಪದ್ಮಜೀತ ನಾಡಗೌಡ ಪಾಟೀಲ(ಪಕ್ಷೇತರ), ಸುರೇಶ ಮಡಿವಾಳರ(ಜೆಡಿಎಸ್),ಅರ್ಜುನ ಹಲಗಿಗೌಡರ(ಆಮಆದ್ಮಿ), ವಿಠ್ಠಲ ಗುಣದಾಳ(ಎಸ್‌ಡಿಪಿಐ), ಧರೆಪ್ಪ ದಾನಗೌಡ(ಕೆಆರ್‌ಎಸ್), ಅಂಬಾದಾಸ ಕಾಮೂರ್ತಿ(ಪಕ್ಷೇತರ), ಸಂತೋಷ ಹನಗಂಡಿ (ಪಕ್ಷೇತರ) ಅಬ್ಬಾಸಲಿ ಮುಲ್ಲಾ(ಆರ್‌ಪಿಐ), ಶಿವಾನಂದ ಮಹಾಲಿಂಗ ಹ್ಯಾಗಾಡಿ(ಪಕ್ಷೇತರ), ಅಡಿವೆಪ್ಪ ಉದ್ದಪ್ಪಗೋಳ (ಪಕ್ಷೇತರ) ಕಣದಲ್ಲಿ ಉಳಿದ ಅಭ್ಯರ್ಥಿಗಳಾಗಿದ್ದಾರೆ.

ಕಾಂಗ್ರೆಸ್ ಹಾಗು ಬಿಜೆಪಿ ಪಕ್ಷಗಳಿಗೆ ಬಂಡಾಯದ ಬಿಸಿ ಹೆಚ್ಚಾಗಿತ್ತು. ಈ ಬಾರಿ ಚುನಾವಣೆ ಕಣದಲ್ಲಿ ಬಿಜೆಪಿ ಬಂಡಾಯದ ಎಲ್ಲ ಅಭ್ಯರ್ಥಿಗಳೂ ನಾಮಪತ್ರ ಹಿಂಪಡೆದರೆ, ಕಾಂಗ್ರೆಸ್‌ನಿಂದ ಡಾ. ಪದ್ಮಜಿತ ನಾಡಗೌಡ ಪಾಟೀಲ ಬಂಡಾಯ ಅಭ್ಯರ್ಥಿಯಾಗಿ ಅಖಾಡಕ್ಕೆ ಸಿದ್ಧರಾಗಿದ್ದಾರೆ.

19 ಸದಸ್ಯರ ಪೈಕಿ ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ರಾಜೇಂದ್ರ ಅಂಬಲಿ, ಬಸವರಾಜ ಬಾಳಿಕಾಯಿ, ಕಿರಣಕುಮಾರ ದೇಸಾಯಿ ಹಿಂಪಡೆದರೆ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಡಾ. ಎ.ಆರ್. ಬೆಳಗಲಿ, ಎಸ್‌ಡಿಪಿಐ ಎರಡನೇ ಅಭ್ಯರ್ಥಿಯಾದ ಪರಶುರಾಮ ಮೈತ್ರಿ ಹಾಗು ಪಕ್ಷೇತರ ಅಭ್ಯರ್ಥಿ ರಾಜು ಬೀಳಗಿ ನಾಮಪತ್ರ ವಾಪಸ್ ಪಡೆದು ಕೊಂಡರು.

ಕಚೇರಿ ಮುಂದೆ ನಾಟಕೀಯ ಬೆಳವಣಿಗೆ

ಚುನಾವಣಾಧಿಕಾರಿ ಕಚೇರಿ ಮುಂಭಾಗದಲ್ಲಿ ನೂರಾರು ಕಾಂಗ್ರೆಸ್ ಹಾಗು ನಾಡಗೌಡ ಬೆಂಬಲಿಗರು ಜಮಾವಣೆಗೊಂಡು ಅಭ್ಯರ್ಥಿಗಳ ಹಿಂಪಡೆಗೆ ಮನವಿ ಸೇರಿದಂತೆ ಹಲವಾರು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿ, ಕೆಲ ಕಾಲ ಗೊಂದಲ ಸೃಷ್ಟಿಯಾಗುವಲ್ಲಿ ಕಾರಣವಾಯಿತು.

ಇದೇ ಸಂದರ್ಭ ಕಾಂಗ್ರೆಸ್ ಜಿಲ್ಲಾ ಮುಖಂಡರಾದ ವೀಣಾ ಕಾಶಪ್ಪನವರ ಆಗಮಿಸಿ ಡಾ. ನಾಡಗೌಡ ಪಾಟೀಲರನ್ನು ಕೊನೆಯ ಗಳಿಗೆಯಲ್ಲಿ ವಿನಂತಿಸಿದ ಘಟನೆಯೂ ನಡೆಯಿತು.

ಈ ಸಂದರ್ಭ ಮಾತನಾಡಿದ ಕಾಶಪ್ಪನವರ, ಎಐಸಿಸಿ ಸೇರಿದಂತೆ ರಾಜ್ಯದ ಎಲ್ಲ ಮುಖಂಡರು ಡಾ. ನಾಡಗೌಡರಿಗೆ ನಾಮಪತ್ರ ಹಿಂಪಡೆದು ಪಕ್ಷದ ಅಭ್ಯರ್ಥಿಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಇದ್ಯಾವದಕ್ಕೂ ಸ್ಪಂದಿಸದ ಕಾರಣ ಮುಂದಿನ ನಿರ್ಧಾರ ಪಕ್ಷದ ವರಿಷ್ಠರಂತೆ ನಡೆಯಲಿದೆ ಎಂದರು.

ಕಣದಿಂದ ಹಿಂದೆ ಸರಿದ ಶಿವಶಂಕರ ಶ್ರೀ
ರಾಜ್ಯ ರಾಜಕಾರಣದಲ್ಲಿ ವಿಶೇಷ ಸದ್ದು ಮಾಡಿದ್ದ ಹಳೇ ಹುಬ್ಬಳ್ಳಿಯ ವೀರ ಭೀಕ್ಷಾವ್ರತಿ ಮಠದ ಪೀಠಾಧ್ಯಕ್ಷ ಶಿವಶಂಕರ ಶ್ರೀಗಳು ತೇರದಾಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿದ್ದನ್ನು ಹಿಂಪಡೆದರು.

ನಾಮಪತ್ರ ಹಿಂಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸನ್ಯಾಸಿ ಧರ್ಮ, ಗುರು, ಪೀಠ ಹಾಗು ಸಮಾಜದ ನಂತರ ರಾಜಕೀಯವಿದೆ. ಇದನ್ನು ಗಮನಿಸದೆ ಕುರುಹಿನಶೆಟ್ಟಿ ಹಾಗು ಹಟಗಾರ ಸಮುದಾಯಗಳ ಹಿರಿಯರ, ಹಿಂದುಳಿದ ವರ್ಗ, ದೀನ ದಲಿತರ ಒತ್ತಡಕ್ಕೆ ಹಾಗು ನೇಕಾರರಿಗೆ ಆದ ಅನ್ಯಾಯ ಸಹಿಸಿಕೊಳ್ಳಲಾಗದೆ ಸ್ಪರ್ಧೆಗೆ ನಿಲ್ಲುವಂತೆ ಒತ್ತಾಯಿಸಿದ ಕಾರಣ ನಾಮಪತ್ರ ಸಲ್ಲಿಸಿದ್ದೆ, ಇದೀಗ ಕೊಲ್ಹಾಪುರ ಕಣೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳ ಆದೇಶದಂತೆ ಹಾಗು ವೈಯಕ್ತಿಕವಾಗಿ ನನಗೂ ಬೇಸರವಾದ ನಿಟ್ಟಿನಲ್ಲಿ ನಾಮಪತ್ರ ಹಿಂಪಡೆಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸ್ಪರ್ಧೆ ವೇಳೆ ಕೆಲ ಹಿರಿಯರ ಹಾಗು ಮಠಾಧೀಶ ಪ್ರಭುಗಳ ಅನುಮತಿ ಪಡೆಯದಿರುವದು ತಪ್ಪಾಗಿದೆ. ಒಟ್ಟಾರೆ ರಾಜಕೀಯ ಕ್ಷೇತ್ರ ನನಗಿಷ್ಟವಿಲ್ಲವೆಂದ ಶ್ರೀಗಳು, ಭಕ್ತರು ಹಾಗು ನನಗೆ ಬೆಂಬಲಿಸುವ ಎಲ್ಲ ಸಮಾಜಗಳ ಹಿರಿಯರಿಗೆ ತಪ್ಪು ಸಂದೇಶ ಹೋಗಬಾರದು. ತಮಗೆ ಆಯಾ ಪಕ್ಷ ಹಾಗು ಪಕ್ಷೇತರ ಮಾರ್ಗಗಳಂತೆ ರಾಜಕೀಯ ಮುನ್ನಡೆಸಲು ಸೂಚಿಸಿದ್ದೇನೆಂದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.