ಗಲಗಲಿ ಕ್ಷೇತ್ರ ಗೆದ್ದು ಬಾಗಲಕೋಟೆ ಜಿ.ಪಂ ಉಳಿಸಿಕೊಂಡ ಕಾಂಗ್ರೆಸ್!
Team Udayavani, Jun 17, 2018, 9:28 AM IST
ಬಾಗಲಕೋಟೆ: ಜಿದ್ದಾಜಿದ್ದಿನ ಕಣವಾಗಿದ್ದ ಬಾಗಲಕೋಟೆ ಜಿ.ಪಂನ ಗಲಗಲಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು ಜಿಲ್ಲಾ ಪಂಚಾಯತನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಮುಗಿಯಪ್ಪ ಬಸ್ಸಪ್ಪ ದೇವನಾಳ ಅವರು ಬಿಜೆಪಿಯ ಚನ್ನಪ್ಪ ಹಣಮಂತ ಜಮಖಂಡಿ ಅವರನ್ನು ಸೋಲಿಸಿದ್ದಾರೆ.
ಕಾಂಗ್ರೆಸ್ ಸದಸ್ಯ ವೆಂಕನಗೌಡ ತಿಮ್ಮನಗೌಡ ಪಾಟೀಲ್ ಅವರ ನಿಧನದಿಂದ ಕ್ಷೇತ್ರ ತೆರವಾಗಿತ್ತು. ಮಾಜಿ ಕಾಂಗ್ರೆಸ್ ಶಾಸಕ ಜಿ.ಟಿ.ಪಾಟೀಲ್ ಮತ್ತು ಹಾಲಿ ಬಿಜೆಪಿ ಶಾಸಕ ಮುರುಗೇಶ ನಿರಾಣಿ ಅವರಿಗೆ ಪ್ರತಿಷ್ಠೆಯ ಕಣವಾಗಿತ್ತು. ಇಬ್ಬರೂ ಭರ್ಜರಿ ಪ್ರಚಾರ ನಡೆಸಿದ್ದರು.
ಜಿ.ಪಂ ಉಳಿಸಿಕೊಂಡ ಕಾಂಗ್ರೆಸ್
36 ಸದಸ್ಯ ಬಲದ ಜಿ.ಪಂ.ನಲ್ಲಿ ಕಾಂಗ್ರೆಸ್ 17 , ಬಿಜೆಪಿ 18 ಮತ್ತು ರೈತ ಸಂಘದ ಓರ್ವ ಸದಸ್ಯರಿದ್ದರು. ಇದೀಗ ಕಾಂಗ್ರೆಸ್ನ ಸಂಖ್ಯೆ 18 ಆಗಿದ್ದು ಜಿ.ಪಂ.ಅಧ್ಯಕ್ಷೆ ವೀಣಾ ಕಾಶಪ್ಪನವರ ಹುದ್ದೆ ಉಳಿದಿದೆ. ಹಿಂದೆ ಬಿಜೆಪಿ ಸದಸ್ಯನ ಗೈರಿನಿಂದ ಕಾಂಗ್ರೆಸ್ ಅಧಿಕಾರಕ್ಕೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ