ಕೋಟೆಕಲ್ಲನಲ್ಲಿ ಅಗಸಿ ಕಟ್ಟೆ ನಿರ್ಮಾಣ


Team Udayavani, May 13, 2019, 1:50 PM IST

bag-5

ಗುಳೇದಗುಡ್ಡ: ಊರೆಂದರೆ ಅಗಸಿ ಕಟ್ಟೆ ಇರಲೇಬೇಕು. ಹಲವು ಸಂಪ್ರದಾಯಗಳಿಗೆ ಸಾಕ್ಷಿಯಾದ ಅಗಸಿ ಕಟ್ಟೆಗಳು ಇರದ ಊರೇ ಇಲ್ಲ ಎನ್ನಬಹುದು. ಆದರೆ ಇಂದು ಎಷ್ಟೋ ಹಳ್ಳಿಗಳಲ್ಲಿ ಇಂದು ಅಗಸಿ ಕಟ್ಟೆಗಳು ಕಾಣುತ್ತಿಲ್ಲ. ಇರುವ ಅಗಸಿ ಕಟ್ಟೆಗಳನ್ನು ಕೆಲವು ಕಡೆ ಸುಸ್ಥಿತಿಯಲ್ಲಿ ಇಟ್ಟುಕೊಂಡಿಲ್ಲ.

ಆದರೆ ಸಮೀಪದ ಕೋಟೆಕಲ್ಲ ಗ್ರಾಮದಲ್ಲಿ ಅಗಸಿ ಕಟ್ಟೆ ಬಿದ್ದು ಎರಡ್ಮೂರು ವರ್ಷಗಳು ಕಳೆದಿತ್ತು. ಗ್ರಾಮದ ಘನತೆಯ ಪ್ರತೀಕವಾದ ಕಟ್ಟೆಯನ್ನು ನಿರ್ಮಾಣ ಮಾಡಬೇಕು ಎಂಬುದನ್ನು ಮನಗಂಡ ಗ್ರಾಮಸ್ಥರು ಊರ ಅಗಸಿಕಟ್ಟೆಯ ಮಹತ್ವ ಮುಂದಿನ ಪೀಳಿಗೆಗೂ ಇರಲೆಂದು ಗ್ರಾಮದ ಹಿರಿಯರೆಲ್ಲರೂ ಸೇರಿ ಹಣ ಸೇರಿಸಿ ಅಗಸಿಕಟ್ಟೆ ನಿರ್ಮಿಸಿ ಮಾದರಿಯಾಗಿದ್ದಾರೆ.

ಕೋಟೆಕಲ್ಲ ಗ್ರಾಮದಲ್ಲಿ ನಡೆಯುವ ಕೆಲವು ಪ್ರಮುಖ ಕಾರ್ಯಗಳಿಗೆ ಅಗಸಿ ಕಟ್ಟೆ ಆಸರೆಯಾಗಿತ್ತು. ಮದುವೆಯಲ್ಲಿ ಬೀಗರನ್ನು ಇದುರು ಗುಮ್ಮುವುದು, ತವರು ಮನೆಯಲ್ಲಿ ಹೆರಿಗೆಯಾದ ನಂತರ ಗಂಡನ ಮನೆಗೆ ತೊಟ್ಟಿಲು ತೆಗೆದುಕೊಂಡು ಹೋಗುವುದು, ಗ್ರಾಮದಲ್ಲಿ ಯಾರಾದರೂ ಮರಣ ಹೊಂದಿದರೆ ಅವರಿಗೆ ಈ ಕಟ್ಟೆಯಿಂದಲೇ ದೈವದ ತುರಾಯಿ ತೆಗೆದುಕೊಂಡು ಹೋಗುವುದು ಸೇರಿದಂತೆ ಅನೇಕ ಸಂಪ್ರದಾಯಗಳಿಗೆ ಈ ಅಗಸಿ ಕಟ್ಟೆಯೇ ಆಸರೆಯಾಗಿತ್ತು, ಇದನ್ನೆಲ್ಲ ಮನಗಂಡ ಗ್ರಾಮಸ್ಥರು ಸ್ವಯಃ ತಾವೇ ಕಟ್ಟೆಯನ್ನು ನಿರ್ಮಿಸಿದ್ದಾರೆ. ಈ ಕಟ್ಟೆ ನಿರ್ಮಾಣಕ್ಕೆ 60 ಸಾವಿರಕ್ಕೂ ಹೆಚ್ಚು ಹಣ ವ್ಯಯಿಸಿದ್ದಾರೆ.ಗ್ರಾಮದ ಕಾರ್ಮಿಕರು ಸಹ ಒಂದು ದಿನ ಉದ್ಯೋಗಕ್ಕೆ ಹೋಗುವುದನ್ನು ಬಿಟ್ಟು ಈ ಅಗಸಿ ಕಟ್ಟೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಹತ್ತು ಹಲವು ಸಂಪ್ರದಾಯಗಳಿಗೆ ಸಾಕ್ಷಿಯಾದ ಅಗಸಿ ಕಟ್ಟೆಯನ್ನು ಕೋಟೆಕಲ್ಲ ಹಿರಿಯರ, ಗ್ರಾಮಸ್ಥರ ಕಾರ್ಯವನ್ನು ಪರ ಊರಿನ ಗ್ರಾಮಸ್ಥರು ಶ್ಲಾಘಿಸಿದ್ದಾರೆ.

ಗ್ರಾಮದ ಅಗಸಿ ಕಟ್ಟೆಯು ಸುಮಾರು ನೂರು ವರ್ಷಗಳಾಗಿದ್ದು, ಇಲ್ಲಿಂದಲೇ ಗ್ರಾಮದ ಪ್ರಮುಖ ಕಾರ್ಯಗಳು ನಡೆಯುತ್ತವೆ. ನಮ್ಮ ಮುಂದಿನ ಪೀಳಿಗೆಗೆ ಈ ಕಟ್ಟೆಯ ಮಹತ್ವ ತಿಳಿಯಲು ಪುನಃ ನಿರ್ಮಿಸಿದ್ದು, ಖುಷಿ ತರಿಸಿದೆ.
•ಗುಂಡಪ್ಪ ಕೋಟಿ, ಯುವಕ, ಕೋಟೆಕಲ್

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.