ಸಮಾವೇಶಗಳಿಂದ ಸಮಾಜಕ್ಕೆ ಬಲ: ಕನ್ಹೇರಿಯ ಮಠದ ಕಾಡಸಿದ್ಧೇಶ್ವರ ಸ್ವಾಮೀಜಿ

ಲಿಂಗಾಯತ ನೀಲಗಾರ ಸಮಾವೇಶ

Team Udayavani, Nov 20, 2022, 9:57 PM IST

1-asdasd

ರಬಕವಿ-ಬನಹಟ್ಟಿ: ಕರ್ನಾಟಕ ಲಿಂಗಾಯತ ನೀಲಗಾರ ಸಮಾಜವು ಚಿಕ್ಕ ಸಮಾಜವಾಗಿದೆ. ಇದು ಎಲ್ಲ ಸಮಾಜದ ಜೊತೆಗೆ ಹೊಂದಿಕೊಂಡು ಹೋಗವು ಸಮಾಜವಾಗಿದೆ. ಸಮಾಜದ ಸಮಾವೇಶಗಳಿಂದ ಸಮಾಜಕ್ಕೆ ಬಲ ಬರುತ್ತದೆ ಎಂದು ಕೊಲ್ಲಾಪುರ ಕನ್ಹೇರಿಯ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ನುಡಿದರು.

ಅವರು ಭಾನುವಾರ ಸಮೀಪದ ರಾಮಪುರದ ದಾನೇಶ್ವರಿ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಮಟ್ಟದ ೭ನೇ ಲಿಂಗಾಯತ ನೀಲಗಾರ ಸಮಾವೇಶ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಸಮಾಜದ ಒಳಿತಾಗಿ ಸಮಾವೇಶಗಳನ್ನು ನಡೆಸಬೇಕು. ನಮ್ಮ ಸಮಾಜದ ಸ್ಥಿತಿ ಗತಿಗಳನ್ನು ಅರಿತುಕೊಳ್ಳಲು ಸಮಾವೇಶಗಳ ಅಗತ್ಯವಿದೆ. ಸಮಾಜದ ಅಭಿವೃದ್ಧಿಗಾಗಿ, ಯುವ ಪೀಳಿಗೆಯನ್ನು ಚೆನ್ನಾಗಿ ಬೆಳೆಸುವ ನಿಟ್ಟಿನಲ್ಲಿ, ಸಮಾಜದ ಮೇಲೆ ನಡೆಯುವ ದೌರ್ಜನ್ಯ, ಆಕ್ರಮಣ, ದಬ್ಬಾಳಕೆಗಳನ್ನು ತಡೆಗಟ್ಟಲು, ಸಮಾಜದಲ್ಲಿರುವ ಜನರ ತೊಂದರೆಗಳಿಗೆ ಆಸರೆಯಾಗಲು, ನಮ್ಮ ಪರಸ್ಪರ ತೊಂದರೆಗಳನ್ನು ನಿವಾರಣೆ ಮಾಡಿಕೊಳ್ಳಲು, ಉದ್ಯೋಗ, ವ್ಯವಹಾರ ಕುರಿತು ಚರ್ಚೆ, ಚಿಂತನ ಮಂಥನ ಮಾಡಲು ಸಮಾವೇಶಗಳ ಅಗತ್ಯವಿದೆ ಎಂದು ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿ, ಸಂಘಟಿತವಾದ ಸಮಾಜ ಅಭಿವೃದ್ಧಿಯಾಗುತ್ತದೆ. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವದರಿಂದ ಸಮಾಜ ಬಲಾಢ್ಯಗೊಳ್ಳುತ್ತದೆ. ಸಂಘಟನೆಯನ್ನು ಸಮಾಜದ ಅಭಿವೃದ್ಧಿಗಾಗಿ ಮಾತ್ರ ಬಳಸಿಕೊಳ್ಳಬೇಕು. ಸಮಾಜವನ್ನು ದರ್ಬಳಕೆ ಮಾಡಿಕೊಳ್ಳಬಾರದು ಎಂದರು.

ಲಿಂಗಾಯತ ನೀಲಗಾರ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ವಿಶ್ವನಾಥ ಸೋರಗಾವಿ ಮಾತನಾಡಿ, ಲಿಂಗಾಯತ ನೀಲಗಾರ ಸಮಾಜವು ಅತ್ಯಂತ ಚಿಕ್ಕ ಸಮುದಾಯವಾಗಿದೆ. ನಾವು ನಿಜವಾದ ಅಲ್ಪ ಸಂಖ್ಯಾತರಾಗಿದ್ದೇವೆ. ನಾವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಲಿಂಗಾಯತ ನೀಲಗಾರ ಸಮಾಜ ಪ್ರಾಧಿಕಾರ ರಚನೆಯನ್ನು ಮಾಡಬೇಕು. ರಬಕವಿ ಬನಹಟ್ಟಿಯಲ್ಲಿ ಲಿಂಗಾಯತ ನೀಲಗಾರ ಸಮುದಾಯ ಭವನವನ್ನು ನಿರ್ಮಾಣ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಮಹಾಲಿಂಗಪುರದ ಸಹಜಾನಂದ ಸ್ವಾಮೀಜಿ, ಬನಹಟ್ಟಿಯ ಹಿರೇಮಠದ ಶರಣಬಸವ ಶಿವಾಚಾರ್ಯರು, ಚಿಕ್ಕಾಲಗುಂಡಿಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಉಮಾಶ್ರೀ, ಅಂಬಾದಾಸ ಕಾಮೂರ್ತಿ ಮಾತನಾಡಿದರು. ವೇದಿಕೆಯ ಮೇಲೆ ಅಶೋಕ ವಿಜಾಪುರ, ರಮೇಶ ನೀಲವಾಣಿ, ಶಿವಾನಂದ ಶಿರೋಳ, ಚಿದಾನಂದ ಕಟಗೇರಿ, ಕಲ್ಲಪ್ಪ ನೀಲವಾಣಿ, ಬಸವರಾಜ ಹನಗಂಡಿ, ಅಶೋಕ ಹೊಸೂರ, ಬಸಲಿಂಗಪ್ಪ ಜಡಿ, ಸಿದ್ದಲಿಂಗೇಶ್ವರ ಬುದ್ನಿ ಇದ್ದರು.

ರಮೇಶ ಮುಂಡಗನೂರ ಸ್ವಾಗತಿಸಿದರು. ಚಂದ್ರಕಾಂತ ಹೊಸೂರ ಮತ್ತು ಶಂಭು ಮಮದಾಪುರ ನಿರೂಪಿಸಿದರು. ಸಿದ್ದು ಜಡಿ ವಂದಿಸಿದರು. ಕಾರ್ಯಕ್ರಮದಲ್ಲಿ ಸುರೇಶ ನೀಲವಾಣಿ, ಗುರುರಾಜ ಮಮದಾಪುರ, ಅನಿಲ ಹೊಸೂರ, ಬಸವರಾಜ ಸಿದ್ದಾಪುರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕರ್ನಾಟಕ ಲಿಂಗಾಯತ ನೀಲಗಾರ ಸಮಾಜ ಬಾಂಧವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.